ರಾಜ್ಯದಲ್ಲಿ ಮರಣ ಪ್ರಮಾಣಪತ್ರ ವಿತರಣೆ: ಸರ್ಕಾರದಿಂದ ಮಹತ್ವ ಆದೇಶ
Death Certificate: ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಮರಣ ಪ್ರಮಾಣಪತ್ರ ವಿತರಣೆ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಿದೆ. ಈ ಸಂಬಂಧ ಶನಿವಾರ ನಮ್ಮ ಸರ್ಕಾರ ಪ್ರಮುಖ ಸುತ್ತೋಲೆ ಹೊರಡಿಸಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದಾರೆ. ಏನೆಲ್ಲ ನಿಯಮಗಳು ಜಾರಿಯಾಗಿದೆ. ವಿತರಣೆಗೆ ಏನೆಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ವಿವರ ಇಲ್ಲಿದೆ.
ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್ ಪೋಸ್ಟ್ ನಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣಪತ್ರ (MCCD) ವಿತರಣಾ ವ್ಯವಸ್ಥೆಯನ್ನು ಪಾರದರ್ಶಕವಾಗಿ ಮತ್ತು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವ ಕುರಿತು ಆರೋಗ್ಯ ಇಲಾಖೆ ಮೂಲಕ ಹೊರಡಿಸಿದ ಸುತ್ತೋಲೆ ಇದಾಗಿದೆ ಎಂದರು.

ಕೇಂದ್ರ ಸರ್ಕಾರದ ಅಧಿಸೂಚನೆಯಂತೆ, ಕರ್ನಾಟಕದಲ್ಲಿ ನೋಂದಣಿ ಮತ್ತು ಜನನ ಮತ್ತು ಮರಣ (ತಿದ್ದುಪಡಿ) ನಿಯಮಗಳು, 2024 ಅನ್ನು 2025 ಜನವರಿ 16, ರಿಂದ ಜಾರಿಗೆ ತರಲಾಗುತ್ತಿದೆ. ಪ್ರಸ್ತುತ ದೃಢೀಕರಿಸಿರುವ ಶೇಕಡಾ 26.73ರಷ್ಟು ಮರಣ ಪ್ರಮಾಣದ ನೋಂದಣಿಯ ವ್ಯಾಪ್ತಿಯನ್ನು ಹೆಚ್ಚಿಸುವುದು. ಈ ನೆಲದ ಯಾವುದೇ ನಾಗರಿಕರ ಸಹಜ ಅಥವಾ ಅಸಹಜ ಸಾವಾದರೂ ಅದನ್ನು ವೈದ್ಯಕೀಯ ಇಲಾಖೆಯ ನಿಯಮದ ಅನ್ವಯ ನೋಂದಣಿಯಲ್ಲಿ ಬಿಟ್ಟುಹೋಗದಂತೆ ದಾಖಲೆಗೆ ಸೇರಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.
ಈ ಕಾರಣದಿಂದ ಆರೋಗ್ಯ ಸಂಸ್ಥೆಗಳಿಗೆ ಕಡ್ಡಾಯ ನಿಯಮ
1. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಸಂಭವಿಸುವ ಪ್ರತಿ ಮರಣಕ್ಕೂ ಕಡ್ಡಾಯವಾಗಿ MCCD (ಫಾರ್ಮ್ 4/4A) ನೀಡಬೇಕು.
2. MCCD ಅನ್ನು eJanMa ಮೂಲಕ ಸ್ಥಳೀಯ ರಿಜಿಸ್ಟರ್ಗೆ ಎಲೆಕ್ಟ್ರಾನಿಕ್ ರೂಪದಲ್ಲಿ ಸಲ್ಲಿಸಬೇಕು.
3. ಮರಣ ಸಂಭವಿಸಿದ 10 ದಿನಗಳ ಒಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
4. ಯಾವುದೇ ಮರಣಗಳು ಸಂಭವಿಸದಿದ್ದರೂ ಸಹ ('ಶೂನ್ಯ ವರದಿ'/Nil Report) ಮಾಸಿಕ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.
-
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
ದುಬೈಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು: ಪಿ.ವಿ ಸಿಂಧು, ಭೋಜೇಗೌಡ ಸೇರಿದಂತೆ ಹಲವರು ಬೆಂಗಳೂರಿಗೆ ವಾಪಾಸ್ -
ಜೈಲಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ವ್ಯವಸ್ಥೆಗೆ ಬ್ರೇಕ್ ಹಾಕಿದ ಹೈಕೋರ್ಟ್ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ?












Click it and Unblock the Notifications