Heatwave: ಶಾಖದ ಅಲೆಗೆ ಕರ್ನಾಟಕ ತತ್ತರ; ಐದು ವಾರದಲ್ಲಿ ಇಬ್ಬರು ಸಾವು
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಿಸಿಲು ಜನರನ್ನು ತೀವ್ರವಾಗಿ ಬಾಧಿಸುತ್ತಿದೆ. ಮಾರ್ಚ್ 1ರಿಂದ ಏಪ್ರಿಲ್ 3 ರವರೆಗೆ ರಾಜ್ಯದಲ್ಲಿ 521 ಶಂಕಿತ ಹೀಟ್ಸ್ಟ್ರೋಕ್ ಪ್ರಕರಣಗಳು ವರದಿಯಾಗಿದ್ದು, ಬಿಸಿಲಿನ ತೀವ್ರತೆಗೆ ಇಬ್ಬರು ಸಾವನ್ನಪ್ಪಿರುವ ವರದಿಯಾಗಿದೆ.
ಬಾಗಲಕೋಟೆ, ಕಲಬುರಗಿ ಜಿಲ್ಲೆಯಲ್ಲಿ ತಲಾ ಒಂದು ಸಾವು ವರದಿಯಾಗಿದೆ. ಆರೋಗ್ಯ ಇಲಾಖೆ ಅಂಕಿಅಶಂಗಳ ಪ್ರಕಾರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಚಿತ್ರದುರ್ಗ ಮತ್ತು ಮಂಡ್ಯದಲ್ಲಿ ಕ್ರಮವಾಗಿ 102, 69, 56 ಮತ್ತು 54 ಹೀಟ್ ಸ್ಟ್ರೋಕ್ (ಶಾಖಾಘಾತ) ಪ್ರಕರಣಗಳು ವರದಿಯಾಗಿವೆ.

ಬೆಂಗಳೂರಿನಲ್ಲಿ ತೀವ್ರ ತಾಪಮಾನ ಇದ್ದರೂ, ಯಾವುದೇ ಶಾಖಾಘಾತದ ಪ್ರಕರಣ ವರದಿಯಾಗಿದ್ದ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ ರಂದೀಪ್ ಮಾಹಿತಿ ನೀಡಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಅಧಿಕಾರಿಗಳ ಸಭೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಆಸ್ಪತ್ರೆ ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಹೀಟ್ಸ್ಟ್ರೋಕ್ ಪ್ರಕರಣಗಳನ್ನುಸರಿಯಾದ ಸಮಯದಲ್ಲಿ ವರದಿ ಮಾಡಿ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆ ನಿಡಿದ್ದಾರೆ.
ಬಿಸಿಲಿನಿಂದ ಉಂಟಾದ ಸೆಳೆತ ಮತ್ತು ಬಳಲಿಕೆಯಂತಹ ಪ್ರಾಥಮಿಕ ದೂರುಗಳಿಗೂ ಚಿಕಿತ್ಸೆ ನೀಡಲು ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೀಟ್ಸ್ಟ್ರೋಕ್-ನಿರ್ವಹಣಾ ಕೊಠಡಿಗಳನ್ನು ಸ್ಥಾಪಿಸಲಾಗಿದೆ.
ಬೆಂಗಳೂರಿನಲ್ಲಿ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ, ಇಂದಿರಾನಗರದ ಸರ್ ಸಿವಿ ರಾಮನ್ ಜನರಲ್ ಆಸ್ಪತ್ರೆ ಮತ್ತು ಜಯನಗರ ಜನರಲ್ ಆಸ್ಪತ್ರೆಯಲ್ಲಿ ಇಂತಹ ಕೊಠಡಿಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಐದು ಹಾಸಿಗೆಗಳು ಮತ್ತು ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಎರಡು ಹಾಸಿಗೆಗಳನ್ನು ಹೀಟ್ಸ್ಟ್ರೋಕ್ ಪ್ರಕರಣಗಳಿಗೆ ಮೀಸಲಿಡಲಾಗಿದೆ, ಜೊತೆಗೆ ಆಂಬ್ಯುಲೆನ್ಸ್ಗಳನ್ನು ಸಜ್ಜಾಗಿರಿಸಲಾಗಿದೆ ಎಂದು ಕೂಡ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಾಸ್ತಿ ತಂಪಾದ ನೀರು ಕುಡಿಯಬೇಡಿ
ಜಾಸ್ತಿ ಬಿಸಿಲು ಇದೆ ಎಂದು ಜಾಸ್ತಿ ತಂಪಾದ ನೀರು ಕುಡಿಯಬೇಡಿ ಎಂದು ತಜ್ಞರು ಸಲಹೆ ನೀಡಿದ್ದಾರೆ. ಜಾಸ್ತಿ ತಣ್ಣಗಿರುವ ನೀರು ಕುಡಿಯುವುದರಿಂದ ರಕ್ತನಾಳಗಳ ಸಂಕೋಚನ ಉಂಟಾಗಬಹುದು. ದೇಹವು ಹೈಡ್ರೇಟ್ ಮಾಡಲು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ. ಆದ್ದರಿಂದ ಜಾಸ್ತಿ ತಂಪಾದ ನೀರು ಕುಡಿಯುವುದನ್ನು ತಪ್ಪಿಸುವಂತೆ ಸೂಚನೆ ನೀಡಿದ್ದಾರೆ.
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದ ಕೂಡ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ. ಇದು ದೇಹದ ಮೇಲ್ಮೈ ತಾಪಮಾನವನ್ನು ಕಡಿಮೆ ಮಾಡುತ್ತದೆ. ಮೇಲ್ಮೈ ಗ್ರಾಹಕಗಳು ನಂತರ ಮೆದುಳಿಗೆ ಅದು ತಂಪಾಗಿರುವ ಸಂಕೇತಗಳನ್ನು ಕಳುಹಿಸುತ್ತದೆ, ಅದು ಆಂತರಿಕವಾಗಿ ಅದು ಅಲ್ಲ. ಮೆದುಳಿಗೆ ತಪ್ಪು ಸಂಕೇತವನ್ನು ಪಡೆಯುವುದರಿಂದ ದೇಹದ ಆಂತರಿಕ ಕಾರ್ಯವಿಧಾನವು ಶಾಖವನ್ನು ಹರಡುವುದನ್ನು ತಡೆಯುತ್ತದೆ ಎಂದು ವಿವರಿಸಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications