ಜಯಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಕರ್ನಾಟಕ ಖರ್ಚು ಮಾಡಿದ್ದು 5 ಕೋಟಿ!
ಕೋರ್ಟ್ ಹಾಲ್ ಸಿದ್ಧಪಡಿಸುವುದು, ನ್ಯಾಯಾಧೀಶರ ಸಂಬಳ, ಅನುವಾದ ಮಾಡುವ ವೆಚ್ಚ, ಲಾಯರ್ ಗಳ ಫೀಸು ಎಂದು 2003ರಿಂದ 2015ರ ಅಂತ್ಯಕ್ಕೆ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಕರ್ನಾಟಕ ಸರಕಾರ ಬರೋಬ್ಬರಿ 5 ಕೋಟಿ ಖರ್ಚು ಮಾಡಿದೆ.
ಬೆಂಗಳೂರು, ಫೆಬ್ರವರಿ 16: ಬರೋಬ್ಬರಿ ಎರಡು ದಶಕಗಳ ಕಾಲ ತನಿಖೆ, ವಿಚಾರಣೆ, ರಾಜಕೀಯ ದೊಂಬರಾಟಗಳನ್ನು ದಾಟಿ ಕೊನೆಗೂ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣಕ್ಕೆ ಪೂರ್ಣ ವಿರಾಮ ಹಾಕಲಾಗಿದೆ. ಇದೀಗ ಪ್ರಕರಣದಲ್ಲಾದ ಖರ್ಚನ್ನು ಕರ್ನಾಟಕ ತಮಿಳುನಾಡು ಸರಕಾರದಿಂದ ಪಡೆದುಕೊಳ್ಳಬೇಕಾಗಿದೆ.
2003 ರಲ್ಲಿ ಸುಪ್ರಿಂ ಕೋರ್ಟ್ ಈ ಪ್ರಕರಣವನ್ನು ಕರ್ನಾಟಕಕ್ಕೆ ವರ್ಗಾಯಿಸಿತ್ತು. ತಮಿಳುನಾಡಿನಲ್ಲಿ ಸರಿಯಾಗಿ ವಿಚಾರಣೆ ಸಾಧ್ಯವಿಲ್ಲ ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿತ್ತು. ಹೀಗೆ 2003ರಿಂದ ಪ್ರಕರಣದ ಎಲ್ಲಾ ಖರ್ಚು ವೆಚ್ಚಗಳನ್ನು ಕರ್ನಾಟಕ ಸರಕಾರವೇ ಭರಿಸುತ್ತಾ ಬಂದಿದೆ.[ಜಯಲಲಿತಾ 100 ಕೋಟಿ ದಂಡವನ್ನು ಕೊರ್ಟ್ ಹೀಗೆ ವಸೂಲಿ ಮಾಡುತ್ತೆ!]

ಕೋರ್ಟ್ ಹಾಲ್ ಸಿದ್ಧಪಡಿಸುವುದು, ನ್ಯಾಯಾಧೀಶರ ಸಂಬಳ, ಅನುವಾದ ಮಾಡುವ ವೆಚ್ಚ, ಲಾಯರ್ ಗಳ ಫೀಸು ಎಂದು 2015ರ ಅಂತ್ಯಕ್ಕೆ ಪ್ರಕರಣದಲ್ಲಿ ಕರ್ನಾಟಕ ಸರಕಾರ ಬರೋಬ್ಬರಿ 5 ಕೋಟಿ ಖರ್ಚು ಮಾಡಿದೆ.
ಇದು ಕೋರ್ಟಗಳ ಖರ್ಚಾದರೆ ಇನ್ನೂ ಹಲವು ವೆಚ್ಚಗಳನ್ನು ಕರ್ನಾಟಕ ಸರಕಾರವೇ ಭರಿಸಿದೆ. ಅವುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮುಂತಾದವು ಸೇರಿದೆ. ಈಗಾಗಲೇ ಕಾನೂನು ಸಚಿವ ಟಿಬಿ ಜಯಚಂದ್ರ, "ಖರ್ಚುಗಳನ್ನು ಲೆಕ್ಕ ಹಾಕಲಾಗುತ್ತಿದೆ. ನಾವೀಗಾಗಲೇ ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದೇವೆ. ವೆಚ್ಚಗಳನ್ನು ಪಾವತಿಸುವಂತೆ ತಮಿಳುನಾಡು ಸರಕಾರ ಪತ್ರ ಬರೆಯಲಿದ್ದೇವೆ," ಎಂದು ತಿಳಿಸಿದ್ದಾರೆ.[ಜಯಲಲಿತಾ ಗೆಳತಿ ಶಶಿಕಲಾ ನಟರಾಜನ್ ಕೈದಿ ನಂಬರ್ 9934]
ಖರ್ಚುಗಳ ಪಟ್ಟಿ ಒಮ್ಮೆ ಅಂತಿಮವಾದ ನಂತರ ಕರ್ನಾಟಕ ಸರಕಾರ ತಮಿಳುನಾಡು ಮುಖ್ಯಕಾರ್ಯದರ್ಶಿಗೆ ಖರ್ಚು ವೆಚ್ಚಗಳನ್ನು ಪಾವತಿಸುವಂತೆ ಪತ್ರ ಬರೆಯಲಿದೆ. ಸುಪ್ರಿಂ ಕೋರ್ಟಿನ ಆದೇಶದಂತೆ ಕರ್ನಾಟಕ ಸರಕಾರಕ್ಕೆ ಈ ಹಣವನ್ನು ತಮಿಳುನಾಡು ಪಾವತಿ ಮಾಡಬೇಕು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications