ಶೀಘ್ರದಲ್ಲೇ ಕಾಗದ ರಹಿತ ಇ ವಿಧಾನ ಸೌಧ : ಶಂಕರಮೂರ್ತಿ
ಬೆಂಗಳೂರು, ಫೆಬ್ರವರಿ 02: ಇ- ವಿಧಾನ ಹೆಸರಿನಲ್ಲಿ ವಿಧಾನಸೌಧದ ಉಭಯ ಸದನಗಳ ಕಲಾಪಗಳು ಕಾಗದ ರಹಿತವಾಗಿ ನಿರ್ವಹಿಸಲಿದೆ ಎಂದು ವಿಧಾನ ಪರಿಷತ್ತು ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು ಇಂದು ಹೇಳಿದರು.
ಆಡಳಿತದಲ್ಲಿನ ಪಾರದರ್ಶಕತೆಗೆ ಕಾಗದರಹಿತ ಕಚೇರಿ ವ್ಯವಸ್ಥೆ ನೆರವಾಗಲಿದ್ದು, ಕೆಲಸಗಳು ಸರಳೀಕರಣಗೊಳ್ಳಲಿದೆ. ಸಾರ್ವಜನಿಕ ಕೆಲಸಕಾರ್ಯಗಳು ಸುಗಮವಾಗಿ, ತ್ವರಿತವಾಗಿ ಆಗಲಿವೆ. ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು ಎಂದರು.

ಇತ್ತೀಚೆಗೆ ಉದಯಪುರದಲ್ಲಿ ನಡೆದ 18ನೇ ಅಖಿಲ ಭಾರತ ವಿಪ್ ಗಳ ಸಮಾವೇಶದಲ್ಲಿ ಇ ಸಂಸತ್ತು ಹಾಗೂ ಶಾಸಕಾಂಗ ವ್ಯವಸ್ಥೆ ಜಾರಿ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿತು. ಹಿಮಾಚಲ ಪ್ರದೇಶ ಶಾಸಕಾಂಗ ವ್ಯವಸ್ಥೆಯನ್ನು 2015ರಲ್ಲಿ ಅಧ್ಯಯನ ಮಾಡಲಾಗಿತ್ತು. ಈ ವ್ಯವಸ್ಥೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಯಿತು.
ರಾಜ್ಯ ಸರ್ಕಾರದ ಅಧೀನದಲ್ಲಿರುವ ಇ-ಆಡಳಿತ ಕೇಂದ್ರದ ಕೆಸ್ವಾನ್ (ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್ವರ್ಕ್) ಇ-ಆಫೀಸ್ ವ್ಯವಸ್ಥೆಯನ್ನು ಕಚೇರಿಗಳಿಗೆ ಒದಗಿಸುತ್ತದೆ.
ದಕ್ಷಿಣ ಕನ್ನಡ, ಉಡುಪಿ, ಗದಗ, ಕೊಪ್ಪಳ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗಳು, ವಿಜಯಪುರ, ರಾಯಚೂರು, ಬೀದರ್ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಹಾಗೂ ಸಹಾಯಕ ಆಯುಕ್ತರ ಕಚೇರಿಗಳು ಕಾಗದ ರಹಿತ ಕಚೇರಿಗಳೆನಿಸಿವೆ.
ಗೋವಾ ಅಸೆಂಬ್ಲಿಯಲ್ಲಿ ಈಗಾಗಲೇ ಇ ಟ್ಯಾಬ್ಲೆಟ್ ಹಾಗೂ ಲ್ಯಾಪ್ ಟ್ಯಾಪ್ ಸದ್ಬಳಕೆಯಾಗುತ್ತಿದ್ದು, ಸಂಪೂರ್ಣ ಕಾಗದ ರಹಿತ ಕಲಾಪ ಸಾಧಿಸುವತ್ತ ದಾಪುಗಾಲಿಟ್ಟಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications