ಮ್ಯಾಗಿ ಮೇಲಿನ ನಿಷೇಧ ತೆರವು ಸದ್ಯಕ್ಕಿಲ್ಲ: ಖಾದರ್
ಬೆಂಗಳೂರು, ಅ. 08: ನೆಸ್ಲೆ 'ಮ್ಯಾಗಿ' ನೂಡಲ್ಸ್ನಲ್ಲಿ ನಿಗದಿತ ಪ್ರಮಾಣದಲ್ಲೇ ರಾಸಾಯನಿಕ ಅಂಶವಿರುವುದು ರಾಜ್ಯದ ಪ್ರಯೋಗಾಲಯದ ವರದಿಯಿಂದ ಗೊತ್ತಾಗಿದೆ. ಅದರೆ, ಜನರ ಆರೋಗ್ಯದ ಹಿತದೃಷ್ಟಿಯಿಂದ ಮತ್ತೊಮ್ಮೆ ಪರೀಕ್ಷೆ ನಡೆಸಿ ವರದಿ ಪಡೆದ ಮೇಲೆ ನಿಷೇಧ ತೆರವು ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಮ್ದು ಆರೋಗ್ಯ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.[ಆಟಾ ನೂಡಲ್ಸ್ ಪೈಪೋಟಿ ಎದುರಿಸುತ್ತಾ ಮ್ಯಾಗಿ ?]
ಕೇಂದ್ರ ಸರಕಾರ ಹಾಗೂ ಎಫ್ ಎಸ್ ಎಸ್ ಎ ಐ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ 'ಮ್ಯಾಗಿ' ನೂಡಲ್ಸ್ ಮಾರಾಟ ನಿಷೇಧಿಸಲಾಗಿದೆ. ಆದರೆ, ಈ ಬಗ್ಗೆ ಮತ್ತೊಮ್ಮೆ ಹೊರ ರಾಜ್ಯದ ಪ್ರಯೋಗಾಲಯದಿಂದ ವರದಿ ಪಡೆದ ಬಳಿಕ 'ಮ್ಯಾಗಿ' ಮೇಲಿನ ನಿಷೇಧ ತೆರವುಗೊಳಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು. ಮ್ಯಾಗಿ ಸ್ಯಾಂಪಲ್ ಗಳನ್ನು ಕೇಂದ್ರ ಆಹಾರ ಪ್ರಯೋಗಾಲಯ(ಸಿಎಫ್ ಎಲ್) ಕೋಲ್ಕತ್ತಾಕ್ಕೆ ಕಳಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.[ಬಾಂಬೆ ಹೈಕೋರ್ಟ್ ನಿಂದ ಮ್ಯಾಗಿ ನಿಷೇಧ ತೆರವು]

'ಮ್ಯಾಗಿ' ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳ ಮಿಶ್ರಣದಲ್ಲಿನ ಬದಲಾವಣೆ ಹಿನ್ನೆಲೆಯಲ್ಲಿ ರಾಸಾಯನಿಕ ಅಂಶ ಇರುವುದು ಗೊತ್ತಾಗಿದೆ ಎಂದು ನೆಸ್ಲೆ ಕಂಪನಿ ಸ್ಪಷ್ಟನೆ ನೀಡಿದೆ. ಕೋಲ್ಕತ್ತಾದ ಪ್ರಯೋಗಾಲಯದಲ್ಲಿ ಮ್ಯಾಗಿ ನೂಡಲ್ಸ್ ಪರೀಕ್ಷೆ ವರದಿ ಬಂದ ಬಳಿಕ ನಿಷೇಧ ಮುಂದುವರಿಕೆ ಅಥವಾ ನಿಷೇಧ ತೆರವುಗೊಳಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಖಾದರ್ ಸ್ಪಷ್ಟಪಡಿಸಿದರು.[ಸರ್ಕಾರದ ಗದಾ ಪ್ರಹಾರಕ್ಕೆ ತತ್ತರಿಸಿದ ನೆಸ್ಲೆ ಕಂಪನಿ]
ಮೊದಲ ಪರೀಕ್ಷೆಯಲ್ಲಿ ಅಲ್ಯೂಮಿನಿಯಂ(0.119ppm), ಸೀಸ (2.6 ppm) ಹಾಗೂ ಎಂ ಎಸ್ ಜಿ ಅಂಶ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿರುವುದು ಪತ್ತೆಯಾಗಿತ್ತು. ಈಗ ಬೆಂಗಳೂರು ಗ್ರಾಮಾಂತರ, ಗದಗ ಸೇರಿದಂತೆ ಹಲವೆಡೆಗಳಿಂದ ಸ್ಯಾಂಪಲ್ ಸಂಗ್ರಹಿಸಿ ಕೋಲ್ಕತ್ತಾಕ್ಕೆ ಕಳಿಸಲಾಗಿದೆ ಎಂದು ಸಚಿವ ಖಾದರ್ ವಿವರಿಸಿದರು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications