ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ರಾಜ್ಯದ ಮೊದಲ ವನ್ಯಜೀವಿ ವಿಧಿವಿಜ್ಞಾನ ಪ್ರಯೋಗಾಲಯ!
ಬೆಂಗಳೂರು, ಜನವರಿ 5: ಬೆಂಗಳೂರಿನಲ್ಲಿ ರಾಜ್ಯದ ಮೊದಲ ವನ್ಯಜೀವಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪಿಸುವ ಯೋಜನೆಗೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ.
ಇತ್ತೀಚೆಗಷ್ಟೇ ರಾಜ್ಯ ಸರ್ಕಾರವು, ದಶಕದಿಂದ ಚರ್ಚೆಯಾಗುತ್ತಿದ್ದ ಪ್ರಯೋಗಾಲಯ ಸ್ಥಾಪನೆಗೆ ಅಧಿಕೃತವಾಗಿ ಒಪ್ಪಿಗೆ ನೀಡಿದೆ. ಅರಣ್ಯಾಧಿಕಾರಿಗಳ ಬಹುಬೇಡಿಕೆಯ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆಯ ಯೋಜನೆಗೆ ರಾಜ್ಯ ಸರ್ಕಾರ 2.7 ಕೋಟಿ ರೂ.ಗೆ ಅನುಮೋದನೆ ನೀಡಿದ್ದು, ಮಾರ್ಚ್ ವೇಳೆಗೆ ಈ ಪ್ರಯೋಗಾಲಯ ಕಾರ್ಯಾರಂಭ ಮಾಡಲಿದೆ ಎಂದು ಡಿಎಚ್ ವರದಿ ಮಾಡಿದೆ.
ಅನೇಕ ಪ್ರಕರಣಗಳಲ್ಲಿ ಆರೋಪಿಗಳಿಂದ ಮಾಂಸ ಮತ್ತು ಮೂಳೆಗಳನ್ನು ವಶಪಡಿಸಿಕೊಂಡು ಅಪರಾಧವನ್ನು ದೃಢೀಕರಿಸಲು ಎಫ್ಎಸ್ಎಲ್ ವರದಿಗಾಗಿ ಕಾಯುವುದು ಅನಿವಾರ್ಯವಾಗಿತ್ತು. ಆದರೇ ಈಗ ರಾಜ್ಯದಲ್ಲಿಯೇ ರಾಜ್ಯದಲ್ಲಿಯೇ ಈ ವಿಧಿವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸುವುದರಿಂದ ಅತಿ ತ್ವರಿತ ಗತಿಯಲ್ಲಿ
ಪ್ರಕರಣ ದಾಖಲಿಸಬಹುದಾಗಿದೆ. ಸಾವಿನ ಸಮಯವನ್ನು ನಿರ್ಧರಿಸುವುದು, ಆನುವಂಶಿಕ ಅನುಕ್ರಮ ಮತ್ತು ಇತರ ವಿಶ್ಲೇಷಣೆಗಳು ಉತ್ತಮ ತನಿಖೆಗೆ ಈ ಪ್ರಯೋಗಾಲಯವು ಸಹಾಯಕವಾಗಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಹೇಳಿದರು.

ಅತ್ಯಾಧುನಿಕ ಉಪಕರಣಗಳ ಬಳಕೆ !
ಈ ಪ್ರಯೋಗಾಲಯಗಳಲ್ಲಿ ಆಧುನಿಕ ಉಪಕರಣಗಳನ್ನು ಹೊಂದಿರುವುದರಿಂದ ತನಿಖೆಗೆ ಸಂಬಂಧಿಸಿದಂತೆ ನಿರ್ಣಾಯಕ ವಿಶ್ಲೇಷಣೆ ಮತ್ತು ವರದಿಗಳನ್ನು ಒದಗಿಸುತ್ತದೆ. ಈ ಪ್ರಯೋಗಾಲಯವು ಡಿಎನ್ಎ ವಿಶ್ಲೇಷಣೆ ಮತ್ತು ರೂಪವಿಜ್ಞಾನ ವಿಶ್ಲೇಷಣೆ ಎಂಬ ವಿಷಯಗಳ ಕುರಿತು ಅಧ್ಯಯನ ನಡೆಸಲು ಅತಿ ಸಹಾಯಕವಾಗಿವೆ. ಡಿಎನ್ಎ ವಿಶ್ಲೇಷಣೆಯು ಜಪ್ತಿ ಮಾಡಲಾದ ಮಾದರಿಗಳನ್ನು (ಉಗುರು, ಕೂದಲು, ಹಲ್ಲುಗಳು ಮತ್ತು ಇತರ ವಸ್ತುಗಳು) ಪರೀಕ್ಷಿಸುವ ಮೂಲಕ ಮೃತದೇಹಗಳ ಮೂಲ ಮತ್ತು ಜಾತಿಗಳ ಬಗ್ಗೆ ವಿವರಗಳನ್ನು ಒದಗಿಸುತ್ತದೆ. ರೂಪವಿಜ್ಞಾನ ವಿಶ್ಲೇಷಣೆಯು ಪ್ರಾಣಿಯ ವಿನ್ಯಾಸ ಮತ್ತು ಭೌತಿಕ ಲಕ್ಷಣಗಳ ಕುರಿತು ಅಧ್ಯಯನ ಮಾಡಲು ನೆರವಾಗಲಿದೆ ಎಂದು ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದ (SFSL) ನಿರ್ದೇಶಕ ಧರ್ಮೇಂದ್ರ ಕುಮಾರ್ ಮೀನಾ ಹೇಳಿದ್ದಾರೆ.
ವನ್ಯಜೀವಿಗೆ ಸಂಬಂಧಿಸಿದ ಅಪರಾಧಗಳ ತನಿಖೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲ ನಿರ್ಣಾಯಕ ಪಾತ್ರವನ್ನು ನಿರ್ವಹಿಸುತ್ತದೆ. ಈ ಪೂರ್ವದಲ್ಲಿ ರಾಜ್ಯಗಳಲ್ಲಿನ ವನ್ಯಜೀವಿಗಳನ್ನು ಒಳಗೊಂಡ ಅಪರಾಧಗಳ ಮಾದರಿಗಳನ್ನು ಡೆಹ್ರಾಡೂನ್ ಅಥವಾ ಹೈದರಾಬಾದ್ಗೆ ಕಳುಹಿಸಲಾಗುತ್ತದೆ, ಇದರಿಂದ ಅನೇಕ ಸಂದರ್ಭಗಳಲ್ಲಿ ತನಿಖೆ ಪ್ರಕ್ರಿಯೆಯನ್ನು ಸಹ ನಿಧಾನಗೊಳಿಸಲಾಗುತ್ತಿತ್ತು ಎಂದು ವನ್ಯಜೀವಿ ಸಂರಕ್ಷಣಾಧಿಕಾರಿ ಶರತ್ ಬಾಬು ಆರ್ ಹೇಳಿದರು.

ಹಲವಾರು ವರ್ಷಗಳಿಂದ ಅರಣ್ಯಾಧಿಕಾರಿಗಳು ಪ್ರಯೋಗಾಲಯ ಸ್ಥಾಪನೆಯ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಲೆ ಬಂದಿದೆ. ಈಗ ಈ ಯೋಜನೆಯು ಮುನ್ನೆಲೆಗೆ ಬಂದಿದ್ದು, ಪ್ರಯೋಗಾಲಯದ ಕಾರ್ಯಾರಂಭದ ನಂತರದಲ್ಲಿ ತಿಂಗಳಿಗೆ ಕನಿಷ್ಠ 10 ವನ್ಯಜೀವಿ ಅಪರಾಧಗಳನ್ನು ವರದಿ ಮಾಡಬಹುದಾಗಿದೆ ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications