ನಾಡಗೀತೆಗೆ ಕತ್ತರಿ ಪ್ರಯೋಗ ವಾಗಲಿದೆಯೇ?
ಬೆಂಗಳೂರು, ನ.10 : ಕರ್ನಾಟಕದಲ್ಲಿ ನಾಡಗೀತೆ ಹಾಡುವ ವಿಚಾರದಲ್ಲಿ ಎದ್ದಿರುವ ಗೊಂದಲಗಳಿಗೆ ತೆರೆ ಎಳೆಯಲು ಸರ್ಕಾರ ಮುಂದಾಗಿದೆ. ಕವಿ ಚನ್ನವೀರ ಕಣವಿ ಅವರ ನೇತೃತ್ವದ ಸಮಿತಿ ನೀಡಿರುವ ವರದಿಯ ಅನ್ವಯ ನಾಡಗೀತೆಗೆ ಕತ್ತರಿ ಪ್ರಯೋಗ ಮಾಡಿ, 1 ನಿಮಿಷ 26 ಸೆಕೆಂಡ್ನಲ್ಲಿ ನಾಡಗೀತೆ ಹಾಡಿ ಮುಗಿಸುವ ಪ್ರಸ್ತಾಪಕ್ಕೆ ಸರ್ಕಾರ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಹಾಡಲು ಮೂರುವರೆ ನಿಮಿಷಗಳ ಕಾಲಾವಕಾಶ ಬೇಕಾಗಿತ್ತು. ಸರ್ಕಾರಿ ಕಾರ್ಯಕ್ರಮಗಳಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿದ್ದರೂ, ನಿರ್ದಿಷ್ಟ ಧಾಟಿ ರೂಪಿಸಿ, ಕಾಲಮಿತಿ ನಿಗದಿ ಮಾಡಿರಲಿಲ್ಲ. ಆದ್ದರಿಂದ ಕೆಲವು ಕಡೆ ಐದು ನಿಮಿಷ ಹಾಡಿದ ಉದಾಹರಣೆಗಳಿದ್ದವು. [ರಾಜ್ಯೋತ್ಸವ ಸಂದರ್ಭದಲ್ಲಿ ನಾಡ ಗೀತೆ ಓದಿ, ಕೇಳಿ]

ಆದ್ದರಿಂದ ಸರ್ಕಾರ ಕವಿ ಚನ್ನವೀರ ಕಣವಿ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ, ನಾಡಗೀತೆ ಹಾಡುವ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸುವ ಕುರಿತು ವರದಿ ನೀಡುವಂತೆ ನಿರ್ದೇಶನ ನೀಡಿತ್ತು. ಸದ್ಯ, ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಕೆಲವು ಸಾಲುಗಳಿಗೆ ಕತ್ತರಿ ಪ್ರಯೋಗ ಮಾಡಿ, 1 ನಿಮಿಷ 26 ಸೆಕೆಂಡ್ಗಳಲ್ಲಿ ಮುಗಿಸಬಹುದು ಎಂದು ಶಿಫಾರಸ್ಸು ಮಾಡಿದೆ.
ಚನ್ನವೀರ ಕಣವಿ ನೇತೃತ್ವದ ಸಮಿತಿಯಲ್ಲಿದ್ದ ಸದಸ್ಯರಾದ ಸಿದ್ದಲಿಂಗಯ್ಯ, ದೊಡ್ಡರಂಗೇಗೌಡ, ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ ಮತ್ತು ಗಾಯಕ ವೈ.ಕೆ. ಮುದ್ದುಕೃಷ್ಣ ಎಲ್ಲರೂ ಸೇರಿ ಚರ್ಚಿಸಿ, ನಾಡಗೀತೆ ಮೊಟಕುಗೊಳಿಸುವ ಶಿಫಾರಸ್ಸು ಮಾಡಿದ್ದಾರೆ ಮತ್ತು ಅದನ್ನು ಹಾಡಿರುವ ಸಿಡಿಯನ್ನು ವರದಿಯೊಂದಿಗೆ ನೀಡಿದ್ದಾರೆ.
ಎಷ್ಟು ಕತ್ತರಿ ಪ್ರಯೋಗ : ಒಂದು ಚರಣ ಮತ್ತು ಆರು ಸಾಲುಗಳಿಗೆ ಕತ್ತರಿ ಪ್ರಯೋಗಿಸಲು ಸಮಿತಿ ಶಿಫಾರಸ್ಸು ಮಾಡಿದೆ. ಕತ್ತರಿ ಪ್ರಯೋಗಕ್ಕೆ ಒಳಗಾಗಿರುವ ಹೊಸ ನಾಡಗೀತೆಯ ನೂತನ ಧಾಟಿಯನ್ನು 1 ನಿಮಿಷ 26 ಸೆಕೆಂಡಿನಲ್ಲಿ ಗಾಯಕ ವೈ.ಕೆ. ಮುದ್ದುಕೃಷ್ಣ ಹಾಡಿ, ಸಿಡಿಯನ್ನೂ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇದಕ್ಕೆ ಅಂತಿಮ ಒಪ್ಪಿಗೆ ನೀಡಿದರೆ, ಇದು ಜಾರಿಗೆ ಬರಲಿದೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications