ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿರುವ ರಾಧಿಕಾ ಯಾರು?
Recommended Video

ಬೆಂಗಳೂರು, ಮೇ 22: ಕರ್ನಾಟಕದ ರಾಜಕೀಯದಲ್ಲಿ ಏನೇನೋ ಬದಲಾವಣೆಯಾಗಿ ಹದಿನೈದು ದಿನದಲ್ಲಿ ಮೂವರು ಸಿಎಂ ಗಳನ್ನು ಕಾಣುವಂತಾದರೂ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಆಗುತ್ತಿರುವವರೇ ಬೇರೆ! ಕಳೆದೊಂದು ವಾರದಿಂದ ಕನ್ನಡದ ಪ್ರಖ್ಯಾತ ನಟಿ ರಾಧಿಕಾ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಅಷ್ಟಕ್ಕೂ ರಾಧಿಕಾ ಈಗ ಸುದ್ದಿಯಾಗುತ್ತಿರುವುದಾದರೂ ಯಾಕೆ?
2000 ನೇ ಇಸವಿಯಲ್ಲಿ ಕನ್ನಡ ಚಿತ್ರರಂಗವನ್ನು ಆಳಿದ ರಾಧಿಕಾ 'ನಿನಗಾಗಿ' ಚಿತ್ರದಿಂದ ಕನ್ನಡಿಗರ ಮನಗೆದ್ದವರು. 2010 ರವರೆಗೂ ಅಷ್ಟೊಂದು ಸುದ್ದಿಯಲ್ಲಿಲ್ಲದ ರಾಧಿಕಾ, ಇದ್ದಕ್ಕಿದ್ದಂತೆ ಸುದ್ದಿಯಾದರು. "ಕರ್ನಾಟಕದ ಪ್ರಭಾವಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿಯೊಬ್ಬರೊಂದಿಗೆ ತನಗೆ 2006 ರಲ್ಲಿ ಮದುವೆಯಾಗಿದೆ. ತಮಗೊಬ್ಬ ಮಗಳೂ ಇದ್ದಾಳೆ" ಎಂಬ ಶಾಕಿಂಗ್ ನ್ಯೂಸ್ ಅನ್ನು ರಾಧಿಕಾ ನೀಡಿದ್ದರು. ನಂತರ ಎಚ್ ಡಿ ಕುಮಾರಸ್ವಾಮಿ ಮತ್ತು ರಾಧಿಕಾ ಜೊತೆಗಿರುವ ಚಿತ್ರಗಳು ವೃತ್ತಪತ್ರಿಕೆಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದವು.

ಇದೀಗ ಕಾಂಗ್ರೆಸ್ ಪಕ್ಷ ತನ್ನ ಬೆಂಬಲ ಜೆಡಿಎಸ್ ಗೆ ಎಂದು ಘಂಟಾಘೋಷವಾಗಿ ಘೋಷಿಸುತ್ತಿದ್ದಂತೆಯೇ ಜೆಡಿಎಸ್ ಪಾಳೇಯದಲ್ಲಿ ಚಟುವಟಿಕೆ ಗರಿಗೆದರಿದೆ. ಹೀಗಿರುವಾಗ ಒಂದಷ್ಟು ಕಿಲಾಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ರಾಧಿಕಾ ಅವರನ್ನು ಟ್ರೋಲ್ ಮಾಡುವುದಕ್ಕೆ ತೊಡಗಿದ್ದಾರೆ. ಈ ಜೋಡಿ ತಮಗೆ ಮದುವೆಯಾಗಿದೆ ಎಂದು ಎಲ್ಲಿಯೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ ಎಂಬುದು ಉಲ್ಲೇಖಿಸಬೇಕಾದ ಸಂಗತಿ.

ಬಿ ಎಸ್ ವೈ ಗೆ ಧನ್ಯವಾದ!
ಕರ್ನಾಟಕದ ರಾಜಕೀಯ ಬೆಳವಣಿಗೆಯ ನಂತರ ಇಂಥದೊಂದು ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿತ್ತು. 'ನನ್ನ ಮಾಂಗಲ್ಯ ಉಳಿಸಿದ ಯಡಿಯೂರಪ್ಪನವರಿಗೆ ಧನ್ಯವಾದಗಳು' ಎಂದು ರಾಧಿಕಾ ಕಣ್ಣೀರಿಟ್ಟು ಹೇಳುತ್ತಿರುವ ಚಿತ್ರ ಅದು.

ರಾಧಿಕಾ ಕ್ಯಾಂಟೀನ್
ಇಂದಿರಾ ಕ್ಯಾಂಟೀನ್ ಅಲ್ಲ, ರಾಧಿಕಾ ಕ್ಯಾಂಟೀನ್. ಕರ್ನಾಟಕದಲ್ಲಿ ಜನಪ್ರಿಯತೆಗಳಿಸಿರುವ ಇಂದಿರಾ ಕ್ಯಾಂಟೀನ್ ಇನ್ನು ಮೇಲೆ ರಾಧಿಕಾ ಕ್ಯಾಂಟೀನ್ ಆಗಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಲೇವಡಿ ಮಾಡಲಾಗಿದೆ.
ಸಖತ್ ಖುಷಿಯಾದ ರಾಧಿಕಾ
ಕರ್ನಾಟಕದ ರಾಜಕೀಯ ಬೆಳವಣಿಗೆಯ ಕುರಿತು ಸಖತ್ ಖುಷಿಯಾಗಿರುವ ರಾಧಿಕಾ, ಎಚ್ ಡಿ ಕೆ ಮುಖ್ಯಮಂತ್ರಿಯಾಗುತ್ತಿರುವ ಸುದ್ದಿ ಕೇಳಿ ಕುಣಿದಾಡಿದ್ದು ಹೀಗೆ ಎಂದು ರಾಧಾಕೃಷ್ಣ ಜೆ ರೆಡ್ಡಿ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇವು ಸಾಮಾಜಿಕ ಮಾಧ್ಯಮಗಳಲ್ಲಿ ಬಂದ ಅಭಿಪ್ರಾಯಗಳಷ್ಟೆ!
ಇವು ಸಾಮಾಜಿಕ ಮಾಧ್ಯಮಗಳಲ್ಲಿ ಬಂದ ಅಭಿಪ್ರಾಯಗಳಷ್ಟೆ!aಇದ್ದಕ್ಕಿದ್ದಂತೆ ರಾಧಿಕಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದು, ಆ ಟ್ರೋಲ್ ಗಳ ಕುರಿತಷ್ಟೇ ಇಲ್ಲಿ ವಿವರಣೆ ನೀಡಿದ್ದೇವೆ. ಯಾವುದೇ ವ್ಯಕ್ತಿಯ ವೈಯಕ್ತಿಕ ಜೀವನದ ಕುರಿತು ಅಪಹಾಸ್ಯ ಮಾಡುವ ಉದ್ದೇಶದಿಂದಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications