SSLC Result: 625 ಕ್ಕೆ 625 ಅಂಕ ಪಡೆದ ಅಂಕಿತಾ ರಾಜ್ಯಕ್ಕೆ ಟಾಪರ್; ಕೀರ್ತಿ ಹೆಚ್ಚಿಸಿದ ವಿಧ್ಯಾರ್ಥಿನಿಗೆ ಅಭಿನಂಧನೆಗಳ ಸುರಿ ಮಳೆ
ಬಾಗಲಕೋಟೆ: ಮೇ 09:2023-2024 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಜಿಲ್ಲೆಯ ಅಂಕಿತಾ ಕೊಣ್ಣೂರ 625 ಕ್ಕೆ 625 ಅಂಕ ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದು, ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹಾಗೂ ಜಿಲ್ಲಾ ಪಂಚಾಯತ ಸಿಇಓ ಶಶಿಧರ ಕುರೇರ ಅಭಿನಂಧನೆ ಸಲ್ಲಿಸಿದ್ದಾರೆ.
ಜಿಲ್ಲೆಯ ಮುಧೋಳ ತಾಲೂಕಿನ ವಜ್ರಮಟ್ಟಿ ಗ್ರಾಮದ ಬಸಪ್ಪ ಮತ್ತು ಗೀತಾ ದಂಪತಿಗಳ ಮಗಳಾದ ಅಂಕಿತಾ ಕೊಣ್ಣೂರ ಸ್ವ-ಗ್ರಾಮದಲ್ಲಿ 1 ನೇ ತರಗತಿಯಿಂದ 5 ತರಗತಿವರೆಗೆ ಎಲ್.ಕೆ.ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿ, ನಂತರ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಮೂಲಕ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಾಲೆಗೆ ಪ್ರವೇಶ ಪಡೆದು 6 ರಿಂದ 10 ನೇ ತರಗತಿವರೆಗೆ ವಿದ್ಯಾಬ್ಯಾಸ ಮಾಡಿದ್ದಾರೆ. ಪ್ರಾರಂಭದಿಂದಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಅಂಕಿತಾ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಬಾಗಲಕೋಟೆಯ ಕೀರ್ತಿ ಹೆಚ್ಚಿಸಿದ್ದಾರೆ.

ರಾಜ್ಯಕ್ಕೆ ಟಾಪರ್ ಸ್ಥಾನ ಪಡೆದ ವಿಚಾರವಾಗಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಯ ಪ್ರತಿಷ್ಠೆಯನ್ನು ಹೆಚ್ಚಿಸಿದ್ದು, ಅವಳ ಈ ಸಾಧನೆಗೆ ಜಿಲ್ಲಾಡಳಿತ ಎಲ್ಲರ ಪರವಾಗಿ ಹುತ್ಪೂರಕ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಕುಮಾರಿ ಅಂಕಿತಾ ಎಲ್ಲ ಮಕ್ಕಳಿಗೆ ಮಾದರಿಯಾಗಿದ್ದು, ಇವಳ ಸ್ಪೂರ್ತಿ 8 ನೇ ಹಾಗೂ 9ನೇ ತರಗತಿ ಈ ವರ್ಷ ಎಸ್.ಎಸ್.ಎಲ್.ಸಿ ಬರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದರು.
ವಿದ್ಯಾರ್ಥಿಯ ಮುಂದಿನ ಭವಿಷ್ಯ ಹಾಗೂ ಉತ್ತಮ ಶಿಕ್ಷಣಕ್ಕಾಗಿ ಜಿಲ್ಲಾಡಳಿತ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ಅಳವ ಮುಂದಿನ ವಿದ್ಯಾಬ್ಯಾಸ ಕೂಡಾ ಇದೇ ರೀತಿ ಅಗ್ರಮಾನ್ಯವಾಗಿರಲಿ. ಅವಳ ಕನಸು ಕನಸು ನನಸು ಮಾಡಲು ಪ್ರಯತ್ನ ಇದೇ ರೀತಿ ಸಾಗಲಿ. ಇನ್ನುಳಿದ ವಿದ್ಯಾರ್ಥಿಗಳು ಕೂಡಾ ಅವಳನ್ನು ಸ್ಪೂರ್ಥಿಯಾಗಿ ಪಡೆದು ಸಾಧನೆ ಮಾಡಿ ಉನ್ನತ ಮಟ್ಟದ ಸ್ಥಾನ ಪಡೆಯಲು ಆಶಿಸಿದರು. ಜಿಲ್ಲೆಗೆ ಉತ್ತಮ ಫಲಿತಾಂಶ ತಂದುಕೊಡುವಲ್ಲಿ ಶ್ರಮಿಸಿದ ಅಧಿಕಾರಿ ಹಾಗೂ ಶಿಕ್ಷಕವೃಂದಕ್ಕೆ ಅಭಿನಂಧಿಸಿದರಲ್ಲದೇ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ದೃತಿಗೆಡದೇ ಬರುವ ಪರೀಕ್ಷೆ-೨ರಲ್ಲಿ ಉತ್ತಮ ಸಾಧನೆ ಮಾಡಲು ತಿಳಿಸಿದರು.
ಸಾರ್ಥಕತೆ ಮೆರೆದ ಜಿಲ್ಲಾಧಿಕಾರಿ ಪತ್ರ
ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡುವಂತೆ ಮಾಡುವ ನಿಟ್ಟಿನಲ್ಲಿ ಪ್ರತಿ ತಿಂಗಳ ಸ್ಪೂರ್ತಿದಾಯಕ ಪತ್ರ ಬರೆಯುವ ಮೂಲಕ ವಿದ್ಯಾರ್ಥಿಗಳಲ್ಲಿ ಹುರುಪು ತುಂಬುವ ಕೆಲಸ ಮಾಡಿದ ಹಿನ್ನಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಯೊಬ್ಬಳು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮುವಂತೆ ಮಾಡಿದ್ದಾರೆ. ಆ ಮೂಲಕ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಪ್ರೇರಣಾದಾಯಕ ಪತ್ರದ ಸಾರ್ಥಕತೆ ಮೆರೆದಿದ್ದಾರೆ.

ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯ ಶಾಲಾ ಮಕ್ಕಳಿಗೆ ವಿದ್ಯಾಬ್ಯಾಸ ಕುರಿತಂತೆ ಅಬ್ಯಾಸ ಮಾಡುವ ಹಾಗೂ ಪರೀಕ್ಷೆ ಎದುರಿಸುವ, ಬಾಲ್ಯ ವಿವಾಹದಿಂದ ಮಕ್ಕಳ ಮೇಲೆ ಉಂಟಾಗುವ ಪರಿಣಾಮ ಸೇರಿದಂತೆ ಇನ್ನು ಅನೇಕ ಉಪಯುಕ್ತ ಮಾಹಿತಿಯನ್ನು ಮಕ್ಕಳಿಗೆ ಮನದಟ್ಟುವಂತೆ ಭಾವನಾತ್ಮಕವುಳ್ಳ ಪತ್ರವನ್ನು ಪ್ರತಿ ತಿಂಗಳು ಬರೆಯುತ್ತಿದ್ದರು. ಇಲ್ಲಿಯವರೆಗೆ ಒಟ್ಟು ೧೦ ಪತ್ರವನ್ನು ಬರೆದಿದ್ದಾರೆ. ಇದಕ್ಕೆ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದರ ಪರಿಣಾಮ ಜಿಲ್ಲೆಯ ಅಂಕಿತಾ ಕೊಣ್ಣೂರು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಲು ಸಾಧ್ಯವಾಯಿತು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications