ಹಜಾಮ ಪದ ಬಳಕೆಗೆ ಶಿಕ್ಷೆ, ಕಾನೂನು ತರಲು ಆಗ್ರಹ
ಬೆಂಗಳೂರು ಆಗಸ್ಟ್ 24: ಹಜಾಮ/ಅಜಾಮ ಪದವನ್ನು ಬಳಸಿ ಬೈಯುವರನ್ನು ಶಿಕ್ಷೆಗೆ ಒಳಪಡಿಸಲು ಅನುವು ಮಾಡಿಕೊಡುವ ಕಾನೂನು ಜಾರಿಗೆ ತನ್ನಿ ಎಂದು ಕರ್ನಾಟಕ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಬಿ. ಶಿವಕುಮಾರ್ ಆಗ್ರಹಿಸಿದ್ದಾರೆ.
Recommended Video
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಅವರ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿರುವ ಅವರು ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಕ್ಷೌರಿಕ ಮುಟ್ಟದ ಜನರಿಲ್ಲ ಆದರೆ ನಮಗೆ ಸಾಮಾಜಿಕವಾಗಿ ಗೌರವ ದೊರೆಯುತ್ತಿಲ್ಲ.

ಎಲ್ಲಾ ವರ್ಗದ ಭಯದ ನೆರಳಿನಲ್ಲಿ ಅಪಹಾಸ್ಯ, ಅವಮಾನ, ಹಿಂಸೆ, ನಿಂದನೆ ಹಾಗೂ ಎಲ್ಲಾ ವರ್ಗಗಳ ಬಾಯಿಯ ಬೈಗುಳದ ತುತ್ತಾಗಿ ಅಪಮಾನಕ್ಕೆ ಒಳಗಾಗಿ ಮಾನಸಿಕ ಹಿಂಸೆ ಅನುಭವಿಸಿಕೊಂಡು ಅಪಹಾಸ್ಯಕ್ಕೆ ತುತ್ತಾಗಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.
ಇಂತಹ ದಾರುಣ ಪರಿಸ್ಥಿತಿ ನಮ್ಮ ಮುಂದಿನ ಪೀಳಿಗೆ ಅನುಭವಿಸಬಾರದು ಎನ್ನುವ ಸದುದ್ದೇಶದಿಂದ ಹಜಾಮ/ಅಜಾಮ ಪದವನ್ನು ಬಳಸಿ ಅಪಮಾನ ಮಾಡಿದರೆ ಅಂತಹವರನ್ನು ಶಿಕ್ಷೆಗೆ ಒಳಪಡಿಸುವಂತಹ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಈ ಹಿನ್ನಲೆಯಲ್ಲಿ ಕಾನೂನು ಜಾರಿಗೊಳಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡುವ ಮೂಲಕ ಸಾಮಾಜಿಕ ನ್ಯಾಯ ದೊರಕಿಸಿಕೊಡುವಂತೆ ವಿನಂತಿ ಮಾಡಿಕೊಂಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಮತ್ತು ಬೆಂಗಳೂರು ನಗರ ಅಧ್ಯಕ್ಷ ಹೆಚ್.ಎನ್ ನರಸಿಂಹಮೂರ್ತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications