2015ರ ಎಸ್ಎಸ್ಎಲ್ಸಿ ಫಲಿತಾಂಶದ ಮುಖ್ಯಾಂಶಗಳು
ಬೆಂಗಳೂರು, ಮೇ 12 : 2015ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದೆ. ಈ ಬಾರಿ ಶೇಕಡ 81.82ರಷ್ಟು ಫಲಿತಾಂಶ ಬಂದಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. [ಫಲಿತಾಂಶ, ಅಂಕಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ]
ಮಂಗಳವಾರ ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮದ್ ಮೊಹಸಿನ್ ಫಲಿತಾಂಶವನ್ನು ಪ್ರಕಟಿಸಿದರು. ಉಡುಪಿ ಪ್ರಥಮ ಸ್ಥಾನಗಳಿಸಿದ್ದರೆ, ಚಿಕ್ಕೋಡಿ ದ್ವಿತೀಯ ಸ್ಥಾನ ಗಳಿಸಿದೆ. ಗದಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. [ಫಲಿತಾಂಶ, ಅಂಕಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ]

ಈ ಬಾರಿ ಶೇಕಡ 81.82ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.86.23 ರಷ್ಟು ಬಾಲಕಿಯರು ಮತ್ತು ಶೇ. 77.85 ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. 36 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಆದರೆ, ಯಾವುದೇ ಸರ್ಕಾರಿ ಶಾಲೆಯಲ್ಲಿಯೂ ಶೂನ್ಯ ಫಲಿತಾಂಶ ಬಂದಿಲ್ಲ. 40 ವರ್ಷಕ್ಕೆ ಮೀರಿದ 360 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 7 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. [SSLC ಫಲಿತಾಂಶ ಪ್ರಕಟ]
ಫಲಿತಾಂಶ ಹೇಗಿದೆ? : 2011ರಲ್ಲಿ 73.90, 2012ರಲ್ಲಿ 76.13, 2013ರಲ್ಲಿ 77.47, 2014ರಲ್ಲಿ 81.20 ಫಲಿತಾಂಶ ಬಂದಿತ್ತು. ಈ ವರ್ಷ ಅಂದರೆ 2015ರಲ್ಲಿ 81.82ರಷ್ಟು ಫಲಿತಾಂಶ ಬಂದಿದ್ದು ಕಳೆದ ಐದು ವರ್ಷಗಳಿಂದ ಫಲಿತಾಂಶ ಏರಿಕೆಯಾಗುತ್ತಲೇ ಇದೆ. [ಫಲಿತಾಂಶ : ಯಾವ ಜಿಲ್ಲೆಗೆ ಯಾವ ಸ್ಥಾನ]
ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ : ಗ್ರಾಮೀಣ ಭಾಗದ 444, 771 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 384, 096 ಅಭ್ಯರ್ಥಿಗಳು ಉತ್ತೀರ್ಣಗೊಂಡಿದ್ದು 86.48ರಷ್ಟು ಫಲಿತಾಂಶ ಬಂದಿದೆ. ನಗರ ಪ್ರದೇಶದ 343, 671 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 284, 884 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು 82.86ರಷ್ಟು ಫಲಿತಾಂಶ ಬಂದಿದೆ.
ಶೂನ್ಯ ಫಲಿತಾಂಶದ ವಿವರ : ಬೆಳಗಾವಿ 1, ಬೆಂಗಳೂರು ಉತ್ತರ 4, ಬೆಂಗಳೂರು ದಕ್ಷಿಣ 3, ಬೀದರ್ 6, ಚಿಕ್ಕಬಳ್ಳಾಪುರ 1, ಚಿಕ್ಕೋಡಿ 1, ಧಾರವಾಡ 3, ಗದಗ 1, ಕಲಬುರಗಿ 10, ಕೊಪ್ಪಳ 1, ರಾಯಚೂರು 1, ತುಮಕೂರು 1, ವಿಜಯಪುರದ 3 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇವುಗಳಲ್ಲಿ ಯಾವುದೇ ಸರ್ಕಾರಿ ಶಾಲೆಗಳು ಸೇರಿಲ್ಲ.
360ರಲ್ಲಿ 7 ವಿದ್ಯಾರ್ಥಿಗಳು ಉತ್ತೀರ್ಣ : 40 ವರ್ಷ ಮೇಲ್ಪಟ್ಟ 7 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 239 ಪುರುಷ ಅಭ್ಯರ್ಥಿಗಳ ಪೈಕಿ ಇಬ್ಬರು ಮತ್ತು 121 ಮಹಿಳಾ ಅಭ್ಯರ್ಥಿಗಳ ಪೈಕಿ ಐವರು ಉತ್ತೀರ್ಣಗೊಂಡಿದ್ದಾರೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications