ಎಸ್ಸೆಸ್ಸೆಲ್ಸಿ, ಪಿಯೂ ಫಲಿತಾಂಶ ದಿನಾಂಕ ದೇವರಿಗ್ಗೊತ್ತು
ಬೆಂಗಳೂರು, ಏ 27 : ಈ ಶೈಕ್ಷಣಿಕ ವರ್ಷದ (2014-15) ಕರ್ನಾಟಕ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಯಾವತ್ತು ಪ್ರಕಟವಾಗತ್ತೆ ಅಂತ ನಿಖರವಾಗಿ ಗೊತ್ತಿಲ್ಲ.
ದ್ವಿತೀಯ ಪಿಯುಸಿ ಫಲಿತಾಂಶ ಮೇ ಮೊದಲನೇ ವಾರದಲ್ಲಿ ಬರತ್ತೆ ಅಂತ ಪಿಯು ಮಂಡಳಿ ಈ ಮುಂಚೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿತ್ತೇನೋ ನಿಜ. ಆದರೆ ಇವತ್ತಿನ ಪರಿಸ್ಥಿತಿ ಗಮನಿಸಿದರೆ ಅದು ನಿಜವಾಗುವ ಹಾಗೆ ಕಾಣಿಸುತ್ತಿಲ್ಲ.
ಯಾಕಂದ್ರೆ, ಏಪ್ರಿಲ್ 29-30ರಂದು ನಡೆಯಬೇಕಿದ್ದ ಕರ್ನಾಟಕ ಸಿಇಟಿ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಮುಂದಕ್ಕೆ (ಮೇ 12-13) ಹಾಕಲಾಗಿರುವುದರಿಂದ, ಸಿಇಟಿ ಪರೀಕ್ಷೆಗಿಂತ ಮುಂಚೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಣೆ ಸರಿಯಾಗದು ಎಂಬುದು ಮಂಡಳಿಯ ಚಿಂತನೆ.

ಸಿಇಟಿ ಪರೀಕ್ಷೆ ದಿನಾಂಕ ಮುಂದೂಡಿಕೆಗೆ ಕಾರಣ, ಏಪ್ರಿಲ್ 30ರ ಗುರುವಾರ ಎಲ್ಲಾ ರಾಜ್ಯಗಳ ಸರಕಾರಿ ಬಸ್ ಮುಷ್ಕರ ನಡೆಯೋ ಸಾಧ್ಯತೆ ಇರೋದ್ರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವುದು ಸಿಇಟಿ ಪರೀಕ್ಷೆ ಆಯೋಜಕರ ಮುಂದಾಲೋಚನೆ.
ಬಸ್ ಮುಷ್ಕರ ಯಾಕಂದರೆ, ಎನ್ ಡಿಎ ಸರಕಾರದ 'ರಸ್ತೆ ಸಾರಿಗೆ ಮತ್ತು ಸುರಕ್ಷತಾ ವಿಧೇಯಕ-2015' ವನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸುವುದಕ್ಕೋಸ್ಕರ, ಹಾಗಂತ ಸಿಐಟಿಯು ಗೌರವಾಧ್ಯಕ್ಷ ಎಸ್. ಪ್ರಸನ್ನಕುಮಾರ್ ಹೇಳಿದ್ದಾರೆ.
ಈ ವಿಧೇಯಕ ಬಂದರೆ ರಸ್ತೆ ಸುರಕ್ಷತಾ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಾಗುತ್ತದೆ. ಹೊಸ ನಿಯಮಗಳ ಬಿಸಿ ತಮಗೂ ಮುಟ್ಟುತ್ತದೆ ಅಂತ ಆಟೋ ಚಾಲಕರೂ ಇದೇ ಗುರುವಾರದ ಮುಷ್ಕರಕ್ಕೆ ತಮ್ಮ ಬೆಂಬಲವನ್ನೂ ಕೊಟ್ಟಿದ್ದಾರೆ. ಅಂದರೆ, 30ನೇ ತಾರೀಕು ಗುರುವಾರ ಕರ್ನಾಟಕದಲ್ಲಿ ಅಘೋಷಿತ ಬಂದ್ ಜಾರಿಯಲ್ಲಿರುತ್ತದೆ ಎಂದು ನೀವು ಭಾವಿಸಿಬೇಕು. ರಸ್ತೆ ಸುರಕ್ಷತೆ ದೇಶದ ಜನತೆಗೆ ಬೇಕು, ಆದರೆ ಬಸ್ಸು, ಆಟೋಗಳಿಗೆ ಬೇಡ ಅಂತಾಗುತ್ತೆ.
ಇನ್ನು ದಿನದರ್ಶಿಕೆ ಪ್ರಕಾರ, ಯೋಜಿತ ಮುಷ್ಕರದ ಮಾರನೇ ದಿನ ಶುಕ್ರವಾರ ಮೇ 1 ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ. ಕೆಲವರನ್ನು ಬಿಟ್ಟು ಉಳಿದವರಿಗೆಲ್ಲ ದೇಶವ್ಯಾಪಿ ರಜಾ. ಅದರ ಮಾರನೇ ದಿನ ಶನಿವಾರ, ಜತೆಗೆ ಎಂದಿನಂತೆ ಭಾನುವಾರ.
ಇನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಯಾವತ್ತೂ ಅಂತನೂ ಗೊತ್ತಿಲ್ಲ. ಯಾಕಂದ್ರೆ ಪಿಯೂಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಮುಂಚೆ ಎಸ್ಸೆಸ್ಸೆಲ್ಸಿ ರಿಸಲ್ಟ್ ರಿಲೀಜ್ ಮಾಡುವುದಿಲ್ಲ ಅಂತ ಕರ್ನಾಟಕ ಸೆಕೆಂಡರಿ ಎಜುಕೇಷನ್ ಬೋರ್ಡಿನ ಅಧಿಕಾರಿಗಳು ನಮ್ಮ ವೆಬ್ ಸೈಟ್ ವರದಿಗಾರರಿಗೆ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಎಂಟು ಲಕ್ಷ ವಿದ್ಯಾರ್ಥಿಗಳೂ ಹಾಗೂ ಪಿಯೂಸಿ ಎಕ್ಸಾಂ ಅನ್ನು ಆರು ಲಕ್ಷ ವಿದ್ಯಾರ್ಥಿಗಳೂ ಬರೆದಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮತ್ತು ಅವರ ತಂದೆ, ತಾಯಿ, ಪೋಷಕ ವರ್ಗಕ್ಕೆ ನಮ್ಮ ಶುಭಾಶಯಗಳು ಯಾವತ್ತೂ ಇರತ್ತೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications