ಕರ್ನಾಟಕಕ್ಕೆ ಬಂತು 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ
ಬೆಂಗಳೂರು, ಮೇ 19; ಕರ್ನಾಟಕದಲ್ಲಿ ಲಾಕ್ಡೌನ್ ಜಾರಿಗೊಂಡ ಬಳಿಕ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಕೋವಿಡ್ ವಿರುದ್ಧದ ಲಸಿಕೆಗೆ ರಾಜ್ಯದಲ್ಲಿ ಭಾರೀ ಬೇಡಿಕೆ ಇದೆ.
ರಾಜ್ಯಕ್ಕೆ 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಆಗಮಿಸಿದೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಲಸಿಕೆ ಕೊರತೆ ಕಾರಣ ರಾಜ್ಯದಲ್ಲಿ 18-44 ವರ್ಷ ವಯೋಮಿತಿಯವರಿಗೆ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು.
ಡಾ. ಸುಧಾಕರ್ ತಮ್ಮ ಟ್ವೀಟ್ನಲ್ಲಿ, "ರಾಜ್ಯ ಸರ್ಕಾರ ನೇರವಾಗಿ ಉತ್ಪಾದಕರಿಂದ ಖರೀದಿಸುತ್ತಿರುವ ಲಸಿಕೆಗಳ ಪೈಕಿ ಇಂದು 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆಯ ಮತ್ತೊಂದು ಕಂತು ಲಭ್ಯವಾಗಿದೆ. ಈವರೆಗೂ 9,50,000 ಕೋವಿಶೀಲ್ಡ್, 1,44,000 ಕೋವ್ಯಾಕ್ಸಿನ್ ಸೇರಿ ಒಟ್ಟು 10,94,000 ಡೋಸ್ ಕಂಪನಿಗಳಿಂದ ಪೂರೈಕೆಯಾಗಿದ್ದು, ಕೇಂದ್ರ ಸರ್ಕಾರದಿಂದ ಒಟ್ಟು 1,11,24,470 ಡೋಸ್ ಪೂರೈಕೆಯಾಗಿದೆ" ಎಂದು ಮಾಹಿತಿ ನೀಡಿದ್ದಾರೆ.

18-44 ವಯೋಮಿತಿಯ ಜನರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಇದಕ್ಕಾಗಿ 2 ಕೋಟಿ ಡೋಸ್ ಕೋವಿಶೀಲ್ಡ್ ಮತ್ತು 1 ಕೋಟಿ ಡೋಸ್ ಕೊವ್ಯಾಕ್ಸಿನ್ ಖರೀದಿ ಮಾಡಲು ಲಸಿಕೆ ಉತ್ಪದನಾ ಕಂಪನಿಗಳಿಗೆ ಸರ್ಕಾರ ಹಣ ಸಂದಾಯ ಮಾಡಿದೆ.
ಕರ್ನಾಟಕದಲ್ಲಿ ಲಸಿಕೆ ಕೊರತೆ ಉಂಟಾಗಿತ್ತು. ಇದರಿಂದಾಗಿ ಸರ್ಕಾರ ಮೇ 14 ರಿಂದ 18-44 ವಯೋಮಿತಿಯ ಜನರಿಗೆ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಿತ್ತು. 45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ನೀಡಲು ಸರ್ಕಾರ ಆದ್ಯತೆ ನೀಡಿದೆ.
ರಾಜ್ಯ ಸರ್ಕಾರ ನೇರವಾಗಿ ಉತ್ಪಾದಕರಿಂದ ಖರೀದಿಸುತ್ತಿರುವ ಲಸಿಕೆಗಳ ಪೈಕಿ
— Dr Sudhakar K (@mla_sudhakar) May 18, 2021
ಇಂದು 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆಯ ಮತ್ತೊಂದು ಕಂತು ಲಭ್ಯವಾಗಿದೆ. ಈವರೆಗೂ 9,50,000 ಕೋವಿಶೀಲ್ಡ್, 1,44,000 ಕೋವ್ಯಾಕ್ಸಿನ್ ಸೇರಿ ಒಟ್ಟು 10,94,000 ಡೋಸ್ ಕಂಪನಿಗಳಿಂದ ಪೂರೈಕೆಯಾಗಿದ್ದು, ಕೇಂದ್ರ ಸರ್ಕಾರದಿಂದ ಒಟ್ಟು 1,11,24,470 ಡೋಸ್ ಪೂರೈಕೆಯಾಗಿದೆ.
ಗುಣಮುಖ ಸಂಖ್ಯೆ ಹೆಚ್ಚಳ; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಗೆ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಮೇ 24ರ ತನಕ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಅದನ್ನು ವಿಸ್ತರಣೆ ಮಾಡುವ ಕುರಿತು ಬುಧವಾರ ಸರ್ಕಾರ ತೀರ್ಮಾನವನ್ನು ಪ್ರಕಟಿಸಲಿದೆ.
ರಾಜ್ಯದಲ್ಲಿ ಹೊಸ ಪ್ರಕರಣಗಳಿಗಿಂತ ಗುಣಮುಖ ಪ್ರಮಾಣ ಹೆಚ್ಚಾಗಿದೆ. ಮೇ 18ರ ವರದಿಯಂತೆ 58,395 ಜನರು ರಾಜ್ಯದಲ್ಲಿ ಗುಣಮುಖಗೊಂಡಿದ್ದಾರೆ. ಇದು ರಾಜ್ಯದಲ್ಲಿ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತಿ ಹೆಚ್ಚು ಸಂಖ್ಯೆಯಾಗಿದೆ.
24 ಗಂಟೆಯಲ್ಲಿ ರಾಜ್ಯದಲ್ಲಿ 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಗಿಂತ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 8,676 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 31,795 ಜನರು 24 ಗಂಟೆಯಲ್ಲಿ ಗುಣಮುಖಗೊಂಡಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications