ವಿದ್ಯಾರ್ಥಿಗಳು ಗಮನಿಸಿ: ಉನ್ನತ ಶಿಕ್ಷಣ ಇಲಾಖೆಯ ಪದವಿ ಕೋರ್ಸ್, ಪರೀಕ್ಷೆ, ಫಲಿತಾಂಶದ ವೇಳಾಪಟ್ಟಿ ಬಿಡುಗಡೆ
ಬೆಂಗಳೂರು, ಮೇ 25: ಕರ್ನಾಟಕದ ವಿಶ್ವವಿದ್ಯಾಲಯ ಮತ್ತು ಅವುಗಳ ಸಂಯೋಜಿತ ಕಾಲೇಜುಗಳಲ್ಲಿ 2023-2024ನೇ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪದವಿ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಹಾಗೂ ಫಲಿತಾಂಶ ಕುರಿತು ಉನ್ನತ ಶಿಕ್ಷಣ ಇಲಾಖೆ ವೇಳಾಪಟ್ಟಿ ಹೊರಡಿಸಿದೆ. ಈ ಮೂಲಕ ಶೈಕ್ಷಣಿಕ ಸಂಸ್ಥೆಗಳಿಗೆ ಕೆಲವು ನಿರ್ದೇಶನಗಳನ್ನು ನೀಡಿದೆ.
ಈ ಏಕರೂಪದ ವೇಳಾಪಟ್ಟಿಯಲ್ಲಿ ಪ್ರಸಕ ಶೈಕ್ಷಣಿಕ 2023-24ನೇ ಸಾಲಿನಲ್ಲಿ ಇದೇ ಮೇ 22 ರಿಂದ ಜುಲೈ 15, 2023 ರೊಳಗೆ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜುಲೈ 17 ರಿಂದ ತರಗತಿಗಳನ್ನು ಆರಂಭಿಸಬೇಕಿದೆ.

ಇದೇ ವರ್ಷ ಮುಂದಿನ ಜುಲೈ 17 ರಿಂದ ಆರಂಭವಾಗುವ ಸೆಮಿಸ್ಟರ್ ತರಗತಿಗಳು ನವೆಂಬರ್ ತಿಂಗಳ ಮಧ್ಯಭಾಗ (ನ.18) ಅಂತ್ಯಗೊಳ್ಳುತ್ತದೆ. ಹೀಗಾಗಿ ನವೆಂಬರ್ 20 ರಿಂದ ಪದವಿ ಕೋರ್ಸ್ಗಳ ಒಂದನೇ, ಮೂರು ಮತ್ತು ಐದನೇ ಸೇಮಿಸ್ಟರ್ ಪರೀಕ್ಷೆಗಳನ್ನು ಆರಂಭಿಸಬೇಕು. ಮುಂದಿನ ವರ್ಷ 2024ರ ಜನವರಿ 15 ರೊಳಗೆ ಮೌಲ್ಯಮಾಪನ ಮುಗಿಸಿ ಫಲಿತಾಂಶ ಬಿಡುಗಡೆ ಮಾಡುವಂತೆ ವೇಳಾಪಟ್ಟು ಮೂಲಕ ಇಲಾಖೆ ಸೂಚಿಸಿದೆ.
ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳು 2024ರ ಜನವರಿ 16 ರಿಂದ ಪದವಿ ಕೋರ್ಸ್ಗಳ ದ್ವಿತೀಯ ಸೆಮಿಸ್ಟರ್ ತರಗತಿ ಆರಂಭಿಸಿ ಮೇ 15ಕ್ಕೆ ಮುಕ್ತಾಯಗೊಳಿಸಬೇಕು. ಮೇ 13 ರಿಂದ ಎರಡನೇ ಸೆಮಿಸ್ಟರ್ ಪರೀಕ್ಷೆಗಳನ್ನು ಆರಂಭಿಸಿ ಜೂನ್ 19ರ ಒಳಗಾಗಿ ಫಲಿತಾಂಶ ಪ್ರಕಟಿಸಬೇಕು ಎಂದು ಏಕರೂಪದ ವೇಳಾಪಟ್ಟಿಯಲ್ಲಿ ತಿಳಿಸಿದೆ.
ಈ ವೇಳಾಪಟ್ಟಿ ಇಂಜಿನಿಯರಿಂಗ್, ಡಿಪ್ಲೋಮಾ ಇತರೆ ತಾಂತ್ರಿಕ ಶಿಕ್ಷಣ ಕೋರ್ಸ್ಗಳಿಗೆ ಅನ್ವಯಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications