Fact Check: ನೀರು ಕೇಳ್ತಾ ಇದ್ದೀರಲ್ವಾ, ಎಲ್ಲಿದೆ ನೀರು? ನೀವೇ ನೋಡಿ..
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಹಲವು ವರ್ಷಗಳ ಕಾವೇರಿ ನದಿನೀರು ಹಂಚಿಕೆ ವಿವಾದ ಮತ್ತೆ ಎದ್ದು ನಿಂತು ಕೂತಿದೆ. ಎಂದಿನಂತೆ ಬೆಂಗಳೂರು/ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಎರಡು ರಾಜ್ಯಗಳ ರಾಜಕಾರಣಿಗಳಿಗೆ ರಾಜಕೀಯ ವಿಚಾರದ ಅಭಾವ ಉಂಟಾದಾಗ ಕಾವೇರಿ ಸಮಸ್ಯೆ ಎದುರಾಗುತ್ತದೆಯೇ ಎನ್ನುವ ಜನರ ಪ್ರಶ್ನೆ, ಪ್ರಶ್ನೆಯಾಗಿಯೇ ಉಳಿದಿದೆ.
ಕಾವೇರಿ ಕಣಿವೆ ಭಾಗದಲ್ಲಿ ವಾಡಿಕೆಯಂತೆ ಮಳೆ ಆಗದೇ ಇರುವುದರಿಂದ ಕರ್ನಾಟಕಕ್ಕೆ ಪ್ರಾಧಿಕಾರದ ಸೂಚನೆಯಂತೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದ ಬಹುತೇಕ ತಾಲೂಕುಗಳನ್ನು ಸರ್ಕಾರ ಬರಪೀಡಿತ ಪ್ರದೇಶ ಎಂದು ಈಗಾಗಲೇ ಸಿದ್ದರಾಮಯ್ಯ ಸರ್ಕಾರ ಘೋಷಿಸಿದೆ. ಈ ವಿಚಾರ ಸರ್ವೋಚ್ಚ ನ್ಯಾಯಾಲಯಕ್ಕೂ ಗೊತ್ತಿದೆ, ಪ್ರಾಧಿಕಾರಕ್ಕೂ ಗೊತ್ತಿದೆ, ತಮಿಳುನಾಡು ಸರ್ಕಾರಕ್ಕೂ ಗೊತ್ತಿರದ ವಿಚಾರವೇನೂ ಅಲ್ಲ.

ಪ್ರಮುಖವಾಗಿ ಕನ್ನಡಿಗರನ್ನು ಕಾಡುತ್ತಿರುವ ಪ್ರಶ್ನೆ ಏನಂದರೆ, ಪ್ರಾಧಿಕಾರದ ಮತ್ತು ಸುಪ್ರೀಂಕೋರ್ಟ್ ಮುಂದೆ ಕರ್ನಾಟಕ ತಮ್ಮ ಸಮಸ್ಯೆಗಳನ್ನು ಸಾಕ್ಷಿ ಸಮೇತ ಹೇಳಲು ವಿಫಲವಾಯಿತೇ ಎನ್ನುವುದು. ಕಳೆದ ವಾರ ಪ್ರಾಧಿಕಾರದ ಸಭೆಯ ವೇಳೆ ತಮಿಳುನಾಡು ಅಧಿಕಾರಿಗಳು ಖುದ್ದಾಗಿ ದೆಹಲಿಯ ಕಚೇರಿಯಲ್ಲಿ ಇದ್ದರೆ, ನಮ್ಮ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಇದು ಎಲ್ಲೋ ನಮ್ಮ ಸರ್ಕಾರ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವೇನೋ ಎನ್ನುವ ಅನುಮಾನ ಜನಸಾಮಾನ್ಯರಲ್ಲಿ ಮೂಡುವಂತೆ ಮಾಡಿದೆ.
ಈ ಲೇಖನದಲ್ಲಿನ ಚಿತ್ರವನ್ನೊಮ್ಮೆ ನೋಡಿ.. ಎರಡು ದಿನಗಳ ಕೆಳಗಿನ ಕೃಷ್ಣರಾಜೇಂದ್ರ ಸಾಗರ (KRS Dam) ಅಣೆಕಟ್ಟಿನ ಚಿತ್ರವಿದು. ಮಳೆಗಾಲದ ಈ ವೇಳೆಯಲ್ಲೂ ಬೇಸಿಗೆಯನ್ನೂ ನಾಚಿಸುವಂತೆ ಅಣೆಕಟ್ಟು ಖಾಲಿಯಾಗುತ್ತಾ ಬರುತ್ತಿದೆ. ಹಾರಂಗಿ, ಕಬಿನಿ ಸೇರಿದಂತೆ ಕಾವೇರಿ ನದಿಯ ಇತರ ಅಣೆಕಟ್ಟಿನ ಚಿತ್ರಣವೂ ಇದಕ್ಕಿಂತ ಹೊರತಾಗಿ ಏನೂ ಇಲ್ಲ.
ಕಾವೇರಿ ಜಲಾಯನ ಪ್ರದೇಶಗಳಲ್ಲಿ ನೀರು ಯಥೇಚ್ಚವಾಗಿ ಇದ್ದಾಗ ತಮಿಳುನಾಡು ಕೇಳಿದ್ದಕ್ಕಿಂತೆ ಹೆಚ್ಚೇ ನೀರು ಹರಿಸಿದ ಉದಾಹರಣೆಗಳಿವೆ. ತಮಿಳುನಾಡು ರೈತರು ಕುರುವೈ ಬೆಳೆಗೆ ಕಾವೇರಿ ನೀರನ್ನೇ ಅವಲಂಬಿತರಾಗಿದ್ದಾರೆ ಎನ್ನುವುದು ಗೊತ್ತಿರುವ ವಿಚಾರ. ಆದರೆ, ನಮ್ಮಲ್ಲೇ ಈ ಪರಿಸ್ಥಿತಿ ಇದ್ದಾಗ ನೀರು ಎಲ್ಲಿಂದ ಬಿಡುವುದು ಎನ್ನುವ ವಸ್ತುಸ್ಥಿತಿಯನ್ನು ಸರ್ಕಾರ ವಾದಿಸಬೇಕಿತ್ತು.
ತಮಿಳುನಾಡಿಗೆ ಹದಿನೈದು ದಿನಗಳ ಕಾಲ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. 3,400 ಕ್ಯೂಸೆಕ್ ನೀರನ್ನು ಕರ್ನಾಟಕ ಬಿಡಲು ಆರಂಭಿಸಿದೆ. ಕುಡಿಯುವ ನೀರಿಗೆ ಸಂಪೂರ್ಣವಾಗಿ ಕಾವೇರಿ ನದಿಯನ್ನೇ ಅವಲಂಬಿಸಿರುವ ಬೆಂಗಳೂರು ಮಹಾನಗರಕ್ಕೆ ಇದೊಂದು ಎಚ್ಚರಿಕೆಯ ಗಂಟೆಯೇ ಸರಿ.
ಸೆಪ್ಟೆಂಬರ್ 26 ರಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ಮತ್ತೆ ಕಾವೇರಿ ನೀರು ಬಿಡುವ ಅರ್ಜಿ ವಿಚಾರಣೆಗೆ ಬರಲಿದೆ. ನಮ್ಮ ವಾದವನ್ನು ಇನ್ನಷ್ಟು ಬಲವಾಗಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ನೀರು ಕೇಳ್ತಾ ಇದ್ದೀರಲ್ವಾ, ಎಲ್ಲಿದೆ ನೀರು? ನೀವೇ ನೋಡಿ.. ಎಂದು ನ್ಯಾಯಾಲಯಕ್ಕೆ ಸರ್ಕಾರ ಮನವರಿಕೆ ಮಾಡಬೇಕಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications