ಕರ್ನಾಟಕದಿಂದ 3ರಾಜ್ಯಸಭಾ ಸ್ಥಾನ ಗೆಲ್ಲಲು ಕಾಂಗ್ರೆಸ್ ರಣತಂತ್ರ
ಬೆಂಗಳೂರು, ಮಾರ್ಚ್ 10: ತನಗಿರುವ ಶಾಸಕರ ಸಂಖ್ಯಾ ಬಲದ ಆಧಾರದ ಮೇಲೆ ರಾಜ್ಯಸಭೆಗೆ ಕಾಂಗ್ರೆಸ್ ಎರಡು ಮತ್ತು ಬಿಜೆಪಿ ಒಬ್ಬರನ್ನು ಸುಲಭವಾಗಿ ಕಳುಹಿಸಬಹುದಾಗಿದೆ. ಆದರೆ ನಾಲ್ಕನೇ ಸ್ಥಾನಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಬೆಂಬಲಿಸಬಹುದು ಎಂಬ ನಿರೀಕ್ಷೆಯಲ್ಲಿ ಜೆಡಿಎಸ್ ಇದೆ. ಆದರೆ ತನ್ನ ಮೂರನೇ ಅಭ್ಯರ್ಥಿಯನ್ನು ಕಳುಹಿಸಲು ಕಾಂಗ್ರೆಸ್ ತಂತ್ರ ರೂಪಿಸಿದೆ.
ರಾಜ್ಯಸಭೆಗೆ ಆಯ್ಕೆಯಾಗಲು 44 ಮೊದಲ ಪ್ರಾಶಸ್ತ್ಯದ ಮತಗಳು ಬೇಕಾಗಿವೆ. ಕಾಂಗ್ರೆಸ್ ಬಳಿ 122 ಶಾಸಕರಿದ್ದು ಎರಡು ಸ್ಥಾನಕ್ಕೆ 88 ಶಾಸಕರೆಂದರೆ ಮತ್ತೆ 34 ಶಾಸಕರು ಉಳಿಯುತ್ತಾರೆ. ಹೀಗಾಗಿ ಮೂರನೇ ಸ್ಥಾನದ ಆಯ್ಕೆಗೆ ಕಾಂಗ್ರೆಸ್ ಗೆ 10 ಶಾಸಕರ ಕೊರತೆ ಉಂಟಾಗಲಿದೆ.

ಆದರೆ ಈ 10 ಮತಗಳನ್ನು ಹೊಂದಿಸುವ ಭರವಸೆ ಕಾಂಗ್ರೆಸ್ ಇದೆ. ಈಗಾಗಲೇ ದೇವೇಗೌಡರ ಜೆಡಿಎಸ್ ನಿಂದ ಹೊರ ಬಂದ 7 ಬಂಡಾಯ ಶಾಸಕರಿದ್ದು ಅವರ ಬೆಂಬಲ, ಜತೆಗೆ ಇನ್ನೂ ಮೂವರ ಮತಗಳನ್ನು ಪಡೆದರೆ ಕಾಂಗ್ರೆಸ್ ನ ಮೂರನೇ ಅಭ್ಯರ್ಥಿಯೂ ರಾಜ್ಯಸಭೆ ಪ್ರವೇಶಿಸಲಿದ್ದಾರೆ.
ಬಿಎಸ್ಆರ್ ನಿಂದ ಕಾಂಗ್ರೆಸ್ ಗೆ ಬಂದಿರುವ ಬಿ. ನಾಗೇಂದ್ರ, ಕೆಎಂಪಿಯ ಅಶೋಕ್ ಖೇಣಿ, ಕೆಜೆಪಿಯ ಬಿ.ಆರ್. ಪಾಟೀಲ್ ರ ಮತಗಳನ್ನು ಸೇರಿಸಿದರೆ ಕಾಂಗ್ರೆಸ್ ಗಿದ್ದ ಕೊರತೆಯ 10 ಮತಗಳು ಭರ್ತಿಯಾಗಲಿವೆ.
ಆದರೆ ಛಲ ಬಿಡದ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಯಲು ನಿರ್ಧರಿಸಿದ್ದು ಎಂ. ಫಾರೂಕ್ ನಾಮಪತ್ರವನ್ನೂ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಲ್ಲಿರುವ ಒಂದಷ್ಟು ಶಾಸಕರನ್ನು ಸಂಪರ್ಕಿಸಿ ಕುದುರೆ ವ್ಯಾಪಾರ ಮಾಡಿ ತನ್ನ ಸ್ಥಾನ ಗೆಲ್ಲಿಸಿಕೊಳ್ಳಲುವ ಆಲೋಚನೆಯಲ್ಲಿ ಜೆಡಿಎಸ್ ಇದೆ. ಆದರೆ ಅದು ಕೈಗೂಡುವ ಅವಕಾಶಗಳು ಕಡಿಮೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications