ಜನವರಿ 17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025 : ಸಂಪೂರ್ಣ ಮಾಹಿತಿ ಇಲ್ಲಿದೆ
ಬೆಂಗಳೂರು, ಡಿಸೆಂಬರ್ 24: ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಕ್ರೀಡಾಕೂಟ -2025 ವನ್ನು ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.
ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದ್ದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಭಾಗಿಯಾಗಲಿದ್ದಾರೆ. ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಕ್ರೀಡಾಕೂಟದಲ್ಲಿ 3750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4500 ಜನರು ಭಾಗವಹಿಸಲಿದ್ದು ಊಟ -ತಿಂಡಿ,ವಸತಿ , ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.
ಕ್ರೀಡಾಕೂಟ ಲಾಂಛನ ಬಿಡುಗಡೆ
ಕರ್ನಾಟಕ ಕ್ರೀಡಾಕೂಟ-2025ರ ಲಾಂಛನ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು. ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು ಜತೆಗೆ ಸೋಲು- ಗೆಲುವು ಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವುದಾಗಿ ಅಧಿಕಾರಿಗಳು ವಿವರಿಸಿದರು.
ಸಭೆಯಲ್ಲಿ ಗೃಹಸಚಿವರಾದ ಡಾ ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications