ಹಿಂದೂಗಳ ದಮನಕ್ಕೆ ರಾಜ್ಯ ಸರಕಾರ ಪಿತೂರಿ: ಕಾಗೇರಿ
ಕಾರವಾರ, ಅಕ್ಟೋಬರ್ 11: ಅನ್ಯಾಯವಾಗಿದೆ ಎಂದು ಪ್ರತಿಭಟನೆ ನಡೆಸುತ್ತಿರುವ ಹಿಂದೂಗಳ ದಮನಕ್ಕೆ ರಾಜ್ಯ ಸರಕಾರ ವ್ಯವಸ್ಥಿತ ಪಿತೂರಿ ನಡೆಸುತ್ತಿದೆ. ಹಿಂದೂ ಮುಖಂಡರ ಮೇಲೆ ಸುಖಾ ಸುಮ್ಮನೆ 395 ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಿ, ಜಾಮೀನು ದೊರಕದಂತೆ ಮಾಡಿದೆ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಭಟ್ಕಳದ ಪುರಸಭೆ ಗಲಭೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರಾಮಚಂದ್ರ ನಾಯ್ಕರ ಮನೆಗೆ ಭೇಟಿ ನೀಡಿ, ಕುಟುಂಬದವರನ್ನು ಸಂತೈಸಿದ ಬಳಿಕ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅಂಗಡಿ ತೆರವು ಪ್ರಕರಣ ನಂತರ ನಡೆದ ಘಟನೆಗಳಿಗೆ ಪುರಸಭೆಯೇ ನೇರ ಕಾರಣ. ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಇಂದಿನ ಪರಿಸ್ಥಿತಿ ಉದ್ಭವವಾಗಿದೆ. ಶಾಸಕರು, ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಇದನ್ನು ಸಕಾಲಕ್ಕೆ ಪರಿಹರಿಸಲು ಪ್ರಯತ್ನಿಸಬೇಕಿತ್ತು ಎಂದು ಕಾಗೇರಿ ತಿಳಿಸಿದರು.
ಗ್ರಾಮೀಣ ಭಾಗದ ರಸ್ತೆಗಳು ಹೊಂಡಗಳಿಂದ ಕೂಡಿದ್ದು ಸಂಚರಿಸಲು ಸಾದ್ಯವಾಗುತ್ತಿಲ್ಲ. ಪಿಡಬ್ಲ್ಯೂಡಿ ಬಳಿ ಹಣ ಇದ್ದರೂ ದುರಸ್ತಿ ಕಾರ್ಯ ಕೈಗೊಳ್ಳುತ್ತಿಲ್ಲ. ಅಕ್ಟೋಬರ್ 2ರಂದು ಅನುಷ್ಠಾನಕ್ಕೆ ತಂದ ಮಾತೃಪೂರ್ಣ ಯೋಜನೆಯಂತೂ ಬಾಣಂತಿಯರಿಗೆ ಇನ್ನಷ್ಟು ಸಂಕಷ್ಟ ತಂದೊಡ್ಡಿದೆ. ಪೌಷ್ಟಿಕ ಆಹಾರ ಸೇವಿಸಲು ಗರ್ಬಿಣಿಯರು, ಬಾಣಂತಿಯರು ಮೈಲು ದೂರವಿರುವ ಅಂಗನವಾಡಿಗೆ ತೆರಳುವುದು ಕಷ್ಟಕರ ಎಂದು ಕಾಗೇರಿ ಹೇಳಿದರು.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications