ಕೆಜಿಎಫ್ ಕ್ರೀಡಾ ಕೂಟದಲ್ಲಿ ಪೊಲೀಸ್ ಮಕ್ಕಳ ಕಲರವ
ಕೋಲಾರ, ಡಿಸೆಂಬರ್, 21: ಪೊಲೀಸ್ ಕ್ರೀಡಾಕೂಟದ ಅಂಗವಾಗಿ ಮೂರು ದಿನಗಳಿಂದ ಕೆಜಿಎಫ್ ಚಾಂಪೀಯನ್ ರೀಫ್ಸ್ ನ ಡಿ.ಎ.ಆರ್ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪೊಲೀಸ್ ಮಕ್ಕಳ ಕ್ರೀಡಾಕೂಟ ಭಾನುವಾರ ನಡೆದಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಮಕ್ಕಳ ಕ್ರೀಡಾಕೂಟವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದ ನಗರಸಭೆ ಪೌರಾಯುಕ್ತ ವಿ. ಬಾಲಚಂದ್ರ, ' ಈ ಹಿಂದೆ ಪೊಲೀಸರಿಗೆ ಮಾತ್ರ ವರ್ಷಕೊಮ್ಮೆ ಕ್ರೀಡಾಕೂಟ ಆಯೋಜಿಸಲಾಗುತಿತ್ತು. ಆದರೆ ಈ ಬಾರಿ ಪೊಲೀಸ್ ಮಕ್ಕಳಿಗೂ ಕ್ರೀಡೆ ಏರ್ಪಡಿಸಿರುವುದು ಸಂತಸದ ವಿಚಾರ. ಇದು ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟರು.[ಆ ಪುಟ್ಟ ಬಾಲಕನಿಗೆ ಪೊಲೀಸ್ ಅಧಿಕಾರಿಗಳ ಸೆಲ್ಯೂಟ್!]
ಕೋಲಾರ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ|| ಎಂ. ಮಹೇಂದ್ರ ಮಾತನಾಡಿ, ಪೋಷಕರು ಮಕ್ಕಳಿಗೆ ಬಾಲ್ಯದಿಂದಲೇ ಕ್ರೀಡೆ ಕಡೆಗೆ ಒಲವು ತೋರುವಂತೆ ಪ್ರೇರೇಪಿಸಬೇಕು. ಚಿಕ್ಕವಯಸ್ಸಿನಿಂದಲೇ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಿದ್ದಲ್ಲಿ ದೈಹಿಕವಾಗಿ ಸದೃಢರಾಗುವುದಲ್ಲದೆ, ಮಾನಸಿಕವಾಗಿ ಪ್ರಬಲರಾಗುವ ಎಲ್ಲಾ ಅವಕಾಶಗಳೂ ಇವೆ ಎಂದು ಕಿವಿಮಾತು ಹೇಳಿದರು.[ಪಿಲಿಕುಳ ನಿಸರ್ಗ ಧಾಮದಲ್ಲಿ ಆಯುಷ್ ಹಬ್ಬ ಸಂಭ್ರಮ]
ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಎಚ್. ಆರ್ ಭಗವಾನ್ ದಾಸ್, ಬೆಮೆಲ್ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ರಾಜ್ ಶೇಖರ್, ಅಂತರಾಷ್ಟ್ರೀಯ ಕರಾಟೆ ಪಟು ರಮೇಶ್ ಕುಮಾರ್ ಮತ್ತಿತರ ಅಧಿಕಾರಿಗಳು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.