ಮ್ಯಾಗಿ ಮೇಲಿನ ನಿಷೇಧ ತೆರವು ಸದ್ಯಕ್ಕಿಲ್ಲ: ಖಾದರ್
ಬೆಂಗಳೂರು, ಅ. 08: ನೆಸ್ಲೆ 'ಮ್ಯಾಗಿ' ನೂಡಲ್ಸ್ನಲ್ಲಿ ನಿಗದಿತ ಪ್ರಮಾಣದಲ್ಲೇ ರಾಸಾಯನಿಕ ಅಂಶವಿರುವುದು ರಾಜ್ಯದ ಪ್ರಯೋಗಾಲಯದ ವರದಿಯಿಂದ ಗೊತ್ತಾಗಿದೆ. ಅದರೆ, ಜನರ ಆರೋಗ್ಯದ ಹಿತದೃಷ್ಟಿಯಿಂದ ಮತ್ತೊಮ್ಮೆ ಪರೀಕ್ಷೆ ನಡೆಸಿ ವರದಿ ಪಡೆದ ಮೇಲೆ ನಿಷೇಧ ತೆರವು ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಮ್ದು ಆರೋಗ್ಯ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.[ಆಟಾ ನೂಡಲ್ಸ್ ಪೈಪೋಟಿ ಎದುರಿಸುತ್ತಾ ಮ್ಯಾಗಿ ?]
ಕೇಂದ್ರ ಸರಕಾರ ಹಾಗೂ ಎಫ್ ಎಸ್ ಎಸ್ ಎ ಐ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ 'ಮ್ಯಾಗಿ' ನೂಡಲ್ಸ್ ಮಾರಾಟ ನಿಷೇಧಿಸಲಾಗಿದೆ. ಆದರೆ, ಈ ಬಗ್ಗೆ ಮತ್ತೊಮ್ಮೆ ಹೊರ ರಾಜ್ಯದ ಪ್ರಯೋಗಾಲಯದಿಂದ ವರದಿ ಪಡೆದ ಬಳಿಕ 'ಮ್ಯಾಗಿ' ಮೇಲಿನ ನಿಷೇಧ ತೆರವುಗೊಳಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು. ಮ್ಯಾಗಿ ಸ್ಯಾಂಪಲ್ ಗಳನ್ನು ಕೇಂದ್ರ ಆಹಾರ ಪ್ರಯೋಗಾಲಯ(ಸಿಎಫ್ ಎಲ್) ಕೋಲ್ಕತ್ತಾಕ್ಕೆ ಕಳಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.[ಬಾಂಬೆ ಹೈಕೋರ್ಟ್ ನಿಂದ ಮ್ಯಾಗಿ ನಿಷೇಧ ತೆರವು]

'ಮ್ಯಾಗಿ' ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳ ಮಿಶ್ರಣದಲ್ಲಿನ ಬದಲಾವಣೆ ಹಿನ್ನೆಲೆಯಲ್ಲಿ ರಾಸಾಯನಿಕ ಅಂಶ ಇರುವುದು ಗೊತ್ತಾಗಿದೆ ಎಂದು ನೆಸ್ಲೆ ಕಂಪನಿ ಸ್ಪಷ್ಟನೆ ನೀಡಿದೆ. ಕೋಲ್ಕತ್ತಾದ ಪ್ರಯೋಗಾಲಯದಲ್ಲಿ ಮ್ಯಾಗಿ ನೂಡಲ್ಸ್ ಪರೀಕ್ಷೆ ವರದಿ ಬಂದ ಬಳಿಕ ನಿಷೇಧ ಮುಂದುವರಿಕೆ ಅಥವಾ ನಿಷೇಧ ತೆರವುಗೊಳಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಖಾದರ್ ಸ್ಪಷ್ಟಪಡಿಸಿದರು.[ಸರ್ಕಾರದ ಗದಾ ಪ್ರಹಾರಕ್ಕೆ ತತ್ತರಿಸಿದ ನೆಸ್ಲೆ ಕಂಪನಿ]
ಮೊದಲ ಪರೀಕ್ಷೆಯಲ್ಲಿ ಅಲ್ಯೂಮಿನಿಯಂ(0.119ppm), ಸೀಸ (2.6 ppm) ಹಾಗೂ ಎಂ ಎಸ್ ಜಿ ಅಂಶ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿರುವುದು ಪತ್ತೆಯಾಗಿತ್ತು. ಈಗ ಬೆಂಗಳೂರು ಗ್ರಾಮಾಂತರ, ಗದಗ ಸೇರಿದಂತೆ ಹಲವೆಡೆಗಳಿಂದ ಸ್ಯಾಂಪಲ್ ಸಂಗ್ರಹಿಸಿ ಕೋಲ್ಕತ್ತಾಕ್ಕೆ ಕಳಿಸಲಾಗಿದೆ ಎಂದು ಸಚಿವ ಖಾದರ್ ವಿವರಿಸಿದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications