ಮೇ. 16 ರಿಂದ ಶಾಲೆಗಳು ಪುನರಾರಂಭಕ್ಕೆ ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು, ಏ. 21: ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಾಲೆಗಳ ಪ್ರಕಸ್ತ ಸಾಲಿನ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರಿಯಾ ಯೋಜನೆಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಕ್ರಿಯಾ ಯೋಜನೆ ಪ್ರಕಾರ ಮೇ 16 ರಿಂದ ಏಪ್ರಿಲ್ 10 ರ ವರೆಗೆ ಶಾಲೆ ಕಾರ್ಯನಿರ್ವಹಣೆಗೆ ಅವಕಾಶ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೇ 16 ರಂದು ಶಾಲೆಗಳು ಆರಂಭ ಮಾಡಬೇಕು. ಮೇ 16 ರಿಂದ ಅಕ್ಟೋಬರ್ 02 ರವರೆಗೂ ಮೊದಲೇ ಅವಧಿ ಮುಕ್ತಾಯವಾಗಲಿದೆ. ದಸರಾ ರಜೆ ಬಳಿಕ ಅಕ್ಟೋಬರ್ 17 ರಿಂದ ಪುನಃ ಶಾಲೆಗಳು ಪ್ರಾರಂಭವಾಗಲಿದ್ದು, ಏ. 10 ರ ವರೆಗೆ ಶಾಲೆಗಳು ಕಾರ್ಯ ನಿರ್ವಹಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕೋವಿಡ್ ಪರಿಣಾಮ ಕಳೆದ ಮೂರು ವರ್ಷ ಶೈಕ್ಷಣಿಕ ಚಟುವಟಿಕೆ ಮೇಲೆ ಪ್ರಭಾವ ಬೀರಿದೆ. ಅನಿವಾರ್ಯವಾಗಿ ಶಾಲೆಗಳನ್ನು ಮುಚ್ಚಲಾಗಿತ್ತು. ಆನ್ ಲೈನ್ ತರಗತಿಗಳಿಗೆ ಅವಕಾಶ ಮಾಡಿಕೊಟ್ಟಿದ್ದರೂ ಮಕ್ಕಳ ಕಲಿಕೆ ಮೇಲೆ ನಕಾರಾತ್ಮಕ ಪರಿಣಾಮ ಬೀರಿತ್ತು. ಮಕ್ಕಳ ಕಲಿಕೆಗೆ ಒತ್ತು ನೀಡಿದ್ದು, ಈ ವರ್ಷ ಹೆಚ್ಚುವರಿಯಾಗಿ ಕಲಿಕೆಗೆ ಅವಕಾಶ ಮಾಡಿಕೊಟ್ಟು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ವರ್ಷವನ್ನು ಕಲಿಕಾ ಚೇತರಿಕೆ ವರ್ಷ ಎಂದು ಘೋಷಣೆ ಮಾಡಲಾಗಿದೆ.

ರಜಾ ಅವಧಿ:
ಅಕ್ಟೋಬರ್ 3 ರಿಂದ ಅಕ್ಟೋಬರ್ 16 ರ ವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಬೇಸಿಗೆ ರಜೆಯನ್ನು ಏಪ್ರಿಲ್ 11 ರಿಂದ ಮೇ. 28 ರ ವರೆಗೆ ನೀಡಲಾಗಿದೆ. ಒಟ್ಟಾರೆ ಪ್ರಸಕ್ತ ಸಾಲಿನಲ್ಲಿ 256 ದಿನ ಶಾಲೆಗಳು ಕಾರ್ಯ ನಿರ್ವಹಿಸಲಿವೆ.

ಪ್ರವೇಶಕ್ಕೆ ದಿನಾಂಕ ನಿಗದಿ:
ಮಕ್ಕಳ ಶಾಲಾ ದಾಖಲಾತಿಯನ್ನು ಮೇ. 16 ರಿಂದ ಆರಂಭಿಸಿ ಜುಲೈ 31 ರ ಒಳಗೆ ಪುರ್ಣಗೊಳಿಸಬೇಕು. ಕೋವಿಡ್ ಸನ್ನಿವೇಶನದ ಹಿನ್ನೆಲೆಯಲ್ಲಿ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸಲು ಸಾಧ್ಯವಾಗದಿದ್ದಲ್ಲಿ, ಪರ್ಯಾಯ ಮಾರ್ಗಗಳ ಮೂಲಕ ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸೂಚಿಸಲಾಗಿದೆ.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications