2016ರ ಎಸ್ಎಸ್ಎಲ್ಸಿ ಫಲಿತಾಂಶದ ಮುಖ್ಯಾಂಶಗಳು
ಬೆಂಗಳೂರು, ಮೇ 16 : ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇ 79.16 ಫಲಿತಾಂಶ ಬಂದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಮಲ್ಲೇಶ್ವರಂನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿಯೂ ಬಾಲಕಿಯರದ್ದು ಮತ್ತೆ ಮೇಲುಗೈ.
ಒಟ್ಟು ಫಲಿತಾಂಶ:
ರಾಜ್ಯದಲ್ಲಿ ಈ ಬಾರಿ ಒಟ್ಟು 7,79,753 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 6,17,235 ಜನ ತೇರ್ಗಡೆಯಾಗಿದ್ದು ಶೇ. 79.16 ಫಲಿತಾಂಶ ಸಿಕ್ಕಿದೆ.[SSLC ರಿಸಲ್ಟ್ : ಬೆಂಗಳೂರು ಗ್ರಾಮಾಂತರ ಫಸ್ಟ್, ಬಳ್ಳಾರಿ ಲಾಸ್ಟ್]

ಬಾಲಕ ಮತ್ತು ಬಾಲಕಿಯರು
ರಾಜ್ಯದಲ್ಲಿ 3,99,619 ಜನ ಬಾಲಕರು ಪರೀಕ್ಷೆ ತೆಗೆದುಕೊಂಡಿದ್ದು ಅದರಲ್ಲಿ 3,03,088 ತೇರ್ಗಡೆಯಾಗಿ ಶೇ. 75.84 ಫಲಿತಾಂಶ ಪಡೆದುಕೊಂಡಿದ್ದಾರೆ. 3,80,134 ಬಾಲಕಿಯರಲ್ಲಿ 3,14,147 ಬಾಲಕಿಯರು ತೇರ್ಗಡೆಯಾಗಿ ಶೇ. 82.64 ಫಲಿತಾಂಶ ಪಡೆದುಕೊಂಡಿದ್ದಾರೆ.[ಫಲಿತಾಂಶ ಆನ್ಲೈನ್ನಲ್ಲಿ ಲಭ್ಯ]
ಶೂನ್ಯ ಫಲಿತಾಂಶ:
52 ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ. ಮೂರು ಸರ್ಕಾರಿ ಶಾಲೆಗಳು, ಆರು ಅನುದಾನಿತ ಮತ್ತು 43 ಅನುದಾನ ರಹಿತ ಶಾಲೆಗಳು ಶೂನ್ಯ ಫಲಿತಾಂಶ ಪಡೆದಿವೆ. ಕಲಬುರಗಿ ಜಿಲ್ಲೆ ಕುಖ್ಯಾತಿ ಪಡೆದುಕೊಂಡಿದ್ದು 11 ಶಾಲೆಗಳು ಶೂನ್ಯ ದಾಖಲೆ ಮಾಡಿವೆ.
ವಿಶೇಷ ಸಾಮರ್ಥ್ಯದ ವಿದ್ಯಾರ್ಥಿಗಳ ಫಲಿತಾಂಶ:
ಪರೀಕ್ಷೆ ಬರೆದ 2707 ವಿಶೇಷ ಸಾಮರ್ಥ್ಯದ ವಿದ್ಯಾರ್ಥಿಗಳಲ್ಲಿ 1647 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪದವಿ ಪೂರ್ವ ಕಾಲೇಜಿನೊಂದಿಗೆ ಇರುವ ಪ್ರೌಢಶಾಲೆಗಳ ಫಲಿತಾಂಶ ಕಡಿಮೆಯಾಗಿದೆ. ಸ್ವತಂತ್ರ ಪ್ರೌಢಶಾಲೆಗಳು ಶೇ. 75.34 ಫಲಿತಾಂಶ ಪಡೆದರೆ, ಪದವಿ ಪೂರ್ವ ಕಾಲೇಜಿನೊಂದಿಗೆ ಇರುವ ಪ್ರೌಢಶಾಲೆಗಳು ಶೇ. 58.43 ಫಲಿತಾಂಶ ಪಡೆದಿವೆ.
ಗ್ರಾಮೀಣ ಭಾಗದವರೇ ಮುಂದೆ
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶೇ. 80.36 ಫಲಿತಾಂಶ ಪಡೆದರೆ, ನಗರ ಭಾಗದವರು ಶೇ. 77.16 ಫಲಿತಾಂಶ ಪಡೆದು ಕೊಂಚ ಹಿಂದಕ್ಕೆ ಬಿದ್ದಿದ್ದಾರೆ.
ವಿಷಯವಾರು ಫಲಿತಾಂಶ:
1. ಪ್ರಥಮ ಭಾಷೆ- ಶೇ. 91.06
2. ದ್ವಿತೀಯ ಭಾಷೆ-ಶೇ.88.79
3. ತೃತೀಯ ಭಾಷೆ-92.79
4. ಗಣಿತ- ಶೇ. 85.46
5. ವಿಜ್ಞಾನ-ಶೇ.85.97
6. ಸಮಾಜ ವಿಜ್ಞಾನ- ಶೇ. 89.70
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications