ಬೀದರಿನಲ್ಲಿ ಕರ್ನಾಟಕ ಮುಕ್ತ ವಿವಿ ಶಾಶ್ವತವಾಗಿ ಮುಚ್ಚಲಿದೆಯೇ?
ಬೀದರ್, ಫೆಬ್ರವರಿ 8: ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಬೀದರ್ ಪ್ರಾದೇಶಿಕ ಕೇಂದ್ರದ ಬಾಗಿಲು ಇದೇ ಫೆಬ್ರವರಿ ಅಂತ್ಯಕ್ಕೆ ಶಾಶ್ವತವಾಗಿ ಬಂದ್ ಆಗಲಿದೆ.
ವಿಶ್ವವಿದ್ಯಾಲಯದ ಕುಲಸಚಿವರು ಬೀದರ್ ವಿವಿ ಕೇಂದ್ರವನ್ನು ರದ್ದುಗೊಳಿಸಿ ಆದೇಶವನ್ನು ಹೊರಸಿದ್ದಾರೆ. ರಾಜ್ಯದ 21 ಜಿಲ್ಲೆಗಳಲ್ಲಿ ಪ್ರಾದೇಶಿಕ ಕೇಂದ್ರ ಹೊಂದಿರುವ ಮುಕ್ತ ವಿವಿ ಆರ್ಥಿಕ ಮುಗ್ಗಟ್ಟಿನಿಂದಾಗಿ ನಾಲ್ಕು ಜಿಲ್ಲೆಗಳಲ್ಲಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಪ್ರಾದೇಶಿಕ ಕೇಂದ್ರಗಳನ್ನು ಮಾತ್ರ ಮುಚ್ಚಲು ಆದೇಶ ಹೊರಡಿಸಿದೆ. ಫೆಬ್ರುವರಿ 28ರೊಳಗೆ ಬೀದರ್ ಕಚೇರಿಯಲ್ಲಿರುವ ಎಲ್ಲ ಸಾಮಗ್ರಿಗಳನ್ನು ಕಲಬುರ್ಗಿ ಕಚೇರಿಗೆ ಸ್ಥಳಾಂತರ ಮಾಡುವಂತೆ ಸೂಚಿಸಿದ್ದಾರೆ.[ಕೆಎಸ್ಒಯು ಕುಲಸಚಿವ ಪ್ರೊ. ಪಿ.ಎಸ್. ನಾಯಕ್ ಅಮಾನತು]

ಬೀದರ್ನಲ್ಲಿ ಪ್ರಾದೇಶಿಕ ಕೇಂದ್ರದಲ್ಲಿ ನಿರ್ದೇಶಕರು ಹಾಗೂ ಕಚೇರಿ ಅಧೀಕ್ಷಕರು ಮಾತ್ರ ಇದ್ದರು. ಕಳೆದ ವರ್ಷ ನಿರ್ದೇಶಕರನ್ನು ಉತ್ತರ ಕನ್ನಡ ಜಿಲ್ಲೆಗೆ ವರ್ಗ ಮಾಡಲಾಗಿದೆ. ಕಚೇರಿಯಲ್ಲಿ ಅಧೀಕ್ಷಕರು ಬಿಟ್ಟರೆ ಬೇರೆ ಸಿಬ್ಬಂದಿ ಇಲ್ಲ. ಹೀಗಾಗಿ ಒಂದು ಕಟ್ಟಡ ವಿಲ್ಲ ಮತ್ತೊಂದೆಡೆ ನಿರ್ದೇಶಕರ ವರ್ಗ ವಾಗಿರುವ ಕಾರಣ ವಿವಿ ಕೇಂದ್ರವನ್ನು ಮುಚ್ಚಲಾಗುತ್ತಿದೆ.
ಈ ಹಿಂದೆ. ಪ್ರಾದೇಶಿಕ ಕೇಂದ್ರಕ್ಕೆ ನಿವೇಶನ ಮಂಜೂರು ಮಾಡುವಂತೆ ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಜಿಲ್ಲಾ ಆಡಳಿತಕ್ಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಉಮಾಶ್ರೀ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೂ ಅನೇಕ ಬಾರಿ ಮನವಿ ಮಾಡಿದ್ದರು. ನಾಲ್ಕು ವರ್ಷ ಕಳೆದರೂ ಜಾಗ ಸಿಗದ ಕಾರಣ ಹಾಗೂ ಬಾಡಿಗೆ ವೆಚ್ಚವನ್ನು ತಗ್ಗಿಸುವ ಉದ್ದೇಶದಿಂದ ಮುಕ್ತ ವಿವಿ ಈ ನಿರ್ಣಯವನ್ನು ಕೈಗೊಂಡಿದೆ.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications