Get Updates
Get notified of breaking news, exclusive insights, and must-see stories!

ಸರ್ಕಾರದಿಂದ ಪ್ರತಿ ವರ್ಷ ಮಾರ್ಚ್ 16 ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಬೆಂಗಳೂರು, ಮಾ.23: ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಆಚರಿಸಬೇಕು. ಜಯಂತಿ ಆಚರಣೆಗೆ ತಗುಲುವ ವೆಚ್ಚವನ್ನು ಸರ್ಕಾರದಿಂದಲೇ ಭರಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.

ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದಿಂದ ಆಚರಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರ ಮನವಿ ಮೇರೆಗೆ ಈ ಆದೇಶ ಮಾಡಲಾಗಿದೆ.

Karnataka State Govt to Celebrate Jagadguru Renukacharya Jayanthi on March 16 Every Year

ಜಗದ್ಗುರು ಶ್ರೀ ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ಅವರು ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ. ಸೌಹಾರ್ದ, ಸಹಬಾಳ್ವೆಯ ಮಹತ್ವವನ್ನು ನಾಡಿನ ಜನತೆಗೆ ಸಾರಿದವರು ಜಗದ್ಗುರು ರೇಣುಕಾಚಾರ್ಯರು. ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಸರ್ಕಾರ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

Recommended Video

      ಅಭ್ಯಾಸ ಪಂದ್ಯದಲ್ಲಿ Virat ಯಾಕೆ ಆಡ್ಲಿಲ್ಲ? ಫಾಫ್- ವಿರಾಟ್ ಮಧ್ಯೆ ಬಿರುಕು? | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+