ಸಾಮಾಜಿಕ ಜಾಲತಾಣಕ್ಕೆ ಬಂದ ರಾಜ್ಯ ಮಾನವ ಹಕ್ಕು ಆಯೋಗ
ಬೆಂಗಳೂರು, ಮಾ.8 : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಫೇಸ್ಬುಕ್ ಮತ್ತು ಟ್ವಿಟರ್ ಖಾತೆಗಳನ್ನು ತೆರೆದಿದ್ದು, ಸಾರ್ವಜನಿಕರು ಆಯೋಗವನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಬಹುದಾಗಿದೆ. ಆಯೋಗದ ಕಚೇರಿಯಲ್ಲಿ ಜನರ ಸಹಾಯಕ್ಕಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಮೀರಾ ಸಕ್ಸೇನಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಇನ್ನುಮುಂದೆ ಸಾರ್ವಜನಿಕರು ಟ್ವಿಟರ್ ಮತ್ತು ಫೇಸ್ಬುಕ್ ಮೂಲಕ ಆಯೋಗವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಖಾತೆಯ ಮೂಲಕ ಜನರು ದೂರುಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕರು ಕೇವಲ ದೂರು ನೀಡಲು ಮಾತ್ರ ಈ ಖಾತೆಗಳನ್ನು ಉಪಯೋಗಿಸಬಾರದು. ಆಯೋಗಕ್ಕೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡುವುದಕ್ಕೂ ಆಯೋಗವನ್ನು ಈ ಮೂಲಕ ಸಂಪರ್ಕಿಸಬಹುದು ಎಂದು ಮೀರಾ ಸಕ್ಸೇನಾ ಹೇಳಿದರು.[ಫೇಸ್ ಬುಕ್ ಖಾತೆ]
ಸಹಾಯವಾಣಿ ಆರಂಭ : ಆಯೋಗದ ಕಚೇರಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಸಹಾಯವಾಣಿಗೆ ಜನರು ಉಚಿತವಾಗಿ ಕರೆ ಮಾಡಬಹುದು ಎಂದರು. ಸಹಾಯವಾಣಿ ಸಂಖ್ಯೆಗಳು : 1800-425-23333. [ಟ್ವಿಟರ್ ಐಡಿ]
ಫೇಸ್ಬುಕ್ನಲ್ಲಿ ಅವಹೇಳನ ದೂರು ದಾಖಲು : ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಇಸ್ಲಾಂ ಧರ್ಮ ಹಾಗೂ ಅಲ್ಲಾಹುವಿನ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ನಿತ್ಯಾನಂದ ನಾಯ್ಕ್ ಎಂಬ ಯುವಕನ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯಲ್ಲಿ ಇಸ್ಲಾಂ ಮತ್ತು ಅಲ್ಲಾಹುವಿನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಯನ್ನು ಅಪ್ ಲೋಡ್ ಮಾಡಲಾಗಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Meta Layoffs 2026: AI ಮೇಲೆ ಭಾರಿ ಹೂಡಿಕೆ, 15,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications