ಸಚಿವ ಸ್ಥಾನಕ್ಕೆ ಎನ್.ಮಹೇಶ್ ರಾಜೀನಾಮೆ, ಮೈತ್ರಿ ಸರ್ಕಾರಕ್ಕೆ ಪೆಟ್ಟು
Recommended Video

ಬೆಂಗಳೂರು, ಅಕ್ಟೋಬರ್ 11: ಮೈತ್ರಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ಅವರು ಹಠಾತ್ತನೆ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಎಸ್ಪಿ ಪಕ್ಷದಿಂದ ಅವರು ಆರಿಸಿ ಬಂದಿದ್ದರು.
ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಇಂದು ಸಂಜೆ ರವಾನಿಸಿದ್ದಾರೆ. ನಾಲ್ಕು ತಿಂಗಳಿಂದ ಸಚಿವನಾಗಿ ಕೆಲಸ ಮಾಡಿದ್ದೇನೆ, ಇದರ ನಡುವೆ ಪಕ್ಷದ ಕೆಲಸ, ಕ್ಷೇತ್ರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೆ ಮಾಯಾವತಿ ಅವರು ಕಾಂಗ್ರೆಸ್ ಜೊತೆ ಮೈತ್ರಿಯನ್ನು ನಿರಾಕರಿಸಿದ್ದರು. ಅಲ್ಲದೆ ಕಾಂಗ್ರೆಸ್ ಮೇಲೆ ವಾಗ್ದಾಳಿ ಸಹ ನಡೆಸಿದ್ದರು. ಅವರು ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಬಿಎಸ್ಪಿ ಪಕ್ಷದಿಂದ ಗೆದ್ದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಆಗಿದ್ದ ಮಹೇಶ್ ಅದೇ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕೊಳ್ಳೆಗಾಲದಿಂದ ಆಯ್ಕೆ ಆಗಿದ್ದ ಅವರು, ಪ್ರಸ್ತುತ ಮಂತ್ರಿ ಸ್ಥಾನಕ್ಕೆ ಮಾತ್ರವೇ ರಾಜೀನಾಮೆ ನೀಡಿದ್ದೇನೆ. ಶಾಸಕ ಸ್ಥಾನಕ್ಕೆ ಅಲ್ಲ. ಸರ್ಕಾರಕ್ಕೆ ನನ್ನ ಬೆಂಬಲವನ್ನು ಮುಂದುವರೆಸುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಾಜೀನಾಮೆಗೆ ಮುನ್ನಾ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದಾಗಿ ಹೇಳಿದ ಅವರು, ನಾನು ಕುಮಾರಸ್ವಾಮಿ ಅಥವಾ ಸರ್ಕಾರದ ವಿರೋಧಿ ಅಲ್ಲ. ಉಪಚುನಾವಣೆಯಲ್ಲಿಯೂ ಸಹ ಜೆಡಿಎಸ್ ಪರ ಪ್ರಚಾರ ಮಾಡಲು ಲಭ್ಯವಿರುತ್ತೇನೆ ಎಂದಿದ್ದಾರೆ.
ರಾಜ್ಯದಲ್ಲಿ ಬಿಎಸ್ಪಿ ಪಕ್ಷದ ಕೆಲಸಗಳು ಮೂಲೆಗುಂಪಾಗಿವೆ. ಲೋಕಸಭೆ ಚುನಾವಣೆ ಸನಿಹದಲ್ಲಿರುವ ಕಾರಣ ಪಕ್ಷವನ್ನು ಬಲಿಷ್ಠಪಡಿಸಬೇಕಿದೆ. ಅಲ್ಲದೆ ನನ್ನ ಕ್ಷೇತ್ರವಾದ ಕೊಳ್ಳೆಗಾಲಕ್ಕೂ ಹೆಚ್ಚು ಕಾಲಾವಕಾಶ ನೀಡಬೇಕಿದೆ ಹಾಗಾಗಿ ರಾಜೀನಾಮೆ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications