ಜಿಎಸ್‌ಟಿ ಬಗ್ಗೆ ಚರ್ಚಿಸಲು ಕರೆದಿದ್ದ ವಿಶೇಷ ಅಧಿವೇಶನ ರದ್ದು

ಬೆಂಗಳೂರು, ಸೆಪ್ಟೆಂಬರ್ 10 : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಕರೆದಿದ್ದ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನವನ್ನು ರದ್ದುಗೊಳಿಸಲಾಗಿದೆ. ಸೆ.14ರಂದು ವಿಶೇಷ ಅಧಿವೇಶನ ಕರೆಯಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹತ್ವದ ಜಿಎಸ್‌ಟಿ ವಿಧೇಯಕ ಅಂಗೀಕಾರವಾಗಿದೆ. ವಿಧೇಯಕವನ್ನು ರಾಜ್ಯದಲ್ಲಿಯೂ ಅಂಗೀಕರಿಸಲು ವಿಶೇಷ ಅಧಿವೇಶನ ಕರೆಯಲಾಗಿತ್ತು.[ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]

tb jayachandra

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, 'ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈಗಾಗಲೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬಿಲ್‌ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಆದ್ದರಿಂದ, ವಿಶೇಷ ಅಧಿವೇಶನ ರದ್ದುಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ' ಎಂದರು.[ಕರ್ನಾಟಕದ ಆದಾಯದ ಮೇಲೆ ಜಿಎಸ್ಟಿ ಪರಿಣಾಮವೇನು?]

ಬೆಂಗಳೂರಿನ ವಿಧಾನಸೌಧದಲ್ಲಿ ಸೆ.14ರ ಬುಧವಾರ ವಿಶೇಷ ಅಧಿವೇಶ ನಡೆಸಿ, ಸರಕು ಮತ್ತು ಸೇವಾ ತೆರಿಗೆ ವಿಧೇಯಕವನ್ನು ಮಂಡನೆ ಮಾಡಲು ನಿರ್ಧರಿಸಲಾಗಿತ್ತು. ರಾಷ್ಟ್ರದಾದ್ಯಂತ ಏಕರೂಪ ತೆರಿಗೆಯನ್ನು ಜಾರಿಗೆ ತರುವ, ಸರಕು ಮತ್ತು ಸೇವಾ ತೆರಿಗೆ ವಿಧೇಯಕ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ.[ಜಿಎಸ್ಟಿ ಪರಿಣಾಮ, ಯಾವುದು ಏರಿಕೆ? ಯಾವುದು ಇಳಿಕೆ?]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+