Get Updates
Get notified of breaking news, exclusive insights, and must-see stories!

Beer Price: ಬಿಯರ್ ಮಾರಾಟದಲ್ಲಿ ಭಾರೀ ಕುಸಿತ: ಬರೀ 195.27 ಲಕ್ಷ ಬಾಕ್ಸ್‌ ಸೇಲ್: ಅಬಕಾರಿ ಸಚಿವ

Year Ender 2025: ಕರ್ನಾಟಕ ಸರ್ಕಾರ ಜಾರಿಗೆ ತಂದ ಅಬಕಾರಿ ಸುಂಕದ ಏರಿಕೆ ಹಾಗೂ ಇತರ ಕಾರಣಗಳಿಂದಾಗಿ ಈ ವರ್ಷ ಬಿಯರ್ ಮಾರಾಟದಲ್ಲಿ ಕುಸಿತ ಕಂಡಿದೆ. ಅದರಲ್ಲೂ ಏಪ್ರಿಲ್‌-ಸೆಪ್ಟಂಬರ್ ವರೆಗೆ ಬಿಯರ್ ಸೇಲ್‌ನಲ್ಲಿ ಗಮನಾರ್ಹ ಇಳಿಕೆ ಆಗಿದೆ. ಸುಂಕ ಹೇರಿಕೆಯಿಂದ ಸರ್ಕಾರಕ್ಕೆ ಆದಾಯ ಹೆಚ್ಚಾಗಿದೆ. ಈ ಮಾರಾಟ ಇಳಿಕೆಗೆ ನಿಖರ ಕಾರಣಗಳನ್ನು ಅಬಕಾರಿ ಸಚಿವರೇ ತಿಳಿಸಿದ್ದಾರೆ. ಅದರ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿದೆ.

ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿದೆ ಎಂದು ಅಬಕಾರಿ ಖಾತೆ ಸಚಿವ ಆರ್.ಬಿ. ತಿಮ್ಮಾಪುರ ಅವರೇ ಸ್ವತಃ ಸೋಮವಾರ ಮಾಹಿತಿ ನೀಡಿದ್ದಾರೆ. ಕಳೆದ ವರ್ಷದ 2024ರ ಇದೇ ಅವಧಿಗೆ ಹೋಲಿಕೆ ಮಾಡಿದರೆ ಬಿಯರ್ ಮಾರಾಟದಲ್ಲಿ 2025ರಲ್ಲಿ ಶೇಕಡಾ 19.55 ರಷ್ಟು ನಕಾರಾತ್ಮಕ ಬೆಳವಣಿಗೆ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.

Karnataka Records Nearly 20 Pc Decline in Beer Sales Due to Heavy Rain and Cold Weather

2025 ಸೆಪ್ಟೆಂಬರ್ ರವರೆಗೆ ಕರ್ನಾಟಕದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್‌ಗಳು ಕಡಿಮೆ ಆಗಿದೆ. ಇದು ಶೇಕಡಾ 19.55 ರಷ್ಟು ಕಡಿಮೆ. ಇದಕ್ಕೆ ಕೆಲವು ಪ್ರಮುಖ ಕಾರಣ ಇಲ್ಲಿವೆ ಎಂದು ಚಳಿಗಾಲ ಅಧಿವೇಶನದಲ್ಲಿ ಕೇಳದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ವಿಧಾನ ಪರಿಷತ್ತಿನ ನಿಯಮ 330 ರ ಅಡಿಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಎಂಎಲ್‌ಸಿ ಕೆ.ಎಸ್. ನವೀನ್ ಅವರು ಅಬಕಾರಿ ಇಲಾಖೆಗೆ ಸಂಬಂಧಿಸಿದ ಪ್ರಶ್ನೆ ಕೇಳಿದರು. ಇದಕ್ಕೆ ಲಿಖಿತ ಉತ್ತರದಲ್ಲಿ ಸಚಿವರು ಉತ್ತರಿಸಿದರು.

2025ರಲ್ಲಿ ಬಿಯರ್ ದರ ನಿರಂತರ ಹೆಚ್ಚಳ..!

ಈ ವರ್ಷ ರಾಜ್ಯದಲ್ಲಿ ಭಾರೀ ಮಳೆ ದಾಖಲಾಗಿದೆ. ಅದರಿಂದ ಶೀತ ವಾತಾವರಣ ಉಂಟಾಗಿದ್ದು, ಇದು ಸಹ ಬಿಯರ್ ಮಾರಾಟ ಕುಸಿತವಾಗಲು ಪ್ರಮುಖ ಕಾರಣವೆಂದು ಅವರು ತಿಳಿಸಿದರು. ಮೂಲಗಳ ಪ್ರಕಾರ, ಅಬಕಾರ ಸುಂಕ ಹೆಚ್ಚಿಸಿದ್ದರಿಂದಲೂ ಸಹ ಬಿಯರ್ ಮಾರಾಟದಲ್ಲಿ ಇಳಿಕೆ ಆಗಿದೆ. ರಾಜ್ಯದಲ್ಲಿ ನಿರಂತರವಾಗಿ ಬಿಯರ್ ಬೆಲೆ ಹೆಚ್ಚಾಗಿದೆ. 180 ರೂಪಾಯಿಗೆ ಸಿಗುತ್ತಿದ್ದ ಒಂದು ಬಿಯರ್ ದರ 250 ರೂಪಾಯಿಗೆ ಹೆಚ್ಚಾಗಿದೆ. ಕಡಿಮೆ ಬೆಲೆಯ 110 ರೂಪಾಯಿ ಬಿಯರ್ 170-180 ರೂಪಾಯಿಗೆ ಏರಿಕೆ ಕಂಡಿದೆ. ಹೀಗೆ ದರ ಹೆಚ್ಚಿದ್ದು ಸಹ ಪ್ರಮುಖ ಕಾರಣ ಎನ್ನಲಾಗಿದೆ.

ಸದನದಲ್ಲಿ ಮುಂದುವರಿದು ಮಾತನಾಡಿದ ಸಚಿವ ಆರ್‌.ಬಿ.ತಿಮ್ಮಾಪುರ ಅವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಮದ್ಯ ಗ್ರಾಹಕರು ಲಿವರ್ ಸಿರೋಸಿಸ್/ಕಾಮಾಲೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಕಳವಳ ವ್ಯಕ್ತಪಡಿಸಿದ ಅವರು, ನಮ್ಮ ಅಬಕಾರಿ ಇಲಾಖೆಯ ಆದಾಯದ ಕನಿಷ್ಠ 20 ಪ್ರತಿಶತವನ್ನು ಅವರ ಉತ್ತಮ ಚಿಕಿತ್ಸೆಗಾಗಿ ವಿನಿಯೋಗಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದರು.

ಅಬಕಾರಿ ಇಲಾಖೆಯಿಂದ ಉತ್ಪತ್ತಿಯಾಗುವ ಆದಾಯವನ್ನು ರಾಜ್ಯದ ಏಕೀಕೃತ ನಿಧಿಯಲ್ಲಿ ಠೇವಣಿ ಇಡಲಾಗುತ್ತದೆ. ಸರ್ಕಾರ ತಾನು ಬಜೆಟ್‌ನಲ್ಲಿ ಅನುಮೋದನೆ ನೀಡುವ ಕಾರ್ಯಕ್ರಮಗಳಿಗೆ ಆ ಹಣ ವ್ಯಯಿಸಲಾಗುವುದು. ಇತರ ಯಾವುದೇ ಉದ್ದೇಶಕ್ಕಾಗಿ ಹಣವನ್ನು ಮೀಸಲಿಡಲು ಯಾವುದೇ ನಿರ್ದಿಷ್ಟ ವ್ಯವಸ್ಥೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಸಚಿವರ ಪ್ರಕಾರ, ಸರ್ಕಾರವು ಈಗಾಗಲೇ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್‌ನಂತಹ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಮೂಲಕ ಸಾರ್ವಜನಿಕ ಆರೋಗ್ಯ ಕೇಂದ್ರಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಮೂಲಕ ಜನರಿಗೆ ಒಟ್ಟು ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಸೇವೆ ನೀಡುತ್ತಿದೆ. ಇನ್ನೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಬೇಡಿಕೆಯ ಆಧಾರದ ಮೇಲೆ ಬಜೆಟ್‌ನಲ್ಲಿ ಅಗತ್ಯ ಅನುದಾನ ಸಹ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಕಳಪೆ ಮದ್ಯ ಮಾರಾಟ ಶಾಪ್ ನಿಷೇಧ, ಕ್ರಮ

ರಾಜ್ಯದಲ್ಲಿ ಕಳಪೆ ಗುಣಮಟ್ಟದ ಮದ್ಯ ಮಾರಾಟ ಮತ್ತು ಹೊಸ ಮದ್ಯದಂಗಡಿಗಳ ನಿಷೇಧದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಜೋರಾಗಿದೆ. ಇಂತಹ ಕಳಪೆ ಮದ್ಯ ಮಾರಾಟ, ಅಂಗಡಿಗಳ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಪ್ರತಿ ಜಿಲ್ಲೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅನ್ನು ನೇಮಿಸಬೇಕು ಎಂದು ಹಲವು ಒತ್ತಾಯ ಮಾಡಿದ್ದಾರೆ.

ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಬೋಸರಾಜು ಅವರು ರಾಜ್ಯ ಸರ್ಕಾರದ ನಿಲುವನ್ನು ಮತ್ತಷ್ಟು ಸ್ಪಷ್ಟೀಕರಿಸಿದರು. ಆರೋಗ್ಯ ಚಿಕಿತ್ಸೆ, ನಕಲಿ ಮದ್ಯದಂಗಡಿಗಳ ವಿರುದ್ಧ ಕ್ರಮಗಳಿಂದ ಮದ್ಯ ಸೇವನೆಯನ್ನು ಪ್ರೋತ್ಸಾಹಿಸುತ್ತಿಲ್ಲ. ಮದ್ಯದ ಹಾನಿಗಳ ವಿರುದ್ಧ ಜಾಗೃತಿ ಅಭಿಯಾನದ ಭಾಗವಾಗಿ ಸಕ್ರಿಯವಾಗಿ ನಡೆಸಲಾಗುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಮದ್ಯ ಸೇವನೆಯನ್ನು ನಿಯಂತ್ರಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+