ಅಂಡಮಾನ್ ಜೈಲಿಗೆ ಕಳಿಸಿಬಿಡಿ ಎಂದು ಕೃಷ್ಣ ಅವರಿಗೆ ಕೇಳಿದ್ದೆ: ಕರವೇ ನಾರಾಯಣಗೌಡ
ರಾಜ್ಯದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಸಂತಾಪ ಸೂಚಿಸಿದ್ದಾರೆ. ನಾಡಿನ ಹಿರಿಯ ಚೇತನ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಅಗಲಿದ್ದಾರೆ. ಬೆಂಗಳೂರಿಗೆ ಸಿಲಿಕಾನ್ ಸಿಟಿ, ಐಟಿ ಸಿಟಿ, ಐಟಿ ರಾಜಧಾನಿ ಇತ್ಯಾದಿ ಹೆಸರುಗಳು ಬರಲು ಮುಖ್ಯ ಕಾರಣ ಎಸ್.ಎಂ.ಕೃಷ್ಣ ಅವರು ಎಂದು ನೆನೆದಿದ್ದಾರೆ.
ಕೃಷ್ಣ ಅವರು ತಮ್ಮ ದೂರದೃಷ್ಟಿತ್ವ, ಅಭಿವೃದ್ಧಿಪರ ಚಿಂತನೆಯಿಂದ ಬೆಂಗಳೂರಿನ ಚಿತ್ರವನ್ನೇ ಬದಲಾಯಿಸಿದರು. ಸಜ್ಜನರು, ಸಹೃದಯಿಯೂ ಆಗಿದ್ದ ಎಸ್.ಎಂ.ಕೃಷ್ಣ ಅಜಾತಶತ್ರುವೆಂದು ಕರೆಸಿಕೊಂಡಿದ್ದರು. ಮುಖ್ಯಮಂತ್ರಿ, ರಾಜ್ಯಪಾಲ, ಕೇಂದ್ರ ಸಚಿವ ಹೀಗೆ ತಮಗೆ ಒದಗಿ ಬಂದ ಎಲ್ಲ ಬಗೆಯ ಅಧಿಕಾರವನ್ನೂ ಜನರ ಒಳಿತಿಗೆ ಬಳಸಿಕೊಂಡರು ಎಂದು ಸ್ಮರಿಸಿದ್ದಾರೆ.

ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅತ್ಯಂತ ಕಠಿಣ ಸಮಸ್ಯೆಗಳು ತಲೆದೋರಿದ್ದವು. ವರನಟ ಡಾ.ರಾಜಕುಮಾರ್ ಅಪಹರಣ, ಕಾವೇರಿ ವಿವಾದ.. ಹೀಗೆ ಒಂದಿಲ್ಲೊಂದು ಸಮಸ್ಯೆಗಳನ್ನು ಅವರು ನಿಭಾಯಿಸಬೇಕಾಯಿತು. ಇಷ್ಟೆಲ್ಲದರ ನಡುವೆಯೂ ಅವರು ಆರ್ಥಿಕ ಕ್ಷೇತ್ರದಲ್ಲಿ ಕರ್ನಾಟಕವನ್ನು ಇಡೀ ದೇಶದಲ್ಲಿ ಮುಂಚೂಣಿಗೆ ತಂದು ನಿಲ್ಲಿಸಿದರು. ಇದು ಅವರ ಆಳವಾದ ರಾಜಕೀಯ ಪ್ರಜ್ಞೆ, ಅಧ್ಯಯನಶೀಲತೆ, ಕ್ರಿಯಾಶೀಲತೆ, ಅಪಾರವಾದ ಜ್ಞಾನವನ್ನು ತೋರಿಸುತ್ತದೆ ಎಂದು ಶ್ಲಾಘಿಸಿದ್ದಾರೆ.
ಹಲವು ಬಾರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದಾಗ ನಾನು ಗಮನಿಸಿದ್ದು ಅವರ ಸೂಕ್ಷ್ಮಗ್ರಾಹಿ ಗುಣ, ಸಂದರ್ಭವನ್ನು ಅರಿತು ನಿರ್ಧಾರ ತೆಗೆದುಕೊಳ್ಳುವ ಅವರ ರಾಜಕೀಯ ಚತುರತೆ. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ಚಳವಳಿ ಏರುಗತಿಯನ್ನು ಪಡೆದುಕೊಂಡಿತ್ತು. ಹೀಗಾಗಿ ನಾವು ಹಲವು ಬಾರಿ ಬಂಧನಕ್ಕೊಳಗಾಗಿ ಜೈಲು ಸೇರಬೇಕಾಯಿತು ಎಂದು ಕನ್ನಡ ಹೋರಾಟಗಳ ಬಗ್ಗೆ ಉಲ್ಲೇಖಿಸಿದ್ದಾರೆ.
ಒಮ್ಮೆ ಬಳ್ಳಾರಿ ಜೈಲುವಾಸವನ್ನೂ ಅನುಭವಿಸಿದೆವು. ಎಲ್ಲ ಜೈಲುಗಳನ್ನು ನೋಡಿದೆವು. ಅಂಡಮಾನ್ ಜೈಲೊಂದನ್ನು ನೋಡುವ ಆಸೆ, ಅಲ್ಲಿಗೂ ಕಳಿಸಿಬಿಡಿ ಎಂದು ಎಸ್.ಎಂ.ಕೃಷ್ಣ ಅವರಿಗೆ ಒಮ್ಮೆ ತಮಾಶೆಯಾಗಿ ಹೇಳಿದ್ದೆ. ಆದರೆ, ಅವರು ಆಡಳಿತಾತ್ಮಕವಾಗಿ ಏನೇ ತೀರ್ಮಾನ ತೆಗೆದುಕೊಂಡರೂ ಅದರಲ್ಲಿ ವೈಯಕ್ತಿಕ ಹಗೆ, ಸೇಡು ಇತ್ಯಾದಿಯನ್ನು ಎಂದಿಗೂ ಮಿಶ್ರಣ ಮಾಡುತ್ತಿರಲಿಲ್ಲ. ಹೀಗಾಗಿ ಅವರ ಮೇಲಿನ ಅಭಿಮಾನಕ್ಕೆ ಎಂದೂ ಧಕ್ಕೆಯಾಗಿರಲಿಲ್ಲ ಎಂದು ನಾರಾಯಣಗೌಡ ಹೇಳಿದ್ದಾರೆ.

ಎಸ್.ಎಂ.ಕೃಷ್ಣ ಅವರು ಇವತ್ತಿನ ದ್ವೇಷ, ಸೇಡಿನ ರಾಜಕಾರಣಕ್ಕೆ ವ್ಯತಿರಿಕ್ತವಾಗಿ ಸ್ನೇಹ, ಪ್ರೀತಿಯ ರಾಜಕಾರಣವನ್ನು ನಡೆಸಿದವರು. ಈ ಗುಣಗಳಿಗಾಗಿಯೇ ಅವರು ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಸದಾ ಸ್ಮರಣೀಯರಾಗಿರುತ್ತಾರೆ. ಎಸ್.ಎಂ.ಕೃಷ್ಣ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದೊರೆಯಲಿ. ಹೋಗಿ ಬನ್ನಿ ಸರ್, ನಿಮ್ಮ ಕೊಡುಗೆಯನ್ನು ಕರ್ನಾಟಕ ಎಂದಿಗೂ ಮರೆಯದು. ಭಾವಪೂರ್ಣ ಶ್ರದ್ಧಾಂಜಲಿಗಳು ಎಂದು ಕರವೇ ನಾರಾಯಣಗೌಡರು ಸಂತಾಪ ಸೂಚಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications