SSLC Result 2025: ಮೇ 3ರೊಳಗೆ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ..
ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತವರ ಪೋಷಕರ ಚಿತ್ತ ಫಲಿತಾಂಶ ಬಿಡುಗಡೆಯತ್ತ ನೆಟ್ಟಿದೆ. Karnataka SSLC Results 2025 ಫಲಿತಾಂಶ ಯಾವಾಗ ಬಿಡುಗಡೆ ಆಗಲಿದೆ? ಎಂದು ಕಾತರದಿಂದ ಕಾಯುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಫಲಿತಾಂಶ ಬಿಡುಗಡೆಗೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಿದೆ.
ಮಾರ್ಚ್ 21ರಿಂದ ಏಪ್ರಿಲ್ 04 ರವರೆಗೆ ಕರ್ನಾಟಕದ ಸಾವಿರಾರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸೂಸೂತ್ರವಾಗಿ ನಡೆದಿವೆ. ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಪೂರ್ಣಗೊಳಿಸಿದೆ. ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ಅದಾಗುತ್ತಿದ್ದಂತೆ ಇದೇ ವಾರವೇ ಬಹುನಿರೀಕ್ಷೆ SSLC exam results 2025 karnataka ಬಿಡಗಡೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಎಸ್ಎಸ್ಎಲ್ಸಿ ಫಲಿತಾಂಶ ಪರಿಶೀಲನೆಗೆ ಹೇಗೆ? ಯಾವ ವೆಬ್ಸೈಟ್ನಲ್ಲಿ ಪರಿಶೀಲಿಸಬೇಕು? ದಿನಾಂಕ ಅಥವಾ 10ನೇ ತರಗತಿ ಫಲಿತಾಂಶ (Karnataka 10th Class Reuslts 2025) ಡೌನ್ಲೋಡ್ ಹೇಗೆ ಎಂಬ ಮಾಹಿತಿ ಇಲ್ಲಿದೆ.
ಮೇ 3ರೊಳಗೆ SSLC ಫಲಿತಾಂಶ ಬಿಡುಗಡೆ..?
ಪರೀಕ್ಷೆ ಮೌಲ್ಯಮಾಪನ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ತಾಂತ್ರಿಕ ಕೆಲಸಗಳಲ್ಲಿ ನಿರತವಾಗಿದೆ. ಆ ಪ್ರಕ್ರಿಯೆ ಇನ್ನೇನು ಪೂರ್ಣಗೊಳ್ಳಲಿದೆ. ಮೇ 1ರಂದು ಕಾರ್ಮಿಕ ರಜೆ ಹಿನ್ನೆಲೆಯಲ್ಲಿ ಮೇ 2 ಇಲ್ಲವೇ 3 ರಂದು ಪರೀಕ್ಷೆ ಫಲಿತಾಂಶ ಬಿಡುಗಡೆ ಆಗುವ ನಿರೀಕ್ಷೆ ಇದೆ. ಮಂಡಳಿಯು ಅಗತ್ಯ ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ವೆಬ್ಸೈಟ್ ಲಿಂಕ್, ಪರಿಶೀಲನೆ ಹೇಗೆ? ವಿಧಾನಗಳು
* ಈ ಫಲಿತಾಂಶವನ್ನು ಸರ್ಕಾರದ ಅಧಿಕೃತ https://karresults.nic.in/ ವೆಬ್ಸೈಟ್ ನಲ್ಲಿ ಪರೀಕ್ಷಿಸಬಹುದಾಗಿದೆ.
* ವಿದ್ಯಾರ್ಥಿಗಳು/ ಪೋಷಕರು ಮೊದಲು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

* ನಂತರ SSLC Results ಆಯ್ಕೆ ಮಾಡಿಕೊಳ್ಳಬೇಕು
* ಬಳಿಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ 2025 ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು.
* ಪರದೇ ಮೇಲೆ ಕಾಣಿಸಿಕೊಳ್ಳುವ ಖಾಲಿ ಬಾಕ್ಸ್ಗಳಲ್ಲಿ ನಿಮ್ಮ ಪರೀಕ್ಷಾ ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಸೇರಿದಂತೆ ಅಗತ್ಯ ಮಾಹಿತಿ ದಾಖಲಿಸಬೇಕು.
* ನಂತರ ತೆರೆದುಕೊಳ್ಳುವ ಅಂಕಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಮುಂದಿನ ಅಗತ್ಯತೆಗಾಗಿ ಡೌನ್ಲೋಡ್ ಮಾಡಿಕೊಳ್ಳಬೇಕು. ಅದರ ಪ್ರತಿ ಪಡೆದರೆ ಒಳಿತು. ಹೆಚ್ಚಿನ ಮಾಹಿತಿಗೆ ನಿಮ್ಮ ಶಾಲೆಗಳಿಗೆ ಇಲ್ಲವೇ ಈ ಮೇಲೆ ನೀಡಲಾದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications