ರಾಜ್ಯದಲ್ಲಿ ಇಂದಿನಿಂದ ದ್ವಿತೀಯು ಪಿಯುಗೆ ಆನ್ಲೈನ್ ತರಗತಿ ಶುರು
ಬೆಂಗಳೂರು, ಜುಲೈ 15: ಪ್ರಸಕ್ತ ಶೈಕ್ಷಣಿಕ ಸಾಲಿನ(2021-22) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 15ರಿಂದ ಆನ್ಲೈನ್ ಮೂಲಕ ತರಗತಿಗಳನ್ನು ಆರಂಭಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಪಿಯು ಕಾಲೇಜುಗಳಿಗೆ ಆದೇಶಿಸಿದೆ.
ಪ್ರಸಕ್ತ ಸಾಲಿನ ಭೌತಿಕ ತರಗತಿಗಳ ಆರಂಭದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಜು.15ರಿಂದ ಆನ್ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಪಾಠ ಮಾಡಬೇಕು.
ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೆ ತರಗತಿಗಳನ್ನು ನಡೆಸಬೇಕು. ಒಂದು ಗಂಟೆಗೆ ಒಂದು ತರಗತಿಯಂತೆ ನಿತ್ಯ ನಾಲ್ಕು ತರಗತಿಗಳನ್ನು ನಡೆಸಬೇಕು. ಮಧ್ಯಾಹ್ನ 12ರಿಂದ 12.30ರವರೆಗೆ ವಿರಾಮ ನೀಡಬೇಕೆಂದು ಸೂಚಿಸಿದೆ.

ಆದರೆ ಈ ಬಾರಿ ಉಪನ್ಯಾಸಕರು, ತಾವು ಸೇವೆ ನಿರ್ವಹಿಸುತ್ತಿರುವ ಕಾಲೇಜುಗಳಿಂದಲೇ, ಎಮ್ ಎಸ್ ಟೀಮ್, ಗೂಗಲ್ ಮೀಟ್, ಜೂಮ್ ಅಥವಾ ಜಿಯೋ ಮೀಟ್ಗಳನ್ನು ಉಪಯೋಗಿಸಿಕೊಂಡು ಪಾಠ ಮಾಡಲಿದ್ದಾರೆ. ಇದಕ್ಕೆ ಸಂಬಂದಿಸಿದಂತೆ ಪದವಿ ಪೂರ್ವ ಕಾಲೆಜಿನ ಪ್ರಾಂಶುಪಾಲರು ಸಾಮಾನ್ಯ ವರ್ಷಗಳಂತೆ ಎಲ್ಲಾ ತರಗತಿಗಳಿಗೆ ಅನ್ವಯವಾಗುವಂತೆ ವೇಳಾ ಪಟ್ಟಿಯನ್ನು ತಯಾರಿಸಿದ್ದಾರೆ.
ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗುವುದಿಲ್ಲವಾದರೂ ಪ್ರತಿಯೊಂದು ಕಾಲೇಜಲ್ಲಿ ಕೋವಿಡ್-19 ಸಂಬಂಧಿಸಿದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಯೇ ಪಾಠ ಮಾಡಬೇಕೆಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಹಾಗೆಯೇ, ಸದರಿ ವ್ಯವಸ್ಥೆಯನ್ನು ಎಲ್ಲ ಕಾಲೇಜಿಗಳು ಅನೂಚಾನಾಗಿ ಪಾಲಿಸುತ್ತಿರುವ ಬಗ್ಗೆ ಉಪ ನಿರ್ದೇಶಕರುಗಳು ಕೇಂದ್ರ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಪದವಿ ಪುರ್ವ ಕಾಲೇಜುಗಳಲ್ಲಿ ತರಗತಿಗಳನ್ನು ಸೂಕ್ತ ರೀತಿಯಲ್ಲಿ ನಡೆಸುತ್ತಿರುವ ಬಗ್ಗೆ ಆಯಾ ಜಿಲ್ಲೆಗಳ ಉಪ ನಿರ್ದೇಶಕರು ಆಗಾಗ ಕಾಲೇಜುಗಳಿಗೆ ಭೇಟಿ ನೀಡಿ ಖಾತರಿ ಪಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.
ಜುಲೈ 7ರಿಂದಲೇ ಉಪನ್ಯಾಸಕರು ಕಾಲೇಜುಗಳಿಗೆ ಹಾಜರಾಗುತ್ತಿರುವುದರಿಂದ ಮತ್ತು ಪ್ರಸಕ್ತ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಕ್ರಿಯೆ ಆರಂಭವಾಗಿರದ ಕಾರಣ ತರಗತಿಗಳನ್ನು ಆರಂಭಿಸಲೇ ಬೇಕಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು ತಾವಿರುವ ಕಾಲೇಜುಗಳಿಂದ ಪಾಠಗಳನ್ನು ತೆಗೆದುಕೊಳ್ಳಬೇಕು ಅಂತ ಹೇಳಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications