Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?
ಬೆಂಗಳೂರು: ಕರ್ನಾಟಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುವ ವಿವಿಧ ವರ್ಗದ ಶಿಕ್ಷಕರ ವರ್ಗಾವಣೆಯಲ್ಲಿ ಮಹತ್ವ ಬದಲಾವಣೆಗಳನ್ನು ಮಾಡಲಾಗಿದೆ. ಅದಕ್ಕಾಗಿ 'ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ- 2026'ರ ಜಾರಿಗೆ ಸಂಬಂಧಿಸಿದಂತೆ 2026 ಏಪ್ರಿಲ್ 10ರಂದು ಅಧಿಸೂಚನೆ ಹೊರಡಿಸಿತ್ತು. ಈ ವಿಧೇಯಕಕ್ಕೆ ರಾಜ್ಯಪಾಲರು ಅನುಮತಿ ನೀಡಿದೆ. ಈ ಮೂಲಕ ಸರ್ಕಾರ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಬದಲಾವಣೆಯಿಂದ ಯಾರಿಗೆಲ್ಲ ಅನುಕೂಲ, ಯಾರು ಅರ್ಹರು, ವರ್ಗಾವಣೆ ಹೇಗೆ, ನಿಯಮಗಳು ಹೇಳುವುದೇನು?
ಶಿಕ್ಷಕರ ವರ್ಗಾವಣೆ ನಿಯಮಗಳಲ್ಲಿ ಬದಲಾವಣೆ ಆಗಿದೆ. ಶಾಲೆಗಳನ್ನು ಮೂರು ವರ್ಗಗಳಾಗಿ ವಿಂಗಡಿಸಿ, ತುರ್ತು ಸೇವಾ ಗುಂಪು ಎಂದು ಪರಿಗಣಿಸಿ ಶಿಕ್ಷಕರ ವರ್ಗಾವಣೆ ಸ್ವರೂಪದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿ ರಾಜ್ಯ ಪತ್ರಿಕೆ ಹೊರಡಿಸಿದೆ.

ಜಾರಿಯಾದ ವಿಧೇಯಕದಲ್ಲಿ ಏನೇನಿದೆ?
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಇತ್ತೀಚೆಗೆ ವಿಧಾನಸಭೆಯಲ್ಲಿ ನಡೆದ ಅಧಿವೇಶನ ವೇಳೆ 'ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ- 2026' ಮಸೂದೆ ಮಂಡಿಸಿತ್ತು. ಅದಕ್ಕೆ ರಾಜ್ಯಪಾಲ ಅಂತಿಮ ಅಂಕಿ ಬಾಕಿ ಇತ್ತು. ಅದೀಗ ನೆರವೇರಿದ್ದು, ವಿಧೇಯಕ ಜಾರಿಗೊಳಿಸಲಾಗಿದೆ.
12 ವರ್ಷ ಸೇವೆ, ಕೌನ್ಸೆಲಿಂಗ್ ಮಾಡಿ ವರ್ಗಾವಣೆ
ರಾಜ್ಯ ಸರ್ಕಾರದ ಪ್ರಕಾರ, ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯ, ಪಿಎಂಶ್ರೀಗಳು ಎಂದು ಮೂರು ವರ್ಗಗಳನ್ನಾಗಿದೆ ಮಾಡಲಾಗಿದೆ. ಇಲ್ಲಿರುವ ಶಿಕ್ಷಕರು ಕನಿಷ್ಠ 12 ವರ್ಷ ಒಂದೇ ಕಡೆ ಕರ್ತವ್ಯ ನಿರ್ವಹಿಸಿರಬೇಕು. ಬಳಿಕ ಅವರಿಗೆ ಕೌನ್ಸೆಲಿಂಗ್ ನಡೆಸುವ ಮೂಲಕ ವರ್ಗಾವಣೆಗೆ ಅವಕಾಶ ದೊರೆಯಲಿದೆ ಎಂದು ಸರ್ಕಾರ ತಿಳಿಸಿದೆ.
ಇನ್ನೂ ಬೋಧಕೇತರ ಹುದ್ದೆಗಳಿಗೆ ಶಿಕ್ಷಕರ ನೇಮಕಕ್ಕೆ ನಿರ್ಬಂಧ ವಿಧಿಸಲಾಗಿದೆ. ಗರ್ಭಿಣಿ ಅಥವಾ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿರುವ ಶಿಕ್ಷಕಿಯರು ಬಯಸಿದ ಸ್ಥಳ ಆಯ್ಕೆಗೆ ಆದ್ಯತೆ ನೀಡಲಾಗುತ್ತದೆ. ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರ ಹಿತ ಕಾಯುವುದೇ ಈ ವಿಧೇಯಕದ ಉದ್ದೇಶವಾಗಿದೆ.
ವರ್ಗಾವಣೆ ನಿಯಮದ ಪ್ರಮುಖಾಂಶಗಳು ಹೀಗಿವೆ
* ನಿರ್ಣಾಯಕ ಹುದ್ದೆಗಳು (ಸಿಎ) ಎಂದರೆ ಮತ್ತು ಪದವಿ-ಪೂರ್ವ ಕಾಲೇಜಿನ ಉಪನ್ಯಾಸಕರನ್ನೊಳಗೊಂಡಂತೆ ಈ ಮುಂದಿನ ಪ್ರವರ್ಗಗಳ ಎಲ್ಲಾ ಬೋಧಕ ಹುದ್ದೆಗಳನ್ನು ಒಳಗೊಳ್ಳುವುದು.
* ಪ್ರವರ್ಗ 1: ಮುಖ್ಯೋಪಾಧ್ಯಾಯರು ಅಥವಾ ಉಪ-ಪ್ರಾಂಶುಪಾಲರನ್ನು ಹೊರತುಪಡಿಸಿ ಕರ್ನಾಟಕ ಪಬ್ಲಿಕ್ ಶಾಲೆಗಳು, ಆದರ್ಶ ವಿದ್ಯಾಲಯ, ಪಿಎಂ ಶ್ರೀ ಶಾಲೆಗಳು.
* ಪ್ರವರ್ಗ 2: ಮುಖ್ಯೋಪಾಧ್ಯಾಯರು ಅಥವಾ ಉಪ-ಪ್ರಾಂಶುಪಾಲರನ್ನು ಹೊರತುಪಡಿಸಿ, 250 ವಿದ್ಯಾರ್ಥಿಗಳನ್ನು ಮೀರಿದ ಅಥವಾ ಕಾಲಕಾಲಕ್ಕೆ ಸರ್ಕಾರವು ಅಧಿಸೂಚಿಸಲಾದ ದಾಖಲಾತಿ ಮಿತಿಯ ಪ್ರಕಾರ ದಾಖಲಾತಿಯನ್ನು ಹೊಂದಿರುವ ಎಲ್ಲಾ ಇತರ ಶಾಲೆಗಳು ಹಾಗೂ ಸರ್ಕಾರಿ ಪದವಿ-ಪೂರ್ವ ಕಾಲೇಜುಗಳು.
* ಪ್ರವರ್ಗ 3: ಪ್ರವರ್ಗ 1 ಮತ್ತು 2ರಲ್ಲಿನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಅಥವಾ ಉಪ-ಪ್ರಾಂಶುಪಾಲರು ಅಥವಾ ಸರ್ಕಾರಿ ಪದವಿ-ಪೂರ್ವ ಕಾಲೇಜುಗಳ ಪ್ರಾಂಶುಪಾಲರು.
* ಅನುಸೂಚಿಯಲ್ಲಿ ತಿಳಿಸಿದಂತೆ ನಿರ್ದಿಷ್ಟ ಪಡಿಸಿದ ಹುದ್ದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾತ್ರ ನಡೆಸಬೇಕು. ಅದಕ್ಕಾಗಿ ಶಾಲೆಗಳು/ಕಾಲೇಜುಗಳಲ್ಲಿನ ಸ್ಥಾನಿಕ (incumbent) ಪ್ರಸ್ತುತ ವೃಂದದಲ್ಲಿ ಸಲ್ಲಿಸಿರುವ ಕನಿಷ್ಠ ಸೇವಾವಧಿಯು ಹನ್ನೆರಡು ನಿರಂತರ ವರ್ಷಗಳಾಗಿರತಕ್ಕದ್ದು ಎಂದು ಷರತ್ತನ್ನು ಸರ್ಕಾರ ವಿಧಿಸಿದೆ.
-
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ














Click it and Unblock the Notifications