ಕೋಲಾರದಲ್ಲಿ ಕರ್ನಾಟಕದ ಮೊದಲ ಆನೆ ಆರೈಕೆ ಕೇಂದ್ರ ಆರಂಭ
ಕೋಲಾರ, ಡಿಸೆಂಬರ್ 30: ಬೆಂಗಳೂರಿನಿಂದ 55 ಕಿಮೀ ದೂರದ ಕೋಲಾರ ಸಮೀಪದ ಕಾಜಿಕಲ್ಲಹಳ್ಳಿ ಗ್ರಾಮದಲ್ಲಿ ಕರ್ನಾಟಕದ ಮೊಟ್ಟಮೊದಲ ಆನೆಗಳ ಆರೈಕೆ ಕೇಂದ್ರ ಆರಂಭವಾಗಿದೆ.
ಬೆಂಗಳೂರು ಮೂಲದ ಎನ್ಜಿಒ ವನ್ಯಜೀವಿ ಪಾರುಗಾಣಿಕಾ ಮತ್ತು ಪುನರ್ವಸತಿ ಕೇಂದ್ರದ ಸಹಯೋಗದೊಂದಿಗೆ ಅರಣ್ಯ ಇಲಾಖೆಯು ಸ್ಥಾಪಿಸಿರುವ ಕೋಲಾರ ಕೇಂದ್ರವು 20 ಎಕರೆಗಳಷ್ಟು ವಿಸ್ತಾರವಾಗಿದೆ. ಈ ಕ್ಯಾಂಪಸ್ನಲ್ಲಿ ನಿರ್ಗತಿಕ, ವಯಸ್ಸಾದ, ರೋಗಪೀಡಿತ ಮತ್ತು ಗಾಯಗೊಂಡ ಆನೆಗಳನ್ನು ನೋಡಿಕೊಳ್ಳಲಾಗುತ್ತದೆ. ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿರುವ ಈ ಕೇಂದ್ರದಲ್ಲಿ ಪ್ರಸ್ತುತ ನಾಲ್ಕು ಹೆಣ್ಣು ಆನೆಗಳನ್ನು ನೋಡಿಕೊಳ್ಲಲಾಗಿತ್ತಿದೆ ಎಂದು ಟಿಒಐ ವರದಿ ಮಾಡಿದೆ.
ಈ ಕೇಂದ್ರದಲ್ಲಿ ಗಾಯಗೊಂಡ ಮತ್ತು ರೋಗಗ್ರಸ್ತ ಆನೆಗಳಿಗೆ ಚಿಕಿತ್ಸೆ ನೀಡುವುದಲ್ಲದೆ, ಚೇತರಿಸಿಕೊಳ್ಳಲು ಮತ್ತು ಮತ್ತೆ ಸಕ್ರಿಯವಾಗಿ ಮರಳಲು ಅನುವು ಮಾಡಿಕೊಡುವ ಪರಿಸರವನ್ನು ಒದಗಿಸಲಾಗುವುದು ಎಂದು ಕೋಲಾರ ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ವಿ ಏಳುಕೊಂಡಲು ಹೇಳಿದರು. ಧಾರ್ಮಿಕ ಸ್ಥಳಗಳಿಗೆ ನೀಡಲಾದ ಅನೇಕ ಆನೆಗಳು ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗುತ್ತವೆ. ಏಕೆಂದರೆ ಅವುಗಳನ್ನು ಹೆಚ್ಚು ಗಂಟೆಗಳ ಕಾಲ ನಿಲ್ಲುವಂತೆ ಮಾಡಲಾಗುತ್ತದೆ ಮತ್ತು ಸಾಕಷ್ಟು ಬಾಳೆಹಣ್ಣುಗಳು ಮತ್ತು ಭಕ್ತರು ನೀಡುವ ಇತರ ಆಹಾರ ಪದಾರ್ಥಗಳನ್ನು ನೀಡಲಾಗುತ್ತದೆ ಎಂದರು.

ಇಲ್ಲಿಗೆ ಬರುವ ಆನೆಗಳು ಸ್ಥೂಲಕಾಯತೆ, ಜೀರ್ಣಕಾರಿ ಅಸ್ವಸ್ಥತೆಗಳು, ಸಂಧಿವಾತ ಮತ್ತು ಕಾಲುಗಳಲ್ಲಿ ಊತಕ್ಕೆ ಗುರಿಯಾಗುತ್ತವೆ. ಕೆಲವೊಮ್ಮೆ, ಈ ಆನೆಗಳನ್ನು ಅವುಗಳ ಮಾಲೀಕರು ಸರಿಯಾಗಿ ನೋಡಿಕೊಳ್ಳುವುದಿಲ್ಲ. ಅವರಿಗೆ ಆರೈಕೆ ಮತ್ತು ಗಮನವನ್ನು ನೀಡುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದಕ್ಕೆ 1.5 ಕೋಟಿ ವೆಚ್ಚವಾಗಿದೆ ಎಂದು ಏಳುಕೊಂಡಲು ಹೇಳಿದರು.

ಸೆಪ್ಟೆಂಬರ್ನಲ್ಲಿ ಲಕ್ಷ್ಮೀಪುರ ಮೀಸಲು ಅರಣ್ಯದಲ್ಲಿ ಈ ಸೌಲಭ್ಯ ಬಂದಿದೆ ಎಂದು ಡಬ್ಲ್ಯುಆರ್ಆರ್ಸಿಯ ಕೇಂದ್ರದ ಉಸ್ತುವಾರಿ ಸುಪರ್ಣಾ ಗಂಗೂಲಿ ಹೇಳಿದರು. ಈ ಪೈಕಿ ಮೂರು ಆನೆಗಳು ನಂಜನಗೂಡು, ತೂತುಕುಡಿ ಮತ್ತು ಬೆಂಗಳೂರಿನಿಂದ ಬಂದಿದ್ದು, ನಾಲ್ಕನೆಯದು ಗೋವಾದಿಂದ ಇತ್ತೀಚೆಗೆ ಬಂದಿವೆ. ದಿನಕ್ಕೆರಡು ಬಾರಿ ಸ್ನಾನ ಮಾಡಿಸಿ ರಾಗಿ, ಭತ್ತ, ಹಸಿರು ಹುಲ್ಲು, ಹಣ್ಣು ಸೇರಿದಂತೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಕಾಳುಮೆಣಸು, ಜೀರಿಗೆ, ನುಗ್ಗೆಸೊಪ್ಪು ಸೇರಿದಂತೆ ದಿನಕ್ಕೆರಡು ಬಾರಿ ರಾಗಿ ಮುದ್ದೆ ತಯಾರಿಸುವ ಆಧುನಿಕ ಅಡುಗೆ ಮನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications