ಮೇ.12ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ
ಬೆಂಗಳೂರು, ಮೇ.9: 2014-15ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಮೇ.12ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ. ಮೇ 13ರಂದು ರಾಜ್ಯದ ಎಲ್ಲ ಪ್ರೌಢಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ.
ಮೇ 10ರಂದು ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣಾ ನೀತಿಸಂಹಿತೆ ಜಾರಿಯಾಗುವುದರಿಂದ, ಪ್ರಸಕ್ತ ವರ್ಷದ ಫಲಿತಾಂಶವನ್ನು ಶಿಕ್ಷಣ ಸಚಿವರು ಪ್ರಕಟಿಸುವುದಿಲ್ಲ, ಬದಲಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪ್ರಕಟಿಸಲಿದ್ದಾರೆ ಎಂದು ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋದಾ ಬೋಪಣ್ಣ ಹೇಳಿದರು. [ಎಸ್ಎಸ್ಎಲ್ಸಿ 2015 ಪರೀಕ್ಷಾ ಫಲಿತಾಂಶ ಪ್ರಕಟ]
ಎಸ್ಎಸ್ಎಲ್ ಸಿ ಪರೀಕ್ಷೆಗಳು ಮಾ.30ರಿಂದ ಆರಂಭಗೊಂಡು ಏ.13ರ ವರೆಗೆ ನಡೆದಿತ್ತು. ಎಂದಿನಂತೆ ಒನ್ಇಂಡಿಯಾ ಕನ್ನಡ ಮತ್ತು ಕರಿಯರ್ ಇಂಡಿಯಾ ವೆಬ್ ತಾಣಗಳಲ್ಲಿ ಫಲಿತಾಂಶ ಅಂಕಪಟ್ಟಿಗಳ ಸಮೇತ ಪ್ರಕಟವಾಗಲಿದೆ. [ಎಸೆಸ್ಸೆಲ್ಸಿಯಲ್ಲಿ 'ಕ್ಲಾಸ್' ಬದಲಿಗೆ 'ಗ್ರೇಡ್']
ಕೆಎಸ್ಇಇಬಿ ವೆಬ್ ಸೈಟ್ (ಕ್ಲಿಕ್ ಮಾಡಿ) ನಲ್ಲಿ ಮೊದಲಿಗೆ ಫಲಿತಾಂಶ ಪ್ರಕಟಗೊಳ್ಳಲಿದೆ. [ಜಿಲ್ಲಾವಾರು ಫಲಿತಾಂಶ: ಉಡುಪಿ ಫಸ್ಟ್, ಗದಗ ಲಾಸ್ಟ್ ]

* http://kseeb.kar.nic.in ಅಥವಾ http://karresults.nic.in/ ವೆಬ್ ಸೈಟ್ ಗೆ ಭೇಟಿ ಕೊಡಿ.
* ನೋಂದಾಣಿ ಸಂಖ್ಯೆ ನಮೂದಿಸಿ.
* ಸೆಕ್ಯುರಿಟಿ ಕೋಡ್ ಹಾಕಿ
* Submit ಬಟನ್ ಒತ್ತಿ.
* ಫಲಿತಾಂಶವನ್ನು ಪಡೆದು ಪ್ರಿಂಟ್ ಔಟ್ ತೆಗೆದುಕೊಳ್ಳಿ. [ಎಸ್ಎಸ್ಎಲ್ಸಿ ಫಲಿತಾಂಶದ ಮುಖ್ಯಾಂಶಗಳು]
ರಾಜ್ಯಾದ್ಯಂತ ಸುಮಾರು 8.56 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಊರ್ವದ ಪೊಂಪಾಯಿ ಶಾಲೆಯ 18 ವಿದ್ಯಾರ್ಥಿಗಳು ತುಳು ಭಾಷೆಯಲ್ಲಿ ಪರೀಕ್ಷೆ(ಏ.10) ತೆಗೆದುಕೊಂಡಿರುವುದು ಈ ಬಾರಿಯ ವಿಶೇಷ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಒನ್ ಇಂಡಿಯಾ ಕಡೆಯಿಂದ ಬೆಸ್ಟ್ ಆಫ್ ಲಕ್. ಎಸ್ಸೆಸೆಲ್ಸಿ ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications