ಸರ್ಕಾರದಿಂದ ಪ್ರತಿ ವರ್ಷ ಮಾರ್ಚ್ 16 ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ
ಬೆಂಗಳೂರು, ಮಾ.23: ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಆಚರಿಸಬೇಕು. ಜಯಂತಿ ಆಚರಣೆಗೆ ತಗುಲುವ ವೆಚ್ಚವನ್ನು ಸರ್ಕಾರದಿಂದಲೇ ಭರಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.
ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದಿಂದ ಆಚರಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರ ಮನವಿ ಮೇರೆಗೆ ಈ ಆದೇಶ ಮಾಡಲಾಗಿದೆ.

ಜಗದ್ಗುರು ಶ್ರೀ ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ಅವರು ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ. ಸೌಹಾರ್ದ, ಸಹಬಾಳ್ವೆಯ ಮಹತ್ವವನ್ನು ನಾಡಿನ ಜನತೆಗೆ ಸಾರಿದವರು ಜಗದ್ಗುರು ರೇಣುಕಾಚಾರ್ಯರು. ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಸರ್ಕಾರ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
Recommended Video
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications