3 ದಿನದಲ್ಲಿ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ: ಕಿಮ್ಮನೆ ರತ್ನಾಕರ್
ಬೆಂಗಳೂರು, ಅಕ್ಟೋಬರ್. 14: ಪ್ರೌಢಶಾಲಾ ಶಿಕ್ಷಕರ ಆಯ್ಕೆ ಪಟ್ಟಿಯನ್ನು 3 ದಿನದೊಳಗೆ ಮತ್ತು 10 ದಿನದ ಬಳಿಕ ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಲಿದೆ.
ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಆಯ್ಕೆ ಪ್ರಕ್ರಿಯೆ ಮುಗಿದಿದ್ದು ಯಾವುದೇ ಗೊಂದಲ ಇಲ್ಲ. ಮೊದಲಿಗೆ 1130 ಮಂದಿ ಪ್ರೌಢಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಇದಾದ ಮೇಲೆ 9511 ಜನ ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ನೀಡಲಾಗುತ್ತದೆ ಎಂದು ತಿಳಿಸಿದರು.[ಶಿಕ್ಷಕರಿಗೂ ಗ್ರಾಮೀಣ ಸೇವೆ ಕಡ್ಡಾಯ : ಕಿಮ್ಮನೆ ರತ್ನಾಕರ್]

28 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಮೊದಲಿಗೆ ಕೊರತೆ ಇರುವ ಜಾಗಗಳನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು. ಉಳಿದ ಹುದ್ದೆಗಳನ್ನು 2 ಕಂತುಗಳಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆಯ ಒಪ್ಪಿಗೆ ಪಡೆಯಲಾಗುವುದು ಎಂದು ತಿಳಿಸಿದರು.
ಶಿಕ್ಷಕರ ನೇಮಕದಲ್ಲಿ ಶಿಕ್ಷಣ ಇಲಾಖೆ ವಿಳಂಬ ಅನುಸರಿಸುತ್ತಿದೆ. ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ಶಿಕ್ಷಣ ಇಲಾಖೆಗೆ ಪತ್ರ ಬರೆದು ಅಸಾಮಾಧಾನ ಹೊರ ಹಾಕಿದ್ದರು.[ಮೇಷ್ಟ್ರೇ, ಶಾಲಾ ಮಕ್ಕಳ ಗಲ್ಲ ಗಿಂಜ್ತೀರಾ? ಹುಷಾರ್!]
ಪಿಯು ಉಪನ್ಯಾಸಕರ ನೇಮಕ
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅಂಕಮಿತಿ ಸಡಿಲಗೊಳಿಸುವುದು ಮತ್ತು ಬಡ್ತಿಗೆ ಸಂಬಂಧಿಸಿದಂತೆ ನಿಯಮಾವಳಿ ತಿದ್ದುಪಡಿ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಪಿಯು ಉಪನ್ಯಾಸಕರ ನೇಮಕಾತಿ ವಿಳಂಬವಾಗುತ್ತಿದೆ ಹೊರತು ಬೇರೆ ಯಾವುದೇ ಕಾರಣವಿಲ್ಲ ಎಂದು ತಿಳಿಸಿದರು.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ












Click it and Unblock the Notifications