ಯಡಿಯೂರಪ್ಪ ಫೋಕ್ಸೋ ಪ್ರಕರಣ: ಮಹಿಳಾ ಆಯೋಗ ಹೇಳಿದ್ದೇನು?
ಬೆಂಗಳೂರು, ಮಾರ್ಚ್ 16: ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕಾಯ್ದಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಈ ಕೇಸಿನ ಬಗ್ಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯವರು, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿದೆ. ತನಿಖೆಯಲ್ಲಿ ಯಡಿಯೂರಪ್ಪನವರ ತಪ್ಪು ಸಾಬೀತಾದರೆ ಅವರು ಶಿಕ್ಷೆಗೆ ಗುರಿಯಾಗುತ್ತಾರೆ. ವರದಿ ಬಂದರೆ ಸತ್ಯಾಸತ್ಯತೆ ತಿಳಿಯಲಿದೆ ಎಂದು ಹೇಳಿದರು.

ಯಡಿಯೂರಪ್ಪನವರ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ತನಿಖೆಯಿಂದ ಸರಿ ಇದ್ದರೆ ಸರಿ, ತಪ್ಪಿದ್ದರೆ ತಪ್ಪು. ಕಾನೂನಿಗೆ ಯಾರು ಹೊರತಲ್ಲ. ತಪ್ಪು ಸಾಬೀತಾದರೆ ಪೊಕ್ಸೊ ಅಡಿಯಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ತನಿಖಾ ವರದಿ ಸಲ್ಲಿಕೆ ಬಳಿಕ ಎಲ್ಲವು ತಿಳಿಯಲಿದೆ ಎಂದು ತಿಳಿಸಿದರು.
ಪೋಷಕರಿಗೆ ಆಯೋಗದ ಅಧ್ಯಕ್ಷೆ ಸಲಹೆ
ಸಂಬಂಧಿಸಿದ ಪುರಷರಿಂದಲೇ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ವಯಸ್ಸಿಗೆ ಬಾರದ ಹೆಣ್ಣುಮಕ್ಕಳನ್ನು ಗರ್ಭೀಣಿ ಮಾಡಿ ನರಕಕ್ಕ ತಳ್ಳಲಾಗುತ್ತಿದೆ. 15 ಇಲ್ಲವೇ 16ನೇ ವಯಸ್ಸಿಗೆ ಹೆಣ್ಣುಮಕ್ಕಳು ಗರ್ಭ ಧರಿಸಿದರೆ ಏನು ಮಾಡುವುದು. ಹೆಣ್ಣು ಹೆತ್ತ ಪೋಷಕರು ತಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು, ನಿಗ ಇಡಬೇಕು ಎಂದು ಅವರು ಸಲಹೆ ನೀಡಿದರು.

ಮಹಿಳೆಯರು ಕಾಣೆಯಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಹಿಳಾ ಆಯೋಗದ ಅಧ್ಯಕ್ಷೆ, ಇದರ ಹಿಂದೆ ದೊಡ್ಡ ಮಾಫಿಯಾ ಇದೆ. ಕಾಣೆಯಾದವರ ಪೈಕಿ ಕೆಲವರಂತೂ ಪತ್ತೆ ಆಗುವುದೇ ಇಲ್ಲ ಎಂದು ವಿಷಾಧಿಸಿದರು.
ಸದ್ಯ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳ ಹಕ್ಕುಗಳಿಗೆ ಗೌರವ ಹೆಚ್ಚಾಗಿದೆ. ಯೋಜನೆಗಳಿಂದ ಕುಟುಂಬ, ಸಮಾಜ ಅಭಿವೃದ್ಧಿ ಹೊಂದುತ್ತಿದೆ. ಹೆಣ್ಣು ಮಕ್ಕಳಿಗೆ ಹಣ ನೀಡುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಇಂದಿನ ಹೆಣ್ಣು ಮಕ್ಕಳ ಗೌರವ, ಸರ್ಕಾರಿ ಯೋಜನೆಗಳ ಕುರಿತು ಅವರು ಶ್ಲಾಘಿಸಿದರು.
ಯಡಿಯೂರಪ್ಪ ತೇಜೋವಧೆ ಸರಿಯಲ್ಲ: ಸಚಿವ
ಫೋಕ್ಸೋ ಪ್ರಕರಣ ದಾಖಲಾಗಿದೆ. ಬಿಎಸ್ ಯಡಿಯೂರಪ್ಪ ಅವರನ್ನು ತೇಜೋವಧೆ ಮಾಡುವುದು ಸರಿಯಲ್ಲ. ದೂರು ದಾಖಲಾದ ತಕ್ಷಣ ಅವರನ್ನು ದೋಷಿ ಅಂತಲೂ ಇಲ್ಲ, ನಿರ್ದೋಷಿ ಅಂತಲೂ ಹೇಳಲು ಬರುವುದಿಲ್ಲ. ತನಿಖೆ ನಡೆಯಬೇಕು. ಅದಾದ ಬಳಿಕ ತಿಳಿಯಲಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು.
ಕೇಸ್ ಬಗ್ಗೆ ಯಡಿಯೂರಪ್ಪ ಸ್ಪಷ್ಟನೆ ಏನಿದೆ?
ದೂರು ನೀಡಿರುವ ಹೆಣ್ಣು ಮಗಳು ಕೆಲವು ಬಾರಿ ಸಹಾಯ ಕೇಳಿ ಕೊಂಡು ನಮ್ಮ ಬಳಿ ಬಂದಿದ್ದರು. ಅದರಂತೆಯ ಇತ್ತೀಚೆಗೆ ತಾಯಿ ಮಗಳ ಮನೆಗೆ ಬಂದಾಗ ಕೂರಿಸಿ ಸಹಾಯ ಮಾಡಲು ಮಾತನಾಡಿದ್ದೆ. ಸಮಸ್ಯೆ ಇದೆ ಎಂದಾಗ ಪೊಲೀಸರ ಬಳಿ ನಾನೇ ಅವರನ್ನು ಕಳುಹಿಸಿದ್ದೆ. ಅಲ್ಲಿಗೆ ಹೋಗ ಮೇಲೆ ಉಪಕಾರ ಮಾಡದವರ ಮೇಲೆ ರೀತಿ ಆರೋಪ ಮಾಡಿದ್ದಾರೆ.
ಈ ಆರೋಪಗಳು ಆಧಾರರಹಿತವಾದವು. ಏನೇ ತನಿಖೆ ಇದ್ದರೂ ನಾನು ಎದುರಿಸಲು ಸಿದ್ಧ ಎಂದು ಯಡಿಯೂರಪ್ಪ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.
ಸದ್ಯ ಯಡಿಯೂರಪ್ಪನವರ ವಿರುದ್ಧದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿದೆ. ತನಿಖೆ ಬಳಿಕೆ ಸತ್ಯಾಸತ್ಯತೆ ತಿಳಿಯಲಿದೆ ಎನ್ನಲಾಗಿದೆ..
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications