ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, ಆಗಸ್ಟ್ 10: ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ.
Recommended Video
ಕೊರೊನಾ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆಸಿ, ಸರ್ಕಾರ ಸಾಹಸ ಮಾಡಿದಂತಾಗಿತ್ತು. ಇದೀಗ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನ 3 ಗಂಟೆ ನಂತರ ಇಲಾಖೆ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
52,219 ಮೌಲ್ಯಮಾಪಕರು ಸುಮಾರು 8 ಲಕ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಿದ್ದಾರೆ. ಜುಲೈ 14 ರಿಂದ ಮೌಲ್ಯಮಾಪನ ಆರಂಭವಾಗಿತ್ತು. ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ಲಾಕ್ಡೌನ್ ಇದ್ದ ಕಾರಣ ಎರಡು ದಿನ ತಡವಾಗಿ ಆರಂಭವಾಗಿತ್ತು ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಒಟ್ಟು 71.80 ಶೇಕಡಾವಾರು ಫಲಿತಾಂಶವಾಗಿದೆ. ಕಳೆದ ವರ್ಷ ಶೇ.73.70 ರಷ್ಟು ಫಲಿತಾಂಶವಾಗಿತ್ತು. 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸರ್ಕಾರಿ ಶಾಲೆಗಳ ಫಲಿತಾಂಶ ಶೇ. 72.79 ಅಷ್ಟಿದೆ. ಅನುದಾನಿತ ಶಾಲೆಗಳು 70.60, ಶೇ. 82.31, 2,28,734 ಅನುತ್ತೀರ್ಣರಾಗಿದ್ದಾರೆ.
ಬಾಲಕರು ಶೇ.66.41 ಉತ್ತೀರ್ಣರಾಗಿದ್ದಾರೆ 77.74 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ, 625 ಅಂಕಕ್ಕೆ 625 ಅಂಕವನ್ನು ಆರು ವಿದ್ಯಾರ್ಥಿಗಳು ಪಡೆದಿದ್ದಾರೆ. ಕಳೆದ ಬಾರಿ ಇಬ್ಬರು ವಿದ್ಯಾರ್ಥಿಗಳು ಸಂಪೂರ್ಣ ಅಂಕ ತೆಗೆದುಕೊಂಡಿದ್ದರು.
ಅಲ್ಲದೆ ವಿದ್ಯಾರ್ಥಿಗಳ ಪೋಷಕರ ಮೊಬೈಲ್ಗೆ ಫಲಿತಾಂಶವನ್ನು ಎಸ್ಎಂಎಸ್ ಮಾಡಲು ಸಹ ಎಸ್ಎಸ್ಎಲ್ಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದೆ.

ಜುಲೈ 3ರಂದು ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದಿದ್ದು, ಕೊರೊನಾ ಮಧ್ಯೆ ಯಶಸ್ವಿಯಾಗಿ ನಡೆದಿದ್ದ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನವನ್ನು ಸಹ ಅಷ್ಟೇ ವೇಗವಾಗಿ ಮುಗಿಸಲಾಗಿದೆ. ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶ ಲಭ್ಯವಾಗೋ ವೆಬ್ ಸೈಟ್ ವಿವರ www.kseeb.kar.nic.in ಹಾಗೂ www.karresults.nic.in ವೆಬ್ಸೈಟ್ಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶ ನೋಡಬಹುದಾಗಿದೆ. ಅಲ್ಲದೆ ಪೋಷಕರ ಮೊಬೈಲ್ಗೆ ಫಲಿತಾಂಶದ ಎಸ್ಎಂಎಸ್ ಸಹ ಬರಲಿದೆ.
ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ 2020 ಫಲಿತಾಂಶ ಪ್ರಕಟ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಂದ ಸುದ್ದಿಗೋಷ್ಠಿ, ಕರ್ನಾಟಕದಲ್ಲಿ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು,
8,11,050 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡರು, 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಪರೀಕ್ಷೆ ಮೌಲ್ಯಮಾಪನ ನಡೆಸಲಾಯಿತು.
ವಿದ್ಯಾರ್ಥಿಗಳ ಮೊಬೈಲ್ ನಂಬರ್ ಗಳಲ್ಲಿ ರಿಸಲ್ಟ್ ನೋಡಬಹುದು, www.kseeb.kar.nic.in ಹಾಗೂ www.karresults.nic.in ಫಲಿತಾಂಶ ಪ್ರಕಟವಾಗಿದೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications