2016ರ ಎಸ್ಎಸ್ಎಲ್ಸಿ ಫಲಿತಾಂಶದ ಮುಖ್ಯಾಂಶಗಳು
ಬೆಂಗಳೂರು, ಮೇ 16 : ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇ 79.16 ಫಲಿತಾಂಶ ಬಂದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಮಲ್ಲೇಶ್ವರಂನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿಯೂ ಬಾಲಕಿಯರದ್ದು ಮತ್ತೆ ಮೇಲುಗೈ.
ಒಟ್ಟು ಫಲಿತಾಂಶ:
ರಾಜ್ಯದಲ್ಲಿ ಈ ಬಾರಿ ಒಟ್ಟು 7,79,753 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 6,17,235 ಜನ ತೇರ್ಗಡೆಯಾಗಿದ್ದು ಶೇ. 79.16 ಫಲಿತಾಂಶ ಸಿಕ್ಕಿದೆ.[SSLC ರಿಸಲ್ಟ್ : ಬೆಂಗಳೂರು ಗ್ರಾಮಾಂತರ ಫಸ್ಟ್, ಬಳ್ಳಾರಿ ಲಾಸ್ಟ್]

ಬಾಲಕ ಮತ್ತು ಬಾಲಕಿಯರು
ರಾಜ್ಯದಲ್ಲಿ 3,99,619 ಜನ ಬಾಲಕರು ಪರೀಕ್ಷೆ ತೆಗೆದುಕೊಂಡಿದ್ದು ಅದರಲ್ಲಿ 3,03,088 ತೇರ್ಗಡೆಯಾಗಿ ಶೇ. 75.84 ಫಲಿತಾಂಶ ಪಡೆದುಕೊಂಡಿದ್ದಾರೆ. 3,80,134 ಬಾಲಕಿಯರಲ್ಲಿ 3,14,147 ಬಾಲಕಿಯರು ತೇರ್ಗಡೆಯಾಗಿ ಶೇ. 82.64 ಫಲಿತಾಂಶ ಪಡೆದುಕೊಂಡಿದ್ದಾರೆ.[ಫಲಿತಾಂಶ ಆನ್ಲೈನ್ನಲ್ಲಿ ಲಭ್ಯ]
ಶೂನ್ಯ ಫಲಿತಾಂಶ:
52 ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ. ಮೂರು ಸರ್ಕಾರಿ ಶಾಲೆಗಳು, ಆರು ಅನುದಾನಿತ ಮತ್ತು 43 ಅನುದಾನ ರಹಿತ ಶಾಲೆಗಳು ಶೂನ್ಯ ಫಲಿತಾಂಶ ಪಡೆದಿವೆ. ಕಲಬುರಗಿ ಜಿಲ್ಲೆ ಕುಖ್ಯಾತಿ ಪಡೆದುಕೊಂಡಿದ್ದು 11 ಶಾಲೆಗಳು ಶೂನ್ಯ ದಾಖಲೆ ಮಾಡಿವೆ.
ವಿಶೇಷ ಸಾಮರ್ಥ್ಯದ ವಿದ್ಯಾರ್ಥಿಗಳ ಫಲಿತಾಂಶ:
ಪರೀಕ್ಷೆ ಬರೆದ 2707 ವಿಶೇಷ ಸಾಮರ್ಥ್ಯದ ವಿದ್ಯಾರ್ಥಿಗಳಲ್ಲಿ 1647 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪದವಿ ಪೂರ್ವ ಕಾಲೇಜಿನೊಂದಿಗೆ ಇರುವ ಪ್ರೌಢಶಾಲೆಗಳ ಫಲಿತಾಂಶ ಕಡಿಮೆಯಾಗಿದೆ. ಸ್ವತಂತ್ರ ಪ್ರೌಢಶಾಲೆಗಳು ಶೇ. 75.34 ಫಲಿತಾಂಶ ಪಡೆದರೆ, ಪದವಿ ಪೂರ್ವ ಕಾಲೇಜಿನೊಂದಿಗೆ ಇರುವ ಪ್ರೌಢಶಾಲೆಗಳು ಶೇ. 58.43 ಫಲಿತಾಂಶ ಪಡೆದಿವೆ.
ಗ್ರಾಮೀಣ ಭಾಗದವರೇ ಮುಂದೆ
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶೇ. 80.36 ಫಲಿತಾಂಶ ಪಡೆದರೆ, ನಗರ ಭಾಗದವರು ಶೇ. 77.16 ಫಲಿತಾಂಶ ಪಡೆದು ಕೊಂಚ ಹಿಂದಕ್ಕೆ ಬಿದ್ದಿದ್ದಾರೆ.
ವಿಷಯವಾರು ಫಲಿತಾಂಶ:
1. ಪ್ರಥಮ ಭಾಷೆ- ಶೇ. 91.06
2. ದ್ವಿತೀಯ ಭಾಷೆ-ಶೇ.88.79
3. ತೃತೀಯ ಭಾಷೆ-92.79
4. ಗಣಿತ- ಶೇ. 85.46
5. ವಿಜ್ಞಾನ-ಶೇ.85.97
6. ಸಮಾಜ ವಿಜ್ಞಾನ- ಶೇ. 89.70
-
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications