ದ್ವಿತೀಯ ಪಿಯು ಫಲಿತಾಂಶ : ವಿದ್ಯಾರ್ಥಿಗಳ ಯಶಸ್ಸಿನ ಕಥೆ
ಬೆಂಗಳೂರು, ಮೇ 19 : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟಾರೆ ಶೇ.60.54ರಷ್ಟು ಫಲಿತಾಂಶ ಬಂದಿದೆ. ನಗರ ಭಾಗದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ. ಒಂದು ಸರ್ಕಾರಿ ಕಾಲೇಜು ಸೇರಿದಂತೆ 47 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ಕಾಡುಗೋಡಿಯಲ್ಲಿ ಪ್ರಗತಿ ಕಾಲೇಜಿನ ಹಾಸ್ಟೆಲ್ನಲ್ಲಿ ಅಟೆಂಡರ್ ಮಹೇಶ್ ಗುಂಡಿಗೆ ಬಲಿಯಾದ ವಿದ್ಯಾರ್ಥಿನಿ ಗೌತಮಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾಳೆ. ಉಡುಪಿಯಲ್ಲಿ ಫೇಲಾಗುವ ಭಯದಿಂದ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಸೋಮವಾರ ಫಲಿತಾಂಶ ಪ್ರಕಟವಾದಾಗ ಆಕೆ ಉತ್ತೀರ್ಣಗೊಂಡಿದ್ದಾಳೆ. [ಪಿಯು ಟಾಪರ್ ಕುಡ್ಲದ ರಶ್ಮಿತಾ ಜೊತೆ ಚಿಟ್ ಚಾಟ್]
ದ್ವಿತೀಯ ಪಿಯುಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳು ತಮ್ಮ ಸಾಧನೆಯ ಸಂತಸವನ್ನು ಹಂಚಿಕೊಂಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಉನ್ನತ ವ್ಯಾಸಂಗ ಮಾಡಿ ಸಾಧನೆ ಮಾಡಬೇಕೆಂದಿರುವ ಎಲ್ಲಾರಿಗೂ ಇನ್ ಇಂಡಿಯಾದ ಕಡೆಯಿಂದ ಆಲ್ದಿ ಬೆಸ್ಟ್. [ಫಲಿತಾಂಶ : ಯಾವ ಜಿಲ್ಲೆಗೆ ಯಾವ ಸ್ಥಾನ]

ನಾನು ಓದುವುದು ಕಡಿಮೆ : ವಾಣಿಜ್ಯ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿರುವ ಬೆಂಗಳೂರು ಜೈನ್ ಕಾಲೇಜಿನ ವಿದ್ಯಾರ್ಥಿನಿ ವೀಣಾ ರೆಡ್ಡಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. 'ನಾನು ಓದುವುದು ಕಡಿಮೆ. ಆದರೆ, ಚೆನ್ನಾಗಿ ಕೇಳಿಸಿಕೊಳ್ಳುತ್ತೇನೆ. ಆದ್ದರಿಂದ ತರಗತಿಗಳಲ್ಲಿರುವಾಗ ಶ್ರದ್ಧೆಯಿಂದ ಕೇಳುತ್ತಿದ್ದೆ. ನಂತರ ಅದನ್ನು ಒಂದು ಬಾರಿ ಓದಿದರೆ ನೆನಪಿನಲ್ಲಿ ಇರುತ್ತಿತ್ತು' ಎಂದು ಸಾಧನೆಯ ಗುಟ್ಟನ್ನು ತೆರೆದಿಟ್ಟಿದ್ದಾರೆ.
'ಸಿಎ ಓದುತ್ತಿರುವ ಅಕ್ಕ ಎಂತಹ ಕ್ಲಿಷ್ಟ ವಿಷಯಗಳಿದ್ದರೂ ಕ್ಷಣ ಮಾತ್ರದಲ್ಲಿ ಬಗೆಹರಿಸಿಕೊಡುತ್ತಿದ್ದಳು. ಅಕ್ಕನ ನೆರವಿನಿಂದ ನಾನು ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸುವಂತಾಯಿತು ಎಂದು ಹೇಳಿದ್ದಾರೆ. ವೀಣಾ ತಂದೆ ಜಗನ್ನಾಥ ರೆಡ್ಡಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದಾರೆ. ಅಕ್ಕ ಸಹ ಅದೇ ಹಾದಿಯಲ್ಲಿ ಸಾಗುತ್ತಿದ್ದಾಳೆ. ನಾನು ಸಿಎ ಓದಬೇಕು ಎಂಬ ಗುರಿ ಹೊಂದಿದ್ದೇನೆ ಎನ್ನುತ್ತಾರೆ ವೀಣಾ.
ಕೊಪ್ಪಳದ ಬಡ ಹುಡುಗನ ಸಾಧನೆ : ಮನೆಯಲ್ಲಿನ ಬಡತನದಿಂದಾಗಿ ಬಾರ್ನಲ್ಲಿ ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ದುಡಿದ ನಾಗರಾಜ ಎಂಬ ವಿದ್ಯಾರ್ಥಿ ಪಿಯುಸಿ ಕಲಾ ವಿಭಾಗದಲ್ಲಿ ಶೇ. 87ರಷ್ಟು ಅಂಕ ಪಡೆದಿದ್ದಾನೆ. ಗಂಗಾವತಿಯ ಸಂಕಲ್ಪ ಪಿಯು ಕಾಲೇಜಿನ ವಿದ್ಯಾರ್ಥಿ ನಾಗರಾಜನಿಗೆ 10ನೇ ತರಗತಿ ನಂತರ ಓದು ಮುಂದುವರಿಸಲು ಬಡತನ ಅಡ್ಡಿಯಾಗಿದ್ದರಿಂದ ಕೆಲಸ ಮಾಡುವುದು ಅನಿವಾರ್ಯವಾಗಿತ್ತು.
ಬಾರ್ನಲ್ಲಿ ಕೆಲಸಕ್ಕೆ ಸೇರಿದ ಆತ ಮಧ್ಯಾಹ್ನ 3 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಕೆಲಸ ಮಾಡುತ್ತಿದ್ದ. ಬೆಳಗ್ಗೆ 4ರಿಂದ 7 ಗಂಟೆಯವರೆಗೂ ಓದುವುದನ್ನು ಬಾರ್ನಲ್ಲಿ ಕೆಲಸ ಮಾಡುತ್ತಲೇ ಪಿಯುಸಿ ಓದು ಪೂರ್ಣಗೊಳಿಸಿದ ಈತ 525 ಅಂಕ ಪಡೆದಿದ್ದಾನೆ.
ಚಿಕ್ಕಮಗಳೂರು ಹುಡುಗಿಗೆ ಡಾಕ್ಟರ್ ಆಗುವ ಕನಸು : ಚಿಕ್ಕಮಗಳೂರಿನ ಶಿಲ್ಪಾ ಸಾಯಿ ಏಂಜಲ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿ.ಬಿ.ಶಿಲ್ಪ 582 ಅಂಕಗಳನ್ನು ಪಡೆದು ಜಿಲ್ಲೆಗೆ ವಿಜ್ಞಾನ ವಿಷಯದಲ್ಲಿ ಪ್ರಥಮ ಸ್ಥಾನಗಳಿಸಿದ್ದಾಳೆ. ಬಸವನಹಳ್ಳಿ ನಿವಾಸಿ ಆಟೋ ಚಾಲಕ ಬಸವಾರಾಧ್ಯ ಮತ್ತು ಆರೋಗ್ಯ ಸಹಾಯಕಿ ಶಕುಂತಲಾ ಅವರ ಪುತ್ರಿ ಶಿಲ್ಪ ಸಿಇಟಿ ಪರೀಕ್ಷೆಯನ್ನು ಬರೆದಿದ್ದು, ಡಾಕ್ಟರ್ ಆಗುವ ಕನಸು ಕಂಡಿದ್ದಾಳೆ.
ಐಎಎಸ್ ಅಧಿಕಾರಿಯಾಗುವ ಕನಸು : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಅಂಜು ಪಿಯುಸಿ ಕಲಾ ವಿಭಾಗದಲ್ಲಿ 553 ಅಂಕಗಳನ್ನು ಗಳಿಸಿದ್ದಾಳೆ. ಖಾಸಗಿ ವಾಹನ ಓಡಿಸುವ ರಫಿಕ್ ಅಹ್ಮದ್ ಅವರ ಪುತ್ರಿ ಅಂಜು ಐಎಎಸ್ ಅಧಿಕಾರಿಯಾಗುವ ಕನಸನ್ನು ಹೊತ್ತಿದ್ದಾರೆ. ಕುಷ್ಟಗಿಯ ಆರಾಳಗೌಡರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಜು ಕನ್ನಡದಲ್ಲಿ 95, ಇಂಗ್ಲಿಷ್ನಲ್ಲಿ 80, ಇತಿಹಾಸದಲ್ಲಿ 93, ಅರ್ಥಶಾಸ್ತ್ರದಲ್ಲಿ 91, ಸಮಾಜಶಾಸ್ತ್ರದಲ್ಲಿ 98, ಶಿಕ್ಷಣ ಶಾಸ್ತ್ರದಲ್ಲಿ 96 ಅಂಕಗಳನ್ನು ಪಡೆದಿದ್ದಾಳೆ.
-
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ











Click it and Unblock the Notifications