ಶೀಘ್ರದಲ್ಲೇ ಕಾಗದ ರಹಿತ ಇ ವಿಧಾನ ಸೌಧ : ಶಂಕರಮೂರ್ತಿ
ಬೆಂಗಳೂರು, ಫೆಬ್ರವರಿ 02: ಇ- ವಿಧಾನ ಹೆಸರಿನಲ್ಲಿ ವಿಧಾನಸೌಧದ ಉಭಯ ಸದನಗಳ ಕಲಾಪಗಳು ಕಾಗದ ರಹಿತವಾಗಿ ನಿರ್ವಹಿಸಲಿದೆ ಎಂದು ವಿಧಾನ ಪರಿಷತ್ತು ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು ಇಂದು ಹೇಳಿದರು.
ಆಡಳಿತದಲ್ಲಿನ ಪಾರದರ್ಶಕತೆಗೆ ಕಾಗದರಹಿತ ಕಚೇರಿ ವ್ಯವಸ್ಥೆ ನೆರವಾಗಲಿದ್ದು, ಕೆಲಸಗಳು ಸರಳೀಕರಣಗೊಳ್ಳಲಿದೆ. ಸಾರ್ವಜನಿಕ ಕೆಲಸಕಾರ್ಯಗಳು ಸುಗಮವಾಗಿ, ತ್ವರಿತವಾಗಿ ಆಗಲಿವೆ. ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು ಎಂದರು.

ಇತ್ತೀಚೆಗೆ ಉದಯಪುರದಲ್ಲಿ ನಡೆದ 18ನೇ ಅಖಿಲ ಭಾರತ ವಿಪ್ ಗಳ ಸಮಾವೇಶದಲ್ಲಿ ಇ ಸಂಸತ್ತು ಹಾಗೂ ಶಾಸಕಾಂಗ ವ್ಯವಸ್ಥೆ ಜಾರಿ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಿತು. ಹಿಮಾಚಲ ಪ್ರದೇಶ ಶಾಸಕಾಂಗ ವ್ಯವಸ್ಥೆಯನ್ನು 2015ರಲ್ಲಿ ಅಧ್ಯಯನ ಮಾಡಲಾಗಿತ್ತು. ಈ ವ್ಯವಸ್ಥೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಯಿತು.
ರಾಜ್ಯ ಸರ್ಕಾರದ ಅಧೀನದಲ್ಲಿರುವ ಇ-ಆಡಳಿತ ಕೇಂದ್ರದ ಕೆಸ್ವಾನ್ (ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್ವರ್ಕ್) ಇ-ಆಫೀಸ್ ವ್ಯವಸ್ಥೆಯನ್ನು ಕಚೇರಿಗಳಿಗೆ ಒದಗಿಸುತ್ತದೆ.
ದಕ್ಷಿಣ ಕನ್ನಡ, ಉಡುಪಿ, ಗದಗ, ಕೊಪ್ಪಳ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗಳು, ವಿಜಯಪುರ, ರಾಯಚೂರು, ಬೀದರ್ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಹಾಗೂ ಸಹಾಯಕ ಆಯುಕ್ತರ ಕಚೇರಿಗಳು ಕಾಗದ ರಹಿತ ಕಚೇರಿಗಳೆನಿಸಿವೆ.
ಗೋವಾ ಅಸೆಂಬ್ಲಿಯಲ್ಲಿ ಈಗಾಗಲೇ ಇ ಟ್ಯಾಬ್ಲೆಟ್ ಹಾಗೂ ಲ್ಯಾಪ್ ಟ್ಯಾಪ್ ಸದ್ಬಳಕೆಯಾಗುತ್ತಿದ್ದು, ಸಂಪೂರ್ಣ ಕಾಗದ ರಹಿತ ಕಲಾಪ ಸಾಧಿಸುವತ್ತ ದಾಪುಗಾಲಿಟ್ಟಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications