Karnataka TET Exam: ಶಿಕ್ಷಕರ ಅರ್ಹತಾ ಪರೀಕ್ಷೆಗೆ ಶಿಕ್ಷಣ ಇಲಾಖೆ ದಿನಾಂಕ ಪ್ರಕಟ
ಬೆಂಗಳೂರು, ಅಕ್ಟೋಬರ್ 19: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 7ರಂದು ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಹಾಗಾದ್ರೆ ಎಲ್ಲಿವರೆಗೂ ಹಾಗೂ ಫಲಿತಾಂಶ ಪ್ರಕಟ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇಲಾಖಾಯು ಈ ಬಗ್ಗೆ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 31ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಅಭ್ಯರ್ಥಿಗಳು ಅಕ್ಟೋಬರ್ 23ರಿಂದ ನವೆಂಬರ್ 9ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅದೇ ವೇಳೆ ಕಲ್ಯಾಣ ಕರ್ನಾಟಕ ಪ್ರದೇಶ ಹಾಗೂ ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದೆ.

ಪರೀಕ್ಷೆ ಹಾಗೂ ಫಲಿತಾಂಶ ದಿನಾಂಕಗಳ ವಿವರ
* ಪರೀಕ್ಷೆ - ಡಿಸೆಂಬರ್ 7
* ಅರ್ಜಿ ಸಲ್ಲಿಕೆ - ಅಕ್ಟೋಬರ್ 23ರಿಂದ ನವೆಂಬರ್ 9ರ ವರೆಗೆ
* ಫಲಿತಾಂಶ - ಡಿಸೆಂಬರ್ 31
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು ಶಿಕ್ಷಣ ಇಲಾಖೆಯ https://schooleducation.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಅರ್ಜಿಯಲ್ಲಿ ಅಗತ್ಯ ಇರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ಬಳಿಕ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಹಾಗೂ ಪೂರ್ಣ ವಿವರಗಳನ್ನು ಒಳಗೊಂಡ ಅರ್ಜಿಯ ಕಂಪ್ಯೂಟರ್ ಜನರೇಟೆಡ್ ಪ್ರತಿಯ ಪ್ರಿಂಟ್ಔಟ್ ಪಡೆದುಕೊಳ್ಳಬೇಕು.
ಪರೀಕ್ಷೆ ದಿನಾಂಕಗಳ ವಿವರ
ಪತ್ರಿಕೆ-1: - 07/12/2025, ಭಾನುವಾರ
ಸಮಯ: - ಬೆಳಗ್ಗೆ 9.30 ರಿಂದ 12.00 ಗಂಟೆವರೆಗೆ
ಪತ್ರಿಕೆ-2: ದಿನಾಂಕ-07/12/2025, ಭಾನುವಾರ
ಸಮಯ : ಮಧ್ಯಾಹ್ನ 2ರಿಂದ 4.30 ಗಂಟೆವರೆಗೆ
ವರ್ಗವಾರು ಪರೀಕ್ಷಾ ಶುಲ್ಕಗಳ ವಿವರ
ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿ: ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ-700 ರೂಪಾಯಿ, ಪತ್ರಿಕೆ-1 ಹಾಗೂ ಪತ್ರಿಕೆ-2- 1000 ರೂಪಾಯಿ ಪಾವತಿ ಮಾಡಬೇಕು.
ಪ.ಜಾತಿ/ಪ.ವರ್ಗ/ಪ್ರವರ್ಗ-1: ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ- 350 ರೂಪಾಯಿ, ಪತ್ರಿಕೆ-1 ಹಾಗೂ ಪತ್ರಿಕೆ 2- 500 ರೂಪಾಯಿ, (ವಿಶೇಷ ಚೇತನ/ದಿವ್ಯಾಂಗ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇರುತ್ತದೆ.)
ಅಭ್ಯರ್ಥಿಗಳು KARTET-2025 ಪರೀಕ್ಷೆಯ ಪ್ರವೇಶ ಪತ್ರವನ್ನು ಡಿಸೆಂಬರ್ 1 ರಿಂದ ಡಿಸೆಂಬರ್ 7ರ ವರೆಗೆ ಇಲಾಖಾ ವೆಬ್ಸೈಟ್ನಲ್ಲಿ ಲಾಗ್ ಇನ್ ಆಗಿ ಪಡೆದುಕೊಳ್ಳಬಹುದು. ಅಭ್ಯರ್ಥಿಗಳ ಮಾಹಿತಿ, ಭಾವಚಿತ್ರ ಹಾಗೂ ಅವರ ಸಹಿಗೆ ಸಂಬಂಧಿಸಿದಂತೆ ವ್ಯತ್ಯಾಸ ಇದ್ದರೆ, ಸರಿಪಡಿಸಿಕೊಳ್ಳಲು ಅವಕಾಶ ಇರುವುದಿಲ್ಲ.
ರಾಷ್ಟ್ರೀಯ ಶಿಕ್ಷಣ ಶಿಕ್ಷಕರ ಪರಿಷತ್ 1ರಿಂದ 8ನೇ ತರಗತಿಗಳ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಕನಿಷ್ಠ ಅರ್ಹತೆಗಳನ್ನು ನಿಗದಿಪಡಿಸಿದೆ. ಅದರಂತೆಯೇ ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು NCTEಯಿಂದ ರೂಪಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರ್ಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications