ಏಳು ದಿನಗಳಲ್ಲಿ ರಾಜ್ಯದ ಪ್ರಕರಣಗಳ ಸಂಖ್ಯೆ ಶೇ.241ರಷ್ಟು ಹೆಚ್ಚಳ

ಬೆಂಗಳೂರು ಜನವರಿ 03: ಒಂದು ವಾರದ ಅವಧಿಯಲ್ಲಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಮೂರನೇ ಅಲೆಯ ಭೀತಿ ಹೆಚ್ಚಾಗಿದೆ. ದೇಶದಾದ್ಯಂತ ಓಮಿಕ್ರಾನ್ ಹೆಚ್ಚಳವಾಗುತ್ತಿದ್ದು ಕರ್ನಾಟಕದಲ್ಲೂ ಓಮಿಕ್ರಾನ್ ವೇಗವಾಗಿ ಹರಡುತ್ತಿದೆ. ದೇಶದಲ್ಲಿ ವರದಿಯಾದ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕವು ಶೇಕಡಾ 241 ರಷ್ಟು ಹೆಚ್ಚಳವನ್ನು ಕಂಡಿದೆ. ಭಾನುವಾರ ರಾಜ್ಯದಲ್ಲಿ 1,187 ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10,292 ರಷ್ಟಿದ್ದು, ಅದರಲ್ಲಿ ಬೆಂಗಳೂರಿನಲ್ಲೇ 8,671 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಆರು ಸಾವುಗಳು ವರದಿಯಾಗಿದ್ದು, ಬೆಂಗಳೂರು ನಗರದಿಂದ ಮೂರು ಮತ್ತು ದಕ್ಷಿಣ ಕನ್ನಡ, ತುಮಕೂರು ಮತ್ತು ಉತ್ತರ ಕನ್ನಡದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಪರಿಸ್ಥಿತಿಯನ್ನು ವಿಶ್ಲೇಷಿಸಲು ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸಭೆ ಭಾನುವಾರ ನಡೆಯಿತು. ಮಾಲ್‌ಗಳು, ಮದುವೆ ಮಂಟಪಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಸಮಿತಿಯ ಸದಸ್ಯರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾತ್ರಿ ಕರ್ಫ್ಯೂ ವಿಸ್ತರಿಸುವ ನಿರ್ಧಾರವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಪರಿಸ್ಥಿತಿ ಮತ್ತು ಸಾಂಕ್ರಾಮಿಕ ರೋಗ ಹರಡುವಿಕೆಯ ಬಗ್ಗೆ ಚರ್ಚಿಸಿದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜನರು ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದರೆ ಲಾಕ್‌ಡೌನ್ ಅನ್ನು ವಿಧಿಸಲಾಗುತ್ತದೆಯೇ ಎಂದು ಕೇಳಿದಾಗ, ಬೊಮ್ಮಾಯಿ, ರಾಜ್ಯ ಸರ್ಕಾರವು ಅದರ ಬಗ್ಗೆ ಬಹಳ ಸ್ಪಷ್ಟವಾಗಿದೆ ಮತ್ತು ಸಾರ್ವಜನಿಕ ಹಿತಾಸಕ್ತಿಗಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಲಾಕ್‌ಡೌನ್ ಹೇರಲು ಸರ್ಕಾರವನ್ನು ಒತ್ತಾಯಿಸುವಂತಹ ಪರಿಸ್ಥಿತಿಯನ್ನು ಜನರು ಸೃಷ್ಟಿಸುವುದನ್ನು ತಪ್ಪಿಸಬೇಕು ಎಂದು ಅವರು ಹೇಳಿದರು.

Karnataka sees a 241% increase in number of cases in seven days

ನೈಟ್‌ ಕರ್ಫ್ಯೂ ಜಾರಿ:

ರಾಜ್ಯದಲ್ಲಿ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಗೊಳಿಸಿದೆ. ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಗ್ಗೆ ಐದರ ವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ. ರಾಜ್ಯದಲ್ಲಿ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೆ ತರಲಾಗಿದೆ.

ರಾಜ್ಯದಲ್ಲಿ ಕೊರೋನಾ ಮತ್ತು ಓಮಿಕ್ರಾನ್ ರೂಪಾಂತರಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮತ್ತೆ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಆಯುಕ್ತ ರಣದೀಪ್, ರಾಜ್ಯದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಜೊತೆಗೆ ಫೆಬ್ರವರಿ ತಿಂಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗಲಿದೆ ಎಂದು ತಜ್ಞರು ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿ ಮೂರನೇ ಅಲೆ ಸುಳಿವು ನೀಡಿದ್ದು, ದೆಹಲಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ತಜ್ಞರು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದರು.

ರಾಜ್ಯದಲ್ಲಿರುವ ವಸತಿ, ಶಾಲೆ, ಹಾಸ್ಟೆಲ್, ಅಪಾರ್ಟ್ ಮೆಂಟ್, ಮಾಲ್ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಮ ಪಾಲಿಸಬೇಕು , ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು, ಕ್ಲಸ್ಟರ್ ಗಳಿಂದ ಶೇ.30 ರಷ್ಟು ಎಲ್ಲ ಮಾದರಿಗಳನ್ನು ಕಡ್ಡಾಯವಾಗಿ ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಬೇಕೆಂದು ತಜ್ಞರು ಶಿಫಾರಸ್ಸು ಮಾಡಿರುವುದಾಗಿ ಅವರು ತಿಳಿಸಿದರು.

Recommended Video

      ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತದಿಂದ 12 ಭಕ್ತರ ಸಾವು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+