Karnataka Rural Banks Merge: ಕರ್ನಾಟಕ ಗ್ರಾಮೀಣ ಬ್ಯಾಂಕ್ಗಳು ವಿಲೀನ, ಹೊಸ ಯೋಜನೆ ಜಾರಿ..
ಬೆಂಗಳೂರು, ಏಪ್ರಿಲ್ 07: 'ಒಂದು ರಾಷ್ಟ್ರ ಒಂದೇ ಚುನಾವಣೆ' ಪರಿಚಯಿಸಿರುವ ಕೇಂದ್ರ ಸರ್ಕಾರವು 'ಒಂದು ರಾಜ್ಯ ಒಂದೇ ಗ್ರಾಮೀಣ ವಿಕಾಸ ಬ್ಯಾಂಕ್' ಯೋಜನೆಯನ್ನು ಜಾರಿಗೆ ತರಲು ಸಿದ್ಧವಾಗಿದೆ. ಈ ಸಂಬಂಧ ಎರಡು ಕರ್ನಾಟಕ ಗ್ರಾಮೀಣ ಬ್ಯಾಂಕ್ಗಳು ವಿಲೀನಗೊಂಡು ಒಂದೇ ಆಗಲಿವೆ. ಈ ಸಂಬಂಧ ಕೇಂದ್ರ ಹಣಕಾಸು ಸಚಿವಾಲಯವು ಶೀಘ್ರವೇ ಯೋಜನೆ ಕುರಿತ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಒಂದೇ ರಾಜ್ಯ ಒಂದು ಗ್ರಾಮೀಣ ಬ್ಯಾಂಕ್ ಯೋಜನೆ ಜಾರಿಯಾಗಲಿದೆ. ಯೋಜನೆಯಡಿ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳ (ಆರ್ಆರ್ಬಿ) ಕಾರ್ಯದಕ್ಷತೆ ಹೆಚ್ಚಿಸುವುದು, ವೆಚ್ಚಗಳ ಸಾರ್ವತ್ರಿಕರಣ ನಿಯಂತ್ರಿಸಲು ಸರ್ಕಾರ ಮುಂದಾಗಿದೆ.

ಇದಲ್ಲದೇ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳ (ಆರ್ಆರ್ಬಿ) ಸಂಖ್ಯೆಯನ್ನು 42ರಿಂದ 28ಕ್ಕೆ ಇಳಿಕೆ ಮಾಡಲು ಕೇಂದ್ರ ಹಣಕಾಸು ಸಚಿವಾಲಯ ನಿರ್ಧರಿಸಿ ಈ ಹೊಸ ಯೋಜನೆ ಜಾರಿಗೆ ತರುತ್ತಿದೆ ಎಂದು ಕೇಂದ್ರದ ಮೂಲಗಳು ಮಾಹಿತಿ ನೀಡಿವೆ. ಇದರಿಂದ ಒಂದಷ್ಟು ನೌಕರರಿಗೆ ಸಮಸ್ಯೆ ಸಹ ಆಗಬಹುದು ಎಂದು ಹೇಳಲಾಗುತ್ತಿದೆ.
ಈಗಾಗಲೇ ಯೋಜನೆ ಜಾರಿ ಸಂಬಂಧ ಬ್ಯಾಂಕ್ಗಳ ಸಂಖ್ಯೆ ಇಳಿಕೆಯ ಪ್ರಕ್ರಿಯೆಗಳು ಪೂರ್ಣಗೊಂಡಿದೆ. ಮೂಲಗಳ ಪ್ರಕಾರ ಒಟ್ಟು 15 ಆರ್ಆರ್ಬಿಗಳನ್ನು ವಿಲೀನಗೊಳಿಸಲು ಮುಂದಾಗಿದೆ. ಆಂಧ್ರ ಪ್ರದೇಶವು ಅತೀ ಹೆಚ್ಚು ಅಂದರೆ ನಾಲ್ಕು ಆರ್ಆರ್ಬಿಗಳನ್ನು ಹೊಂದಿದೆ. ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಮೂರು, ಬಿಹಾರ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಓಡಿಶಾ ಹಾಗೂ ರಾಜಸ್ಥಾನದಲ್ಲಿ ತಲಾ ಎರಡು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳನ್ನು ಹೊಂದಿವೆ. ಹಣಕಾಸು ಮರುಪೂರಣ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿದು ಬಂದಿದೆ.
ಇದನ್ನು ಒಂದು ರಾಜ್ಯ ಒಂದು ಆರ್ಆರ್ಬಿ ಯೋಜನೆ ಅಂತಲೂ ಹೇಳಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಆಸರೆಯಾಗಿದ್ದ ಬ್ಯಾಂಕ್ಗಳು ಇದೀಗ ವಿಲೀನಕ್ಕೆ ಸಜ್ಜಾಗಿವೆ. ಹೊಸ ಆರ್ಥಿಕ ವರ್ಷದಲ್ಲಿ ಇಂಥದ್ದೊಂದು ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ..
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications