ಕರ್ನಾಟಕದಲ್ಲಿ ಮತ್ತೊಂದು ಪರಮಾಣು ಸ್ಥಾವರ ನಿರ್ಮಾಣ?
ಬೆಂಗಳೂರು, ಮಾ.9 : ಕರ್ನಾಟಕದಲ್ಲಿ ಮತ್ತೊಂದು ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣವಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ. ಅಣು ಸ್ಥಾವರ ನಿರ್ಮಾಣ ಕುರಿತು ಕೇಂದ್ರ ಸರ್ಕಾರ ಕಳುಹಿಸಿದ್ದ ಪ್ರಸ್ತಾವನೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ಒಪ್ಪಿಗೆ ಸೂಚಿಸಿವೆ ಎಂದು ತಿಳಿದುಬಂದಿದೆ.
ಭಾರತದಲ್ಲಿ 12 ಪರಮಾಣು ಸ್ಥಾವರಗಳನ್ನು ನಿರ್ಮಾಣ ಮಾಡಲು ರಿಯಾಕ್ಟರ್ಗಳನ್ನು ಪೂರೈಕೆ ಮಾಡಲು ರಷ್ಯಾ ಆಸಕ್ತಿ ತೋರಿದೆ. ಕೇಂದ್ರ ಸರ್ಕಾರ ಅಣು ಸ್ಥಾವರ ನಿರ್ಮಾಣ ಕುರಿತು ಐದು ರಾಜ್ಯಗಳಿಗೆ ಪ್ರಸ್ತಾವನೆಯನ್ನು ಕಳುಹಿಸಿತ್ತು.[ಕೈಗಾದಲ್ಲಿ ಆರಂಭವಾಗುತ್ತೆ ಇನ್ನೆರಡು ಘಟಕ]
ಪಶ್ಚಿಮ ಬಂಗಾಳ, ಕೇರಳ ಮತ್ತು ಒರಿಸ್ಸಾ ರಾಜ್ಯಗಳು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಳ್ಳಿಹಾಕಿದ್ದು, ಸ್ಥಾವರ ನಿರ್ಮಾಣಕ್ಕಾಗಿ ಭೂಮಿ ನೀಡಲು ಸಾಧ್ಯವಿಲ್ಲ ಎಂದು ಹೇಳಿವೆ. ಆದರೆ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿವೆ ಎಂದು ತಿಳಿದುಬಂದಿದೆ. [ಕೈಗಾ ಸ್ಥಾವರ ಹೊಗೆ ಆತಂಕ ಬೇಡ]

ಎಲ್ಲಿ ಅಣುಸ್ಥಾವರ ನಿರ್ಮಾಣ : ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ ಈಗಾಗಲೇ ಪರಮಾಣು ವಿದ್ಯುತ್ ಸ್ಥಾವರವಿದೆ. ಸದ್ಯ ಮತ್ತೊಂದು ಘಟಕವನ್ನು ಆರಂಭವಾಗುವುದಾದದರೆ, ಯಾವ ಜಿಲ್ಲೆಯಲ್ಲಿ? ಎಂಬ ಪ್ರಶ್ನೆ ಎದ್ದಿದೆ. ಘಟಕ ನಿರ್ಮಿಸಲು ಹೆಚ್ಚಿನ ನೀರಿನ ಅಗತ್ಯವಿದೆ. ಆದ್ದರಿಂದ ಯಾವ ಜಿಲ್ಲೆ ಆಯ್ಕೆ ಮಾಡಲಾಗುತ್ತದೆ ಎಂಬುದು ಸದ್ಯದ ಪ್ರಶ್ನೆ. [ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ, ಏಪ್ರಿಲ್ ನಿಂದ ಜಾರಿ]
ಕೈಗಾದಲ್ಲಿ ನಿರ್ಮಿಸಿರುವ ಪರಮಾಣು ಸ್ಥಾವರದ ಪರ-ವಿರೋಧ ಹೋರಾಟಗಳು ಈಗಲೂ ಜಾರಿಯಲ್ಲಿವೆ. ಇವುಗಳ ನಡುವೆಯೇ ಕರ್ನಾಟಕ ಸರ್ಕಾರ ಮತ್ತೊಂದು ಅಣು ಸ್ಥಾವರ ನಿರ್ಮಾಣ ಮಾಡಲು ಒಪ್ಪಿಗೆ ನೀಡಿದೆಯೇ?. ಸರ್ಕಾರದ ಕಡೆಯಿಂದ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ಇನ್ನೂ ಹೊರಬಂದಿಲ್ಲ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications