5 ಸಾವಿರ ರೂ. ಪಡೆಯಲು ಆಟೋ ಮತ್ತು ಟ್ಯಾಕ್ಸಿ ಚಾಲಕರ ಗಮನಕ್ಕೆ
ಬೆಂಗಳೂರು, ಮೇ 17 : ಕೋವಿಡ್ - 19 ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಗೊಂಡ ಮೇಲೆ ಆಟೋ ಮತ್ತು ಟ್ಯಾಕ್ಸಿ ಚಾಲಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕ ಸರ್ಕಾರ ಇವರ ನೆರವಿಗಾಗಿ 5 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.
ಕರ್ನಾಟಕ ಸರ್ಕಾರ ಕೆಲವು ಷರತ್ತುಗಳಿಗೆ ಒಳಪಟ್ಟು ಆಟೋ ಮತ್ತು ಟ್ಯಾಕ್ಸಿ ಚಾಲಕರು 5 ಸಾವಿರ ರೂ. ಪಡೆಯಲು ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ. ಚಾಲಕರು ಪರಿಹಾರವನ್ನು ಪಡೆಯಲು ಅರ್ಜಿ ಸಲ್ಲಿಸಲು ಲಿಂಕ್ ಅನ್ನು 3 ದಿನದಲ್ಲಿ ನೀಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.
5 ಸಾವಿರ ಪಡೆಯಲು ಆಟೋ, ಟ್ಯಾಕ್ಸಿ ಚಾಲಕರು ಅರ್ಜಿ ಹಾಕುವುದು ಹೇಗೆ?
ಸೇವಾಸಿಂಧು ಪೋರ್ಟಲ್ನಲ್ಲಿಯೇ ಅರ್ಜಿಗಳನ್ನು ಸಲ್ಲಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಅಗತ್ಯವಾಗ ಸಾಫ್ಟ್ವೇರ್ ಸಿದ್ಧಪಡಿಸಿ ಎರಡು ಮೂರು ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಪೋರ್ಟಲ್ ಸಿದ್ಧವಾಗುತ್ತಿದ್ದಂತೆ ಚಾಲಕರು ಅರ್ಜಿ ಸಲ್ಲಿಸಬಹುದು.
5 ಸಾವಿರ ಪರಿಹಾರ ಪಡೆಯಲು ಆಟೋ, ಟ್ಯಾಕ್ಸಿ ಚಾಲಕರಿಗೆ ಅರ್ಹತೆಗಳು
ಆಟೋ ಮತ್ತು ಟ್ಯಾಕ್ಸಿ ಚಾಲಕರು ಅರ್ಜಿ ಸಲ್ಲಿಸಲು ಲಿಂಕ್ ಯಾವಾಗ ಸಿಗಲಿದೆ? ಎಂಬ ಮಾಹಿತಿಯನ್ನು ಕೇಳುತ್ತಲೇ ಇದ್ದಾರೆ. ಆದ್ದರಿಂದ, ಸರ್ಕಾರ ಶನಿವಾರ ಈ ಕುರಿತು ಸ್ಪಷ್ಟನೆ ನೀಡಿದೆ. ಮುಂದಿನ ವಾರದಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗುವ ನಿರೀಕ್ಷೆ ಇದೆ.
ಆಟೋ, ಕ್ಯಾಬ್ ಚಾಲಕರು ಸರ್ಕಾರದ 5000 ರು ಪಡೆಯುವುದು ಹೇಗೆ?
ಚಾಲಕರಿಗೆ ಷರತ್ತುಗಳು
* ಎಲ್ಲಾ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸಬೇಕು.
* 24/3/2020ರಂದು ಚಾಲನಾ ಪರವಾನಗಿ ಪತ್ರ (ಡಿಎಲ್) ಮತ್ತು ಸುಸ್ಥಿತಿ ಪ್ರಮಾಣ ಪತ್ರ (ಫಿಟ್ನೆಸ್ ಪ್ರಮಾಣ ಪತ್ರ) ಹೊಂದಿದ್ದ ವಾಹನಗಳಿಗೆ ಮಾತ್ರ ಅನ್ವಯಿಸತಕ್ಕದ್ದು. 24/3/2020ರಂದು ಚಾಲ್ತಿಯಲ್ಲಿದ್ದ ಚಾಲಕರ ಪರವಾನಗಿ ಸಂಖ್ಯೆಗಿಂತ ಹೆಚ್ಚು ಫಲಾನುಭವಿಗಳು ಇಲ್ಲದಂತೆ ಖಚಿತಪಡಿಸಿಕೊಳ್ಳಬೇಕು.
ಆಟೋ, ಟ್ಯಾಕ್ಸಿ ಚಾಲಕರು
* ಆಧಾರ್ ಕಾರ್ಡ್/ಚಾಲನಾ ಪರವಾನಗಿ/ವಾಹನ ನೋಂದಣ ಸಂಖ್ಯೆ ಎಲ್ಲಾ ಫಲಾನುಭವಿಗಳಿಗೆ ಅನನ್ಯವಾಗಿರುವುದು ಕಡ್ಡಾಯವಾಗಿರತಕ್ಕದ್ದು.
* ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ ಅನ್ವಯವಾಗತಕ್ಕದ್ದು. ಮ್ಯಾಕ್ಸಿ ಕ್ಯಾಬ್ಗಳಿಗೆ ಅನ್ವಯ ಆಗುವುದಿಲ್ಲ.
ಡಿಬಿಟಿ ಮೂಲಕವೇ ಸಂದಾಯ
* ಪರಿಹಾರ ಧನವು ಕೇವಲ ಅನುಜ್ಞಾ ಪತ್ರವನ್ನು ಹೊಂದಿರುವ ಹಾಗೂ ಅಗತ್ಯವಿರುವ ಚಾಲಕರ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರವೇ ಸಂದಾಯವಾಗಬೇಕು.
* ಒಂದು ವೇಳೆ ಆಟೋ/ಟ್ಯಾಕ್ಸಿ ಮಾಲಿಕರಿಗೆ ಸಂದಾಯವಾದಲ್ಲಿ ಕೆಲವೊಂದು ಮಾಲೀಕರು ಹೆಚ್ಚಿನ ಸಂಖ್ಯೆಯ ಆಟೋ/ಟ್ಯಾಕ್ಸಿಗಳನ್ನು ಹೊಂದಿದ್ದು ಅವರಿಗೆ ಪರಿಹಾರ ಧನ ಸಂದಾಯವಾದಲ್ಲಿ ಜೀವನ ನಿರ್ಹಹಣೆಯನ್ನು ಎದಿರಿಸುತ್ತಿರುವ ಚಾಲಕರಿಗೆ ಸಿಗದಂತಾಗುತ್ತದೆ. ಆದ್ದರಿಂದ ಚಾಲಕರ ಆಧಾರ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಬಗ್ಗೆ ಗಮನಹರಿಸಿ ವರ್ಗಾಯಿಸಬೇಕು.
ಯಾವುದೇ ಮಧ್ಯಂತರ ಸಂಪರ್ಕ ಇರಬಾರದು
* ಈ ಹಂತದಲ್ಲಿ ಸರ್ಕಾರ ಮತ್ತು ಫಲಾನುಭವಿಗಳ ನೇರ ಸಂಪರ್ಕವಿರತಕ್ಕದ್ದು. ಯಾವುದೇ ಮಧ್ಯಂತರ ಸಂಪರ್ಕ ಇರಬಾರದು.
* ಕೆಲವೊಂದು ಫಲಾನುಭವಿಗಳ ಆರ್ಥಿಕ ಸ್ಥಿತಿ ಉತ್ತಮವಾಗಿದ್ದು, ಅವರುಗಳಿಗೆ ಪರಿಹಾರ ನೀಡುವ ಅಗತ್ಯತೆ ಬಗ್ಗೆ ಗಮನಹರಿಸಿ, ಅರ್ಹ ಫಲಾನುಭವಿಗಳಿಂದ ಲಾಕ್ ಡೌನ್ ಅವಧಿಯಲ್ಲಿ ಆರ್ಥಿಕ ಸ್ಥಿತಿ ಸದೃಢವಾಗಿಲ್ಲದಿರುವ ಬಗ್ಗೆ ಸ್ವಯಂ ದೃಢೀಕರಣ ಪಡೆದು ಪರಿಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು.