ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್
ಬೆಂಗಳೂರು, ಮಾ. 11: ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 12, ಗುರುವಾರ ಆರಂಭವಾಗಲಿದ್ದು ಮಾ. 27ಕ್ಕೆ ಕೊನೆಗೊಳ್ಳಲಿದೆ. ಪರೀಕ್ಷೆಗಳು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.15ರ ವರೆಗೆ ನಡೆಯಲಿವೆ.
ರಾಜ್ಯದಲ್ಲಿ ಒಟ್ಟು 1,017 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.6, 10, 939 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. 82,067 ಪುನರಾವರ್ತಿತ ವಿದ್ಯಾರ್ಥಿಗಳು, 4,96,900 ಹೊಸ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.[ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್ ಮಾಡಿ]

5,546 ಸಿಬ್ಬಂದಿಯನ್ನು ಪರೀಕ್ಷೆಗಾಗಿ ನಿಯೋಜನೆ ಮಾಡಲಾಗುತ್ತದೆ. ಇವರಲ್ಲಿ 1,017 ಅಧೀಕ್ಷಕರು, 1,017 ಸಹ ಮುಖ್ಯ ಅಧೀಕ್ಷಕರು, 2,657 ಜಾಗೃತದಳದ ಸದಸ್ಯರು, 855 ತಾಲೂಕು ಮತ್ತು ಜಿಲ್ಲಾ ವಿಶೇಷ ಜಾಗೃತದಳದ ಸದಸ್ಯರು ಸೇರಿದ್ದಾರೆ. ಮಾರ್ಚ್ 12 ರಂದು ಬಿಸಿನಸ್ ಸ್ಟಡೀಸ್ ಮತ್ತು ಕೆಮೆಸ್ಟ್ರಿ ಪರೀಕ್ಷೆಗಳು ನಡೆಯಲಿವೆ.[ಆನ್ ಲೈನ್ ನಲ್ಲಿ ಸಿಇಟಿ ಅರ್ಜಿ ತುಂಬುವುದು ಹೇಗೆ?]
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಅಲ್ಲದೇ ಸುತ್ತ ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ನೀಡಲಾಗಿದೆ ಎಂದು ಪಿಯು ಪರೀಕ್ಷಾ ಮಂಡಳಿ ನಿರ್ದೇಶಕಿ ಸುಷಮಾ ಗೋಡಬೋಲೆ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಕುರಿತ ಗೊಂದಲಗಳನ್ನು ಬಗೆಹರಿಸಲು ಪಿಯು ಮಂಡಳಿ ಸಹಾಯವಾಣಿ ಆರಂಭಿಸಿದೆ. ಸಹಾಯವಾಣಿ ಸಂಖ್ಯೆಗಳು 080-23468740/ 8741
ವಿದ್ಯಾರ್ಥಿಗಳಿಗೆ ಕೆಲವು ಸಲಹೆಗಳು...
* ಪರೀಕ್ಷೆಗೆ ಹೊರಡುವ ಮುನ್ನ ಪ್ರವೇಶ ಪತ್ರ, ಪೆನ್ ಮುಂತಾದ ಅಗತ್ಯವಿರುವ ವಸ್ತುಗಳನ್ನು ಮರೆಯದಿರಿ
* ಒತ್ತಡಕ್ಕೆ ಒಳಗಾಗದೆ ಪ್ರಶ್ನೆಗಳನ್ನು ಸರಿಯಾಗಿ ಓದಿಕೊಂಡು ಉತ್ತರಿಸಿ
* ವಿಶ್ವಕಪ್ ಕ್ರಿಕೆಟ್ ನಿಂದ ದೂರವಿರಿ. ಮುಗಿದ ಪರೀಕ್ಷೆಗಳ ಬಗ್ಗೆ ಹೆಚ್ಚು ಯೋಚಿಸದೆ ಮುಂದಿನ ವಿಷಯಕ್ಕೆ ಸಜ್ಜಾಗಿ
* ಪರೀಕ್ಷಾ ಕೇಂದ್ರಗಳಿಗೆ ಅರ್ಧಗಂಟೆ ಮೊದಲು ಹಾಜರಾಗಿ ಒನ್ ಇಂಡಿಯಾ ಕನ್ನಡ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications