ರಾಜ್ಯದಲ್ಲಿ ಇಂದಿನಿಂದ ದ್ವಿತೀಯು ಪಿಯುಗೆ ಆನ್ಲೈನ್ ತರಗತಿ ಶುರು
ಬೆಂಗಳೂರು, ಜುಲೈ 15: ಪ್ರಸಕ್ತ ಶೈಕ್ಷಣಿಕ ಸಾಲಿನ(2021-22) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 15ರಿಂದ ಆನ್ಲೈನ್ ಮೂಲಕ ತರಗತಿಗಳನ್ನು ಆರಂಭಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಪಿಯು ಕಾಲೇಜುಗಳಿಗೆ ಆದೇಶಿಸಿದೆ.
ಪ್ರಸಕ್ತ ಸಾಲಿನ ಭೌತಿಕ ತರಗತಿಗಳ ಆರಂಭದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಜು.15ರಿಂದ ಆನ್ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಪಾಠ ಮಾಡಬೇಕು.
ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೆ ತರಗತಿಗಳನ್ನು ನಡೆಸಬೇಕು. ಒಂದು ಗಂಟೆಗೆ ಒಂದು ತರಗತಿಯಂತೆ ನಿತ್ಯ ನಾಲ್ಕು ತರಗತಿಗಳನ್ನು ನಡೆಸಬೇಕು. ಮಧ್ಯಾಹ್ನ 12ರಿಂದ 12.30ರವರೆಗೆ ವಿರಾಮ ನೀಡಬೇಕೆಂದು ಸೂಚಿಸಿದೆ.

ಆದರೆ ಈ ಬಾರಿ ಉಪನ್ಯಾಸಕರು, ತಾವು ಸೇವೆ ನಿರ್ವಹಿಸುತ್ತಿರುವ ಕಾಲೇಜುಗಳಿಂದಲೇ, ಎಮ್ ಎಸ್ ಟೀಮ್, ಗೂಗಲ್ ಮೀಟ್, ಜೂಮ್ ಅಥವಾ ಜಿಯೋ ಮೀಟ್ಗಳನ್ನು ಉಪಯೋಗಿಸಿಕೊಂಡು ಪಾಠ ಮಾಡಲಿದ್ದಾರೆ. ಇದಕ್ಕೆ ಸಂಬಂದಿಸಿದಂತೆ ಪದವಿ ಪೂರ್ವ ಕಾಲೆಜಿನ ಪ್ರಾಂಶುಪಾಲರು ಸಾಮಾನ್ಯ ವರ್ಷಗಳಂತೆ ಎಲ್ಲಾ ತರಗತಿಗಳಿಗೆ ಅನ್ವಯವಾಗುವಂತೆ ವೇಳಾ ಪಟ್ಟಿಯನ್ನು ತಯಾರಿಸಿದ್ದಾರೆ.
ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗುವುದಿಲ್ಲವಾದರೂ ಪ್ರತಿಯೊಂದು ಕಾಲೇಜಲ್ಲಿ ಕೋವಿಡ್-19 ಸಂಬಂಧಿಸಿದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಯೇ ಪಾಠ ಮಾಡಬೇಕೆಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಹಾಗೆಯೇ, ಸದರಿ ವ್ಯವಸ್ಥೆಯನ್ನು ಎಲ್ಲ ಕಾಲೇಜಿಗಳು ಅನೂಚಾನಾಗಿ ಪಾಲಿಸುತ್ತಿರುವ ಬಗ್ಗೆ ಉಪ ನಿರ್ದೇಶಕರುಗಳು ಕೇಂದ್ರ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಪದವಿ ಪುರ್ವ ಕಾಲೇಜುಗಳಲ್ಲಿ ತರಗತಿಗಳನ್ನು ಸೂಕ್ತ ರೀತಿಯಲ್ಲಿ ನಡೆಸುತ್ತಿರುವ ಬಗ್ಗೆ ಆಯಾ ಜಿಲ್ಲೆಗಳ ಉಪ ನಿರ್ದೇಶಕರು ಆಗಾಗ ಕಾಲೇಜುಗಳಿಗೆ ಭೇಟಿ ನೀಡಿ ಖಾತರಿ ಪಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.
ಜುಲೈ 7ರಿಂದಲೇ ಉಪನ್ಯಾಸಕರು ಕಾಲೇಜುಗಳಿಗೆ ಹಾಜರಾಗುತ್ತಿರುವುದರಿಂದ ಮತ್ತು ಪ್ರಸಕ್ತ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಕ್ರಿಯೆ ಆರಂಭವಾಗಿರದ ಕಾರಣ ತರಗತಿಗಳನ್ನು ಆರಂಭಿಸಲೇ ಬೇಕಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು ತಾವಿರುವ ಕಾಲೇಜುಗಳಿಂದ ಪಾಠಗಳನ್ನು ತೆಗೆದುಕೊಳ್ಳಬೇಕು ಅಂತ ಹೇಳಲಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications