ಕರ್ನಾಟಕ ಬಜೆಟ್ 2018: ಸಾಲಮನ್ನಾ ಓಕೆ, ಕರಾವಳಿ ನಿರ್ಲಕ್ಷ್ಯಿಸಿದ್ದು ಯಾಕೆ?!
ಬೆಂಗಳೂರು, ಜುಲೈ 05: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮೊದಲ ಬಜೆಟ್ ಅನ್ನು ಹಣಕಾಸು ಸಚಿವರೂ ಆದ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು(ಜುಲೈ 05) ಮಂಡಿಸಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಸಂಪುಟ ಸಭೆ ನಡೆಸಿ, ನಂತರ ನಂತರ 11:30 ಬಜೆಟ್ ಭಾಷಣ ಆರಂಭಿಸಿದ ಅವರು ಬರೋಬ್ಬರಿ ಒಂದೂ ಮುಕ್ಕಾಲು ಗಂಟೆಯ ಕಾಲ ಭಾಷಣ ಮಾಡಿದರು.
2,18,488 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಅನ್ನು ಕುಮಾರಸ್ವಾಮಿ ಮಂಡಿಸಿದ್ದಾರೆ. ಬಜೆಟ್ಟಿನುದ್ದಕ್ಕೂ ಬೆಂಗಳೂರು, ಮಂಡ್ಯ, ಹಾಸನ, ರಾಮನಗರ, ಮೈಸೂರು, ಉತ್ತರ ಕರ್ನಾಟಕದ ಕೆಲವು ಭಾಗಗಳಿಗೆ ಬಿಟ್ಟರೆ ಬೇರೆ ಜಿಲ್ಲೆಗಳನ್ನೂ ಕುಮಾರಸ್ವಾಮಿ ನಿರ್ಲಕ್ಷಿಸಿದ್ದಾರೆ ಎಂದು ಪ್ರತಿಪಕ್ಷಗಳು ಬಜೆಟ್ ಭಾಷಣದ ಕೊನೆಯಲ್ಲಿ ಪ್ರತಿಭಟನೆ ನಡೆಸಿದ ಘಟನೆಯೂ ನಡೆಯಿತು.
ಎಚ್ಡಿಕೆ ಬಜೆಟ್ : ರೈತಸ್ನೇಹಿ, ಅಭಿವೃದ್ಧಿ ಪೂರಕ ಆಯವ್ಯಯ ನಿರೀಕ್ಷೆ
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆಗೂ ಮುನ್ನ ತಮ್ಮ ಪ್ರಣಾಳಿಕೆಗಳಲ್ಲಿ ಜನರಿಗೆ, ಅದರಲ್ಲೂ ವಿಶೇಷವಾಗಿ ರೈತರಿಗೆ ಭರಪೂರ ಯೋಜನೆಗಳನ್ನು ಘೋಷಿಸುವುದಾಗಿ ಭರವಸೆ ನೀಡಿದ್ದವು. ಆ ಮಾತಿಗೆ ನ್ಯಾಯ ನೀಡಲು ಕುಮಾರಸ್ವಾಮಿ ಯತ್ನಿಸಿದ್ದಾರೆ.
2018-19 ನೇ ಹಣಕಾಸು ವರ್ಷದ ಬಜೆಟ್ ಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಿದೆ.
I have decided to waive all defaulted crop loans of farmers up to 31 Dec 2017 in the first stage. Farmers who repaid the loan within time,as an encouragement to the non defaulting farmers, I have decided to credit the repaid loan amount or Rs 25000 whichever is less: Karnataka CM pic.twitter.com/VeRUhM3DT5
— ANI (@ANI) July 5, 2018