ಬೇಳೆಕಾಳು ಖರೀದಿಗೆ ಟೆಂಡರ್ ಆಹ್ವಾನಿಸಿದ ರಾಜ್ಯ ಸರ್ಕಾರ
ಕಲಬುರಗಿ,ಮೇ 20: ದಿನೇ ದಿನೇ ಏರುತ್ತಿರುವ ಬೇಳೆ ಕಾಳು ದರಕ್ಕೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿರುವುದು ಗೊತ್ತೆ ಇದೆ.
ರೈತರಿಂದ ಖರೀದಿಸಿರುವ ತೊಗರಿ ಭಾರತ ಆಹಾರ ನಿಗಮದಲ್ಲಿ ದಾಸ್ತಾನಿದ್ದು ಇದರ ಖರೀದಿಗೆ ಟೆಂಡರ್ ಕರೆಯಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.[ಗಮನಿಸಿ, 120 ರು.ಗಿಂತ ಹೆಚ್ಚಿನ ದರಕ್ಕೆ ಬೇಳೆಕಾಳು ಮಾರುವಂತಿಲ್ಲ]
ಕಲಬುರಗಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮುಕ್ತ ಮಾರುಕಟ್ಟೆಯಲ್ಲಿ ತೊಗರಿ ಮತ್ತಿತರ ದ್ವಿದಳ ಧಾನ್ಯಗಳ ಬೆಲೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕೈಗೊಳ್ಳಲು ಚಿಂತನೆ ನಡೆಸಿದೆ ಹಾಗೂ ತೊಗರಿಯನ್ನು ಮಿಲ್ಲಿಂಗ್ ಮಾಡುವ ಬಗ್ಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಕಳೆದ ವರ್ಷ (2015-16)ರಲ್ಲಿ 3ಲಕ್ಷ ಮೆಟ್ರಿಕ್ ಟನ್ ತೊಗರಿಯ ಉತ್ಪಾದನೆಯಾಗಿದ್ದು, ಇದು ಈ ಹಿಂದಿನ ವರ್ಷಗಳಿಗಿಂತ ಶೇ. 40ರಷ್ಟು ಕಡಿಮೆಯಾಗಿದೆ. ಆದರೂ ತೊಗರಿ ಉತ್ಪಾದನೆಯಲ್ಲಿ ಕಲಬುರಗಿ ಜಿಲ್ಲೆಯು ಇಡೀ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಎಂದರು. [ತೊಗರಿ ಬೇಳೆಗೆ ಬಂಗಾರದ ಬೆಲೆ ಬರಲು ಕಾರಣವೇನು?]

ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಆಹಾರ ಇಲಾಖೆ ಉಪನಿರ್ದೇಶಕ ಎ.ಟಿ. ಜಯಪ್ಪ, ಸಹಾಯಕ ನಿರ್ದೇಶಕ ವಿಜಯಾನಂದ ಡಿಗ್ಗಿಕರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಾಶ ಅಯ್ಯಾಳಕರ್, ಸೆಂಟ್ರಲ್ ವೇರ್ಹೌಸ್ ಮ್ಯಾನೇಜರ್ , ತೊಗರಿ ಅಭಿವೃದ್ಧಿ ಮಂಡಳಿಯ ಆಡಳಿತಾಧಿಕಾರಿ ಮಲ್ಲಪ್ಪ, ಎಚ್ ಕೆ.ಸಿ.ಸಿ.ಐ. ಪದಾಧಿಕಾರಿ ಭೀಮಾಶಂಕರ ಪಾಟೀಲ್ ಹಾಜರಿದ್ದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications